ಅನ್ನಭಾಗ್ಯ ಯೋಜನೆ ಅಕ್ಕಿಯಲ್ಲಿ ಪ್ಲಾಸ್ಟಿಕ್ ಪತ್ತೆ
Team Udayavani, Oct 8, 2020, 10:05 PM IST
ಮಂಡ್ಯ: ಸರ್ಕಾರ ನೀಡುವ ಅನ್ನಭಾಗ್ಯ ಯೋಜನೆಯ ಅಕ್ಕಿಯಲ್ಲಿ ಪ್ಲಾಸ್ಟಿಕ್ ಪತ್ತೆಯಾಗಿರುವ ಘಟನೆ ಮದ್ದೂರು ತಾಲ್ಲೂಕಿನ ಚಿಕ್ಕರಸಿನಕೆರೆ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದಿದೆ.
ಸಹಕಾರ ಸಂಘದಿಂದ ಅನ್ನಭಾಗ್ಯ ಯೋಜನೆಯ ಬಿಪಿಎಲ್ ಕಾರ್ಡುದಾರರಿಗೆ ಅಕ್ಕಿ ವಿತರಣೆ ಮಾಡಲಾಗಿದೆ. ಅದರಂತೆ ಗುರುದೇವರಹಳ್ಳಿ ಕಾಲೋನಿಯ ನಿವಾಸಿಗಳಾದ ಹೋಟೆಲ್ ಪುಟ್ಟೇಗೌಡ, ಮಧು, ಸತ್ಯಮ್ಮ ಸೇರಿದಂತೆ ನೂರಾರು ಮಂದಿಗೆ ಅಕ್ಕಿ ವಿತರಣೆ ಮಾಡಲಾಗಿದೆ. ಅಕ್ಕಿಯನ್ನು ತೆಗೆದುಕೊಂಡು ಹೋಗಿದ್ದ ನಿವಾಸಿಗಳಿಗೆ ಅಚ್ಚರಿ ಕಾದಿತ್ತು. ಮನೆಗೆ ಹೋಗಿ ನೋಡಲಾಗಿ ಪ್ಲಾಸ್ಟಿಕ್ ರೀತಿಯ ಅಕ್ಕಿಕಾಳುಗಳು ಕಂಡು ಬಂದಿದೆ.
ತಕ್ಷಣವೇ ಗ್ರಾಮಸ್ಥರು ಆಹಾರ ಇಲಾಖೆಯ ರಾಜಣ್ಣ ಎಂಬುವರಿಗೆ ವಿಷಯ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಅಧಿಕಾರಿ ಪರಿಶೀಲಿಸಿ ಅಕ್ಕಿಯ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲು ತೆಗೆದುಕೊಂಡು ಹೋಗಿದ್ದು, ಅಕ್ಕಿ ಬಳಸದಂತೆ ತಿಳಿಸಿದ್ದಾರೆ.
ನಂತರ ಕೃಷಿ ಪತ್ತಿನ ಸಹಕಾರ ಸಂಘಕ್ಕೂ ಭೇಟಿ ನೀಡಿದ ಅಧಿಕಾರಿಗಳು ಅಕ್ಕಿಯನ್ನು ಪರಿಶೀಲನೆ ನಡೆಸಿದರು. ಸಹಕಾರ ಸಂಘದ ಅಧ್ಯಕ್ಷ ಸಿದ್ದೇಗೌಡ, ನಿರ್ದೇಶಕರ ಸಮ್ಮುಖದಲ್ಲಿ ಪರಿಶೀಲನೆ ನಡೆದಿದ್ದು, ವಿತರಿಸದಂತೆ ಸೂಚಿಸಲಾಗಿದೆ. ಈ ಹಿಂದೆಯೂ ಜಿಲ್ಲೆಯಲ್ಲಿ ವಿವಿಧೆಡೆ ಪ್ಲಾಸ್ಟಿಕ್ ಅಕ್ಕಿ ಪತ್ತೆಯಾಗಿರುವ ಘಟನೆಗಳು ನಡೆದಿದ್ದನ್ನು ಸ್ಮರಿಸಬಹುದು.
ರೈತಸಂಘ ಕಿಡಿ
ಚಿಕ್ಕರಸಿನಕೆರೆ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಪಡಿತರದಾರರಿಗೆ ವಿತರಣೆ ಮಾಡಿರುವ ಅಕ್ಕಿಯಲ್ಲಿ ಪ್ಲಾಸ್ಟಿಕ್ ಪತ್ತೆಯಾಗಿರುವ ಬಗ್ಗೆ ವಿಷಯ ತಿಳಿಯುತ್ತಿದ್ದಂತೆ ಗ್ರಾಮಕ್ಕೆ ಭೇಟಿ ನೀಡಿದ ರೈತಸಂಘದ ಜಿಲ್ಲಾಧ್ಯಕ್ಷ ಬೋರಾಪುರ ಶಂಕರೇಗೌಡ, ಅಕ್ಕಿಯನ್ನು ಪರಿಶೀಲಿಸಿದರು. ನಂತರ ನಾಗರೀಕ ಆಹಾರ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕರಿಗೆ ದೂರವಾಣಿ ಮೂಲಕ ಕರೆ ಮಾಡಿ ಕೂಡಲೇ ಪ್ಲಾಸ್ಟಿಕ್ ಅಕ್ಕಿ ಪತ್ತೆಯಾಗಿರುವ ಬಗ್ಗೆ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ