ಸಿಡಿ ಹೆಸರಿನ ಮೌಢ್ಯಾಚರಣೆಗೆ ಪೊಲೀಸರು ತಡೆ


Team Udayavani, Feb 9, 2020, 3:29 PM IST

mandya-tdy-1

ಭಾರತೀನಗರ: ಭಕ್ತರನ್ನು ಕಂಬಕ್ಕೆ ಕಟ್ಟಿ ರಥ ಎಳೆಯುವ ಐತಿಹಾಸಿಕ ಏಳೂರಮ್ಮ ಸಿಡಿ ಎಂಬ ಮೌಢ್ಯಾಚರಣೆ ಮಾಡುವುದನ್ನು ತಡೆಯುವ ಮೂಲಕ ಪೊಲೀಸರು ದಿಟ್ಟತನ ಪ್ರದರ್ಶಿಸಿದ್ದಾರೆ.

ಈ ಸಂಬಂಧ ಗ್ರಾಮಸ್ಥರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ. ಬಳಿಕ ಪೊಲೀಸರು, ಸಿಡಿಕಂಬಕ್ಕೆ ಭಕ್ತರನ್ನು ಕಟ್ಟುವ ಬದಲು ಹೊಂಬಾಳೆ ಅಥವಾ ಗೊಂಬೆಯನ್ನು ಕಟ್ಟಿ ಎಳೆಯಬೇಕು. ಇಲ್ಲದಿದ್ದರೆ ಇಂತಹ ಮೌಢ್ಯಾಚರಣೆ ನಡೆಯಲು ಬಿಡುವುದಿಲ್ಲ ಎಂದು ಪೊಲೀಸರು ತಡೆದರು.

ಸಿಡಿ ಉತ್ಸವ ರದ್ದು: ಹೀಗಾಗಿ ಪೊಲೀಸರ ಭಾರೀ ವಿರೋಧದಿಂದಾಗಿ ದೊಡ್ಡರಸೀಕೆರೆಯಲ್ಲಿ ಶುಕ್ರವಾರ ರಾತ್ರಿ 10ಕ್ಕೆ ನಡೆಯಬೇಕಿದ್ದ ಏಳೂರಮ್ಮನ ಸಿಡಿ ಉತ್ಸವ ರದ್ದುಗೊಂಡಿತು. 75 ಅಡಿಯುಳ್ಳ ತೇರಿನ ಕಂಬಕ್ಕೆ ಮನುಷ್ಯನನ್ನು ಕೊಕ್ಕೆಗಳಿಂದ ನೇತು ಹಾಕಿ, ಎಳೆಯುವ ಸಂಪ್ರದಾಯ ನಡೆದುಕೊಂಡು ಬಂದಿತ್ತು. ಹರಕೆ ಹೊತ್ತ ಭಕ್ತರು, ಸಿಡಿ ಆಡುವ ಮೂಲಕ ಹರಕೆ ತೀರಿಸುತ್ತಿದ್ದರು.

ಪೊಲೀಸರೊಂದಿಗೆ ಮಾತಿನ ಚಕಮಕಿ: ರಾಜ್ಯದಲ್ಲಿ ಮೌಡ್ಯ ನಿಷೇಧ ಕಾಯ್ದೆ ಜಾರಿಯಾಗಿದ್ದರಿಂದ ಕಳೆದ ನಾಲ್ಕು ದಿನಗಳ ಹಿಂದೆ ಗ್ರಾಮದಲ್ಲಿ ಸಭೆ ನಡೆಸಿದ ತಾಲೂಕು ಆಡಳಿತ ಅಧಿಕಾರಿಗಳು ಮತ್ತು ಪೊಲೀಸರು ಸಿಡಿ ಕಂಬಕ್ಕೆ ಮನುಷ್ಯರನ್ನು ತೂಗು ಹಾಕಿ ಉತ್ಸವ ನಡೆಸುವಂತಿಲ್ಲ. ಹೊಂಬಾಳೆ ಅಥವಾ ಗೊಂಬೆಯನ್ನು ಕಟ್ಟಿ ಸಿಡಿ ರಥವನ್ನು ಎಳೆಯಬಹುದು ಎಂದು ಸೂಚಿಸಿದ್ದರು. ಆದರೆ ಶುಕ್ರವಾರ ರಾತ್ರಿ 10ಕ್ಕೆ ಸಿಡಿ ಆಚರಣೆಗೆ ಗ್ರಾಮದ ಮುಖಂಡರು ಮುಂದಾದಾಗ ಪೊಲೀಸರು ತಡೆಯೊಡ್ಡಿದ್ದರು. ಈ ವೇಳೆ ಗ್ರಾಮಸ್ಥರು ಹಾಗೂ ಪೊಲೀಸರ ನಡುವೆ ಮಾತಿನ ರಾತ್ರಿ 1 ಗಂಟೆವರೆಗೂ ಮಾತಿನ ಚಕಮಕಿ ನಡೆಯಿತು.

ನಾಲ್ಕು ದಿನದ ಹಿಂದೆ ಸಿಡಿ ಆಚರಿಸದಂತೆ ತಿಳಿಸಿದ್ದೀರಿ. ಮೊದಲೆ ನಮಗೆ ಮಾಹಿತಿ ನೀಡಿದ್ದರೆ, ನ್ಯಾಯಾಲಯಕ್ಕೆ ಹೋಗಿ ತಡೆಯಾಜ್ಞೆ ತರುತ್ತಿದ್ದೆವು. ಇಲ್ಲವೇ ಅನುಮತಿ ಪಡೆಯುತ್ತಿದ್ದೆವು. ನಮ್ಮ ಸಂಪ್ರದಾಯಕ್ಕೆ ಅಡ್ಡಿ ಮಾಡುತ್ತಿದ್ದೀರಿ ಎಂದು ಯಜಮಾನರು ಮತ್ತು ಭಕ್ತರು ಪೊಲೀಸರಿಗೆ ಕಿಡಿಕಾರಿದರು.

ಸಿಡಿ ಆಚರಣೆಗೆ ಭಕ್ತರು ಪಟ್ಟುಹಿಡಿದ ಹಿನ್ನೆಲೆಯಲ್ಲಿ ಹೆಚ್ಚಿನ ಪೊಲೀಸರನ್ನು ಗ್ರಾಮಕ್ಕೆ ಕರೆಯಿಸಿಕೊಳ್ಳಲಾಯಿತು. ಯಾವುದೇ ಕಾರಣಕ್ಕೂ ಮನುಷ್ಯರನ್ನು ತೂಗು ಹಾಕಿ, ಸಿಡಿ ಆಚರಿಸಿಲು ಬಿಡುವುದಿಲ್ಲ. ಕಾನೂನು ಪಾಲಿಸಲು ಮುಂದಾಗಿ ಎಂದು ಎಚ್ಚರಿಕೆ ನೀಡಿದರು. ತರುವಾಯ ಯಜಮಾನರು ಕುಪಿತಗೊಂಡು ರಾತ್ರಿ 1 ಸಮಯದಲ್ಲಿ ಸಿಡಿಯನ್ನು ಸ್ಥಳದಲ್ಲೇ ಕೈಬಿಟ್ಟರು. ಇದರಿಂದ ಭಕ್ತರು ನಿರಾಶೆಗೊಂಡು ಹಿಂತಿರುಗಿದರು. ನಂತರ ಇತರೆ ಧಾರ್ಮಿಕ ಪೂಜೆಗಳನ್ನು ನೇರವೇರಿಸಿದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.