ಗುಂಡಿ ಬಿದ್ದ ರಾಮನಹಳ್ಳಿ ರಸ್ತೆ: ಸಂಕಷ್ಟ
Team Udayavani, May 9, 2022, 4:03 PM IST
ಕಿಕ್ಕೇರಿ: ಹೋಬಳಿಯ ರಾಮನಹಳ್ಳಿ ರಸ್ತೆ ತುಂಬಾ ಗುಂಡಿಗಳು ಬಿದ್ದು ವಾಹನ ಸವಾರರು ನಿತ್ಯ ಸಂಕಷ್ಟ ಎದುರಿಸುವಂತಾಗಿದೆ.
ಈ ರಸ್ತೆ ಕೋರಮಂಡಲ್ ಸಕ್ಕರೆ ಕಾರ್ಖಾನೆಗೆ ಸೇರಿಸುವ ಅತಿ ಹತ್ತಿರದ ರಸ್ತೆ ಕೂಡ ಆಗಿದೆ. ಕೊಂಕಣ ಸುತ್ತಿ ಮೈಲಾರಕ್ಕೆ ಹೋಗು ಎನ್ನುವ ರೀತಿ ಸುತ್ತಿ ಬಳಸಿ ಬಾರದೆ ಸಕ್ಕರೆ ಕಾರ್ಖಾನೆ, ಐಯ್ಯನ ಕೊಪ್ಪಲು, ದೊರೇನಹಳ್ಳಿ, ರಾಮನಹಳ್ಳಿ, ಚೌಡೇನಹಳ್ಳಿ, ಬೀಚೇನ ಹಳ್ಳಿ, ಮಾಣಿಕನಹಳ್ಳಿ, ಕಾರಿಗಾನಹಳ್ಳಿ, ಮಾಕವಳ್ಳಿ ಮತ್ತಿತರ ಗ್ರಾಮಗಳಿಗೆ ಸಾಗಲು ಅತಿ ಸನಿಹದ ರಸ್ತೆ ಇದಾಗಿದೆ.
ನಿತ್ಯವೂ ಸಂಕಷ್ಟ: ಕಿಕ್ಕೇರಿಯಿಂದ ಚೌಡೇನಹಳ್ಳಿ ಕೂಡು ರಸ್ತೆವರೆಗೆ ಅರೆಬರೆ ಡಾಂಬರು ರಸ್ತೆ ಇದೆ. ನಂತರ ಮಣ್ಣಿನ ರಸ್ತೆ ಇದ್ದು ರಸ್ತೆ ತುಂಬ ಗುಂಡಿ, ಕಲ್ಲು ಗಳು ಕಿತ್ತು ಮೇಲೆ ಬಂದಿವೆ. ರೈತಾಪಿ ಜನತೆ ರಸ್ತೆಯಲ್ಲಿ ನಿತ್ಯವೂ ಓಡಾಡಲು ಪರಿತಪಿಸಬೇಕಿದೆ.
ಎತ್ತಿನಗಾಡಿಯ ಮೂಲಕ ಗೊಬ್ಬರ, ನೇಗಿಲು ಮತ್ತಿತರ ವಸ್ತುಗಳನ್ನು ಸಾಗಿಸಲು ರೈತರು ಪರದಾಡುವಂತಾಗಿದೆ. ರಾಮನಹಳ್ಳಿ ಗ್ರಾಮದ ಜನತೆ ನಿತ್ಯವೂ ಹೋಬಳಿ ಕೇಂದ್ರಕ್ಕೆ ಓಡಾಡಬೇಕಿರುವುದು ಅನಿವಾರ್ಯತೆ ಇದ್ದು ಜಲ್ಲಿ ರಸ್ತೆ ಮೇಲೆ ಓಡಾಡಲು ಕಷ್ಟಕರವಾಗಿದೆ. ಶಾಲಾ ಕಾಲೇಜು ಮಕ್ಕಳು ಈ ರಸ್ತೆಯಲ್ಲಿ ಓಡಾಡಲು ತೀವ್ರಕರವಾದ ಹಿಂಸೆಯಾಗಿದೆ.
ಬೈಕ್ಗಳನ್ನು ನಿತ್ಯವೂ ರಿಪೇರಿ ಮಾಡಿಸಿಕೊಳ್ಳಬೇಕಿದೆ. ರಾತ್ರಿ ವೇಳೆ ಈ ರಸ್ತೆಯಲ್ಲಿ ಓಡಾಡುವುದು, ವಾಹನ ಕೆಟ್ಟು ನೂಕಿಕೊಂಡು ಮನೆಗೆ ಸೇರುವುದು ಯಾತನೆಯಾಗಿದೆ.
ಅಧಿಕಾರಿಗಳು ಕ್ರಮ ಕೈಗೊಳ್ಳಲಿ : ಈ ರಸ್ತೆಯ ಬಳಿ ಇರುವ ರೈತರು ಆಗಿಂದಾಗ್ಗೆ ತಮ್ಮ ಓಡಾಟಕ್ಕೆ ವಿಧಿ ಇಲ್ಲದೆ ಗುಂಡಿಗಳಿಗೆ ಕಲ್ಲು ಮಣ್ಣು ತುಂಬುವುದು ಮಾಮೂಲಿ. ಸಂಬಂಧಪಟ್ಟ ಇಲಾಖೆ ತುರ್ತು ಕ್ರಮವಹಿಸಿ ರಸ್ತೆ ಗುಂಡಿ ಮುಚ್ಚಿ ಡಾಂಬರೀಕರಣ ಮಾಡಲು ಮುಂದಾಗಬೇಕಿದೆ ಎಂದು ಡೇರಿ ಕುಮಾರ್ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
MUST WATCH
ಹೊಸ ಸೇರ್ಪಡೆ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ