ಚುಕ್ಕಾಣಿ ಹಿಡಿಯಲು ಆಪರೇಷನ್‌ಗೆ ಸಜ್ಜು

ಅತಿ ಹೆಚ್ಚು ಗ್ರಾಪಂ ಗದ್ದುಗೆ ಹಿಡಿಯಲು ಜೆಡಿಎಸ್‌, ಕಾಂಗ್ರೆಸ್‌, ಬಿಜೆಪಿ ಲೆಕ್ಕಾಚಾರ

Team Udayavani, Jan 1, 2021, 4:48 PM IST

ಚುಕ್ಕಾಣಿ ಹಿಡಿಯಲು ಆಪರೇಷನ್‌ಗೆ ಸಜ್ಜು

ಮಂಡ್ಯ: ಕಳೆದ ಒಂದು ತಿಂಗಳಿನಿಂದ ನಡೆದ ಹಳ್ಳಿ ಪಂಚಾಯ್ತಿ ಎಂಬ ಗ್ರಾಮೀಣ ಚುನಾವಣೆಗೆ ತೆರೆ ಬಿದ್ದಿದ್ದು, ಪಕ್ಷದ ಚಿಹ್ನೆಗಳಲ್ಲಿ ನಡೆಯದಿದ್ದರೂ, ಪಕ್ಷದ ಬೆಂಬಲಿತರಾಗಿಯೇ ಚುನಾವಣೆ ಎದುರಿಸಿದ್ದಾರೆ. ಅದಕ್ಕಾಗಿ ಅಧಿಕಾರ ಹಿಡಿಯುವ ಹೈಡ್ರಾಮಕ್ಕೆ ರಾಜಕೀಯ ಪಕ್ಷಗಳು ಸಜ್ಜಾಗಿವೆ.

ನಮ್ಮ ಪಕ್ಷವೇ ಹೆಚ್ಚು ಸ್ಥಾನಗಳನ್ನು ಗೆದ್ದಿದ್ದೇವೆ ಎಂದು ಕಾಂಗ್ರೆಸ್‌, ಜೆಡಿಎಸ್‌ ಹಾಗೂ ಬಿಜೆಪಿ ಪಕ್ಷಗಳು ಬೀಗುತ್ತಿವೆ.ಅಧಿಕಾರದ ಗದ್ದುಗೆ ಹಿಡಿಯಲು ಬಿಎಸ್‌ಪಿ ಹಾಗೂ ಪಕ್ಷೇತರಸದಸ್ಯರನ್ನು ಸೆಳೆಯಲು ಮೂರು ಪಕ್ಷಗಳು ನಿರತವಾಗಿವೆ. ಗ್ರಾಮ ಪಂಚಾಯಿತಿಯ ಆಡಳಿತದ ಚುಕ್ಕಾಣಿ ಹಿಡಿಯಲು ಇನ್ನಿಲ್ಲದ ಕಸರತ್ತು ಆರಂಭಿಸಿವೆ.

3792 ಸದಸ್ಯರ ಆಯ್ಕೆ: ಜಿಲ್ಲೆಯ ಒಟ್ಟಾರೆ 3797 ಸದಸ್ಯ ಸ್ಥಾನಗಳಲ್ಲಿ ಮತದಾನಕ್ಕೂ ಮುನ್ನವೇ ಜಿಲ್ಲೆಯಾದ್ಯಂತ 548ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿತ್ತು. ಉಳಿದ 3244 ಸ್ಥಾನಗಳಿಗೆ ಮತದಾನ ನಡೆದಿತ್ತು. ಒಟ್ಟು 3792 ಸದಸ್ಯರು ಆಯ್ಕೆಯಾಗಿದ್ದಾರೆ.

ಮಂಡ್ಯ, ಮದ್ದೂರು ಹಾಗೂ ಪಾಂಡವಪುರ ತಾಲೂಕಿನಲ್ಲಿ ಜೆಡಿಎಸ್‌ ಬೆಂಬಲಿತರು ಹೆಚ್ಚು ಮಂದಿ ಆಯ್ಕೆಯಾಗಿದ್ದರೆ, ಮಳವಳ್ಳಿಯಲ್ಲಿ ಕಾಂಗ್ರೆಸ್‌ ಬೆಂಬಲಿತ ಮುನ್ನಡೆ ಸಾಧಿಸಿದೆ.ಉಳಿದಂತೆ ನಾಗಮಂಗಲ, ಶ್ರೀರಂಗಪಟ್ಟಣ ಕೈ-ದಳ ಸಮಬಲಬಂದಿದ್ದು, ಕೆ.ಆರ್‌.ಪೇಟೆಯಲ್ಲಿ 10ರಿಂದ 12 ಸ್ಥಾನಗಳುಜೆಡಿಎಸ್‌ ಬೆಂಬಲಿತರು ಗೆಲುವು ಸಾಧಿಸಿದ್ದಾರೆ ಎಂದು ಅಂದಾಜಿಸಲಾಗಿದೆ.

ಹೊಂದಾಣಿಕೆ ಸೂತ್ರಕ್ಕೆ ಜೈ: ಮೂರು ಪಕ್ಷಗಳು ತಮ್ಮ ಬೆಂಬಲಿತಸದಸ್ಯರ ಮೂಲಕ ಗ್ರಾಮ ಪಂಚಾಯಿತಿಗಳಲ್ಲಿಅಧಿಕಾರ ಹಿಡಿಯಲು ಮುಂದಾಗಿದ್ದು,ಕೆಲವೊಂದು ಗ್ರಾಮ ಪಂಚಾಯಿತಿಗಳಲ್ಲಿಬೆಂಬಲಿತ ಸದಸ್ಯ ಸ್ಥಾನಗಳ ಸಂಖ್ಯೆಕಡಿಮೆ ಇದ್ದರೆ, ಬಿಜೆಪಿ, ಕಾಂಗ್ರೆಸ್‌ಹಾಗೂ ಜೆಡಿಎಸ್‌ ಸೇರಿದಂತೆ ಪಕ್ಷೇತರ ಸದಸ್ಯರಹೊಂದಾಣಿಕೆಯಿಂದ ಅಧಿಕಾರ ಹಿಡಿಯಲು ಮುಂದಾಗಿವೆ.

ಬಹುತೇಕ ಕಡೆ ಮೈತ್ರಿ: ಮೇಲುಕೋಟೆ, ಕೆ.ಆರ್‌.ಪೇಟೆ ತಾಲೂಕುಗಳ ಕೆಲವು ಗ್ರಾಪಂಗಳಲ್ಲಿ ಜೆಡಿಎಸ್‌, ಕಾಂಗ್ರೆಸ್‌ ಮೈತ್ರಿ ಮಾಡಿಕೊಳ್ಳಲಾಗಿದೆ. ಅದರಂತೆ ಕೆಲಕ್ಷೇತ್ರಗಳಲ್ಲಿ ಜೆಡಿಎಸ್‌ ಹಾಗೂ ಬಿಜೆಪಿ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿವೆ.ಸುಲಭ ಗೆಲುವಿಗೆ ರಹದಾರಿ: ಹೆಚ್ಚು ಗ್ರಾಮಪಂಚಾಯಿತಿಗಳಲ್ಲಿ ತಮ್ಮ ಬೆಂಬಲಿತ ಸದಸ್ಯರ ಮೂಲಕಅಧಿಕಾರ ಹಿಡಿದರೆ, ಮುಂದಿನ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿಗಳಲ್ಲಿ ಹೆಚ್ಚು ಸ್ಥಾನಗಳನ್ನು ಸುಲಭವಾಗಿ ಗೆಲ್ಲಬಹುದು ಎಂಬ ಲೆಕ್ಕಾಚಾರ ಮೂರು ಪಕ್ಷಗಳಲ್ಲಿನಡೆಯುತ್ತಿದೆ. ಅಲ್ಲದೆ, ಮುಂದಿನ ವಿಧಾನಸಭೆ ಚುನಾವಣೆಗೂ ಇದು ಸಹಕಾರಿಯಾಗಲಿದೆ ಎಂಬುದು ನಾಯಕರ ನಿರೀಕ್ಷೆಯಾಗಿದೆ.

ಆಯ್ಕೆಯಾದವರ ಮೀಸಲಾತಿ :  ಜಿಲ್ಲೆಯಲ್ಲಿ ಒಟ್ಟು 3792 ಸದಸ್ಯರು ಆಯ್ಕೆಯಾಗಿದ್ದಾರೆ. ಇದರಲ್ಲಿ ಪರಿಶಿಷ್ಟ ಜಾತಿ 563, ಪರಿಶಿಷ್ಟ ಪಂಗಡ 230, ಹಿಂದುಳಿದ ವರ್ಗ (ಎ) 821,ಹಿಂದುಳಿದ ವರ್ಗ(ಬಿ) 207 ಹಾಗೂ ಸಾಮಾನ್ಯ1971 ಮಂದಿ ಆಯ್ಕೆಯಾಗಿದ್ದಾರೆ. ಇದರಲ್ಲಿಪುರುಷ ಸದಸ್ಯರು 1841 ಹಾಗೂ ಮಹಿಳಾಸದಸ್ಯರು 1951 ಮಂದಿ ಆಯ್ಕೆಯಾಗಿದ್ದಾರೆ.

ಜಿಲ್ಲೆಯಲ್ಲಿ ಸಾಂಪ್ರದಾಯಿಕ ಎದುರಾಳಿಗಳಾಗಿದ್ದ ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳ ನಡುವೆ ಬಿಜೆಪಿ ಈ ಬಾರಿ ಕಮಾಲ್‌ ಮಾಡಿದೆ. 3792 ಸದಸ್ಯ ಸ್ಥಾನಗಳ ಪೈಕಿ ಕೆ.ಆರ್‌.ಪೇಟೆ, ಮದ್ದೂರು ಸೇರಿದಂತೆ 4 ತಾಲೂಕುಗಳಲ್ಲಿ ಸುಮಾರು 800ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಕಳೆದ ಚುನಾವಣೆಗಳಿಗೆ ಹೋಲಿಸಿದರೆ, ಗ್ರಾಪಂ ಚುನಾವಣೆಯಲ್ಲಿ ಉತ್ತಮ ಸಾಧನೆ ಮಾಡಿದೆ. ಕೆ.ಜೆ.ವಿಜಯ್‌ಕುಮಾರ್‌, ಬಿಜೆಪಿ ಜಿಲ್ಲಾಧ್ಯಕ್ಷ

ಜಿಲ್ಲೆಯಲ್ಲಿ ಕಾಂಗ್ರೆಸ್‌ ಪ್ರಬಲವಾಗಿದ್ದು, ಸುಮಾರು 1600ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಬಹುತೇಕ ಗ್ರಾಪಂಗಳಲ್ಲಿ ಅಧಿಕಾರ ಹಿಡಿಯಲಿದೆ. ಜಿಲ್ಲೆಯ ಮತದಾರರು ಕಾಂಗ್ರೆಸ್‌ ಹಿಡಿದಿದ್ದಾರೆ ಎಂಬುದು ಸಾಭೀತಾಗಿದೆ. ಸಿ.ಡಿ.ಗಂಗಾಧರ್‌, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ

ಜಿಲ್ಲೆಯಲ್ಲಿ ಜೆಡಿಎಸ್‌ ಭದ್ರಕೋಟೆ ಎಂಬುದು ಮತ್ತೂಮ್ಮೆ ಸಾಭೀತಾಗಿದೆ. ಎಲ್ಲ ತಾಲೂಕುಗಳಲ್ಲಿ ಸುಮಾರು 155ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿಗಳಲ್ಲಿ ನಮ್ಮ ಪಕ್ಷದ ಬೆಂಬಲಿತರೇ ಹೆಚ್ಚು ಗೆಲುವು ಸಾಧಿಸಿದ್ದು, ಬಹುತೇಕ ಗ್ರಾಮ ಪಂಚಾಯಿತಿಗಳಲ್ಲಿ ಅಧಿಕಾರ ಹಿಡಿಯಲಿದ್ದೇವೆ. ಡಿ.ರಮೇಶ್‌, ಜೆಡಿಎಸ್‌ ಜಿಲ್ಲಾಧ್ಯಕ್ಷ

 

-ಎಚ್‌.ಶಿವರಾಜು

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.