ಮಾ.5ರ ಸಹಸ್ರ ಕಳಶಾಭಿಷೇಕಕ್ಕೆ ಸಿದ್ಧತೆ


Team Udayavani, Feb 23, 2021, 3:01 PM IST

ಮಾ.5ರ ಸಹಸ್ರ ಕಳಶಾಭಿಷೇಕಕ್ಕೆ ಸಿದ್ಧತೆ

ಮೇಲುಕೋಟೆ: ಶ್ರೀವೈಷ್ಣವ ಕ್ಷೇತ್ರ ಮೇಲುಕೋಟೆ ಶ್ರೀಚೆಲುವನಾರಾಯಣ ಸ್ವಾಮಿ ದೇವಾಲಯದಲ್ಲಿ ಐತಿಹಾಸಿಕ ಮಹತ್ವದ “ಸಹಸ್ರ ಕಳಶಾಭಿಷೇಕ’ ಮಾ.5ರಂದು ನಡೆಯಲಿದೆ.

2020ನೇ ವರ್ಷದ ವೈರಮುಡಿ ಬ್ರಹ್ಮೋತ್ಸವ ರದ್ದಾದ ಹಿನ್ನೆಲೆಯಲ್ಲಿ ದೇವಾಲಯದಲ್ಲಿ ಅನುಸರಿಸುತ್ತಾ ಬಂದಿರುವ ಪೂಜಾಕೈಂಕರ್ಯ ಪದ್ಧತಿಯ ಕೈಪಿಡಿ ಈಶ್ವರ ಸಂಹಿತೆಯ ಪ್ರಕಾರ ಪ್ರಾಯಶ್ಚಿತ್ತ ಪೂರ್ವಕವಾಗಿ ಸಹಸ್ರ ಕಳಶಾಭಿಷೇಕ ಹಮ್ಮಿಕೊಳ್ಳಲಾಗಿದೆ. 4 ದಿನಗಳ ಈ ಮಹತ್ವಪೂರ್ಣ ಧಾರ್ಮಿಕ ಕಾರ್ಯಕ್ರಮ ಇತಿಹಾಸ ಸೃಷ್ಟಿಸಲಿದೆ.

ಸಹಸ್ರ ಕಳಶಾಭಿಷೇಕ ನಡೆದಿಲ್ಲ: ಭಗವದ್ರಾ ಮಾನಜರ ಕಾಲದಿಂದಲೂ ಚೆಲುವನಾರಾಯಣ ಸ್ವಾಮಿಗೆ ಸಹಸ್ರ ಕಳಶಾಭಿಷೇಕ ನಡೆ ದಿಲ್ಲ. ಕೋವಿಡ್ ಮಹಾಮಾರಿ ದೇವಾಲಯದಲ್ಲಿ ಐತಿಹಾಸಿಕ ಮಹೋತ್ಸವ ನಿಗದಿಯಾಗುವಂತೆ ಮಾಡಿದೆ. ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ಪಾಂಚಾರಾತ್ರಾಗಮ ಪಂಡಿತ ವಿಜಯಕುಮಾರ್‌ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ದಿನಾಂಕ ನಿಗದಿ ಮಾಡಲಾಗಿದ್ದು, ಆಹ್ವಾನ ಪತ್ರಿಕೆಯನ್ನೂ ಬಿಡುಗಡೆಮಾಡಲಾಗಿದೆ.

4 ದಿನಗಳ ಕಾರ್ಯಕ್ರಮ: ಮಾ.3ರಿಂದ 6ರವರೆಗೆ 4 ದಿನಗಳ ಕಾಲ ವಿವಿಧ ಧಾರ್ಮಿಕ ಕೈಂಕರ್ಯಗಳು ನೆರವೇರಲಿದೆ. ಮಾ.3ರಂದು ಅಂಕುರಾರ್ಪಣ, 4ರಂದು ಕಳಶಪ್ರತಿಷ್ಠೆ, 5ರಂದು ಸಹಸ್ರ ಕಳಶಾಭಿಷೇಕ,6 ರಂದು ಅನ್ನಕೋಟಿ ಕಾರ್ಯಕ್ರಮ ನಿಗದಿಯಾಗಿದೆ. ಜಿಲ್ಲಾಧಿಕಾರಿ ಎಸ್‌.ಅಶ್ವಥಿ ಅವರ ಆದೇಶದಂತೆ ರಾಮಾನುಜರ ಸನ್ನಿಧಿಯ ಅರ್ಚಕ ವಿದ್ವಾನ್‌ ಬಿ.ವಿ.ಆನಂದಾಳ್ವಾರ್‌ ಸಹಸ್ರ ಕಳಶಾಭಿಷೇಕಕ್ಕೆ ಸಂಪೂರ್ಣಉಚಿತವಾಗಿ ವ್ಯವಸ್ಥೆ ಮಾಡಿಕೊಡಲಿದ್ದಾರೆ

ಈಶ್ವರ ಸಂಹಿತೆಯಂತೆ ಸಹಸ್ರ ಕಳಶಾಭಿಷೇಕ :

ಸಹಸ್ರ ಕಳಶಾಭಿಷೇಕದಲ್ಲಿ ನಿಗದಿಯಾದದಿನಗಳಂದು ಪೂಜಾ ಕೈಂಕರ್ಯಗಳು ಹೇಗಿರಬೇಕು. ಯಾವ ರೀತಿ ಕಳಶಾಭಿಷೇಕ ಮಾಡಬೇಕು. ಕಳಶಗಳನ್ನು ಯಾವ ಸ್ಥಳದಲ್ಲಿ ಸ್ಥಾಪಿಸಬೇಕು ಎಂಬುದನ್ನು ಈಶ್ವರ ಸಂಹಿತೆಯ ಆಧಾರದಲ್ಲಿ ಪಾಂಚರಾತ್ರಾಗಮ ಪಂಡಿತರೊಂದಿಗೆ ಚರ್ಚಿಸಿ, ಧಾರ್ಮಿಕದತ್ತಿ ಇಲಾಖೆಯ ಆಯುಕ್ತರ ಕಚೇರಿಯಿಂದ ರೂಪುರೇಷೆ ಸಿದ್ಧ ಮಾಡಲಾಗುತ್ತದೆ ಎಂದು ಧಾರ್ಮಿಕದತ್ತಿ ಇಲಾಖೆಯ ಆಗಮ ಪಂಡಿತ ವಿಜಯಕುಮಾರ್‌ ತಿಳಿಸಿದ್ದಾರೆ.

ಮೇಲುಕೋಟೆಯಲ್ಲಿ ನಡೆಸಿದ ಸಭೆಯಲ್ಲಿ ಮಹೋತ್ಸವಕ್ಕೆ ದಿನಾಂಕ ನಿಗದಿ ಮಾಡಿ ಧಾರ್ಮಿಕ ಪರಂಪರೆಗೆ ಚ್ಯುತಿ ಬರದಂತೆ ಮಹೋತ್ಸವಗಳನ್ನು ನಡೆಸಬೇಕು ಎಂದು ತೀರ್ಮಾನಿಸಲಾಗಿತ್ತು. ಜಿಲ್ಲಾಧಿಕಾರಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ದಾನಿಗಳನ್ನು ಗುರುತಿಸಲಾಗಿತ್ತು. ಮಹೋತ್ಸವದ ಕಾರ್ಯಕ್ರಮಗಳ ರೂಪುರೇಷೆ ಸಿದ್ಧ ಮಾಡಿರಲಿಲ್ಲ.

ಹೀಗಾಗಿ ಒಂದೆರಡು ದಿನಗಳಲ್ಲಿ ಪಾಂಚಾರಾತ್ರಗಮದ ಪ್ರಖ್ಯಾತ ಪಂಡಿತರೊಂದಿಗೆ ಚರ್ಚಿಸಿ, ಈಶ್ವರ ಸಂಹಿತೆಯಲ್ಲಿ ಉಲ್ಲೇಖೀಸಿದ ಆಧಾರ ಪರಾಮರ್ಶಿಸಿ ಮಹೋತ್ಸವದಲ್ಲಿ ಕೈಗೊಳ್ಳಬೇಕಾದ ವಿಧಿ  ವಿಧಾನ ನಿರ್ಧರಿಸಲಾಗುತ್ತದೆ. ಸಹಸ್ರ ಕಳಶಾಭಿಷೇಕ ಮಾ.5ರಂದು ವಿದ್ಯುಕ್ತವಾಗಿ ನಡೆಯಲಿದೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.