ಕೆಆರ್ಎಸ್ ಬೃಂದಾವನದಲ್ಲಿ ಮತ್ತೆ ಚಿರತೆಯೊಂದಿಗೆ ಮುಳ್ಳುಹಂದಿಯೂ ಪ್ರತ್ಯಕ್ಷ !
ಅಧಿಕಾರಿಗಳು ಹಾಗೂ ಸಿಬಂದಿಗಳಲ್ಲಿ ಆತಂಕ
Team Udayavani, Nov 19, 2022, 8:05 PM IST
ಮಂಡ್ಯ: ವಿಶ್ವ ಪ್ರಸಿದ್ಧ ಕೆಆರ್ಎಸ್ ಅಣೆಕಟ್ಟೆ ಮತ್ತು ಬೃಂದಾವನ ಉದ್ಯಾನವನದಲ್ಲಿ ಮತ್ತೆ ಚಿರತೆಯೊಂದಿಗೆ ಮುಳ್ಳುಹಂದಿ ಕಾಣಿಸಿಕೊಂಡಿದ್ದು ಅಧಿಕಾರಿಗಳು ಹಾಗೂ ಸಿಬ್ಬಂದಿಗಳಲ್ಲಿ ಆತಂಕ ಸೃಷ್ಟಿಸಿದೆ.
ಶುಕ್ರವಾರ ರಾತ್ರಿ ಅಣೆಕಟ್ಟಿನ ನಾರ್ಥ್ ಗೇಟ್ನ ಉದ್ಯಾನದ ಬಳಿ ಚಿರತೆ ಹಾಗೂ ಮುಳ್ಳುಹಂದಿ ಕಾಣಿಸಿಕೊಳ್ಳುವ ಜೊತೆಗೆ ಒಂದಕ್ಕೊಂದು ಜಗಳವಾಡಿರುವ ದೃಷ್ಯ ಸಿಸಿ ಟಿವಿಗಳಲ್ಲಿ ಸೆರೆಯಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಅ. 22 ರಂದು ಕಾಣಿಸಿಕೊಂದ್ದ ಚಿರತೆ ಮೊದಲು ಮತ್ತೆ ಅಣೆಕಟ್ಟಿನ ಉತ್ತರ ಭಾಗದಲ್ಲಿ ಮತ್ತು ದಕ್ಷಿಣ ಪ್ರವೇಶದ್ವಾರದಲ್ಲಿ ಮರ್ನಾಲ್ಕು ಬಾರಿ ಕಾಣಿಸಿಕೊಂಡಿತ್ತು. ಚಿರತೆ ಸೆರೆಗಾಗಿ ಶ್ರೀರಂಗಪಟ್ಟಣ ಹಾಗೂ ಪಾಂಡವಪುರ ಅರಣ್ಯ ಇಲಾಖೆಯ ಅಧಿಕಾರಿಗಳು 9 ಬೋನುಗಳನ್ನು ಇರಿಸಿದ್ದರು.
ಇವುಗಳ ಪೈಕಿ ಅಣೆಕಟ್ಟೆಯ ನಾರ್ಥ್ ಗೇಟ್ನ ಉದ್ಯಾನದ ಬಳಿಯಿಂದ ಇರಿಸಲಾಗಿದ್ದ, 1 ಬೋನನ್ನು ಶುಕ್ರವಾರ ಬೆಳಗ್ಗೆ ಪಾಂಡವಪುರ ಅರಣ್ಯ ಇಲಾಖೆ ಅಧಿಕಾರಿಗಳು ನಿಗಮದ ಅಧಿಕಾರಿಗಳು ವಿರೋಧದ ನಡುವೆಯೂ ಸ್ಥಳಾಂತರಿಸಿದ್ದಾರೆ. ಕಾಕತಾಳೀಯ ಎಂಬಂತೆ ಸ್ಥಳಾಂತರಿಸಿದ ದಿನದಂದೇ ಅದೇ ಸ್ಥಳದಲ್ಲಿ ಚಿರತೆ ಹಾಗೂ ಮುಳ್ಳುಹಂದಿ ಪ್ರತ್ಯಕ್ಷವಾಗಿರುವುದು ನಿಗಮದ ಅಧಿಕಾರಿಗಳು ಹಾಗೂ ಸಾರ್ವಜನಿಕ ವಲಯದಲ್ಲಿ ಹೆಚ್ಚಿನ ಆಕ್ರೋಶ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Mangaluru; ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿದ ಆರೋಪ: ಕೋರ್ಟ್ಗೆ ಮೊರೆ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ