ಡಿಕೆಶಿ ಬಿಡುಗಡೆ ಮಾಡಲು ರಾಷ್ಟ್ರಪತಿಗೆ ಮನವಿ

ಕಾಂಗ್ರೆಸ್‌ ಕಾರ್ಯಕರ್ತರಿಂದ ಪ್ರತಿಭಟನೆ • ದ್ವೇಷದ ರಾಜಕಾರಣ ಬಿಟ್ಟು ಸಮಸ್ಯೆಗಳ ಕಡೆ ಗಮನಹರಿಸಿ

Team Udayavani, Sep 10, 2019, 3:54 PM IST

mandya-tdy-1

ಕಾಂಗ್ರೆಸ್‌ ನಾಯಕ, ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಬಂಧನ ಖಂಡಿಸಿ ಮಂಡ್ಯದಲ್ಲಿ ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಮಂಡ್ಯ : ಕಾಂಗ್ರೆಸ್‌ನ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್‌ ಬಂಧನ ವಿರೋಧಿಸಿ ಕಾಂಗ್ರೆಸ್‌ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ನಗರದ ಜಯಚಾಮರಾಜೇಂದ್ರ ಒಡೆಯರ್‌ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಮೆರವಣಿಗೆ ಮೂಲಕ ಸರ್‌ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಬಳಿ ತೆರಳಿ ಧರಣಿ ನಡೆಸಿದರು. ಡಿಕೆಶಿ ಬಿಡುಗಡೆಗೆ ಒತ್ತಾಯಿಸಿ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲಿಸಿದರು.

ದ್ವೇಷದ ರಾಜಕಾರಣ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದ ಸಮಯದಿಂದಲೂ ಸಾಂವಿಧಾನಿಕ ಸಂಸ್ಥೆಗಳಾದ ಇಡಿ, ಐಟಿ ಹಾಗೂ ಸಿಬಿಐ ಅಧಿಕಾರಿಗಳನ್ನು ದುರುಪಯೋಗ ಮಾಡಿಕೊಂಡು ಕಾಂಗ್ರೆಸ್‌ ನಾಯಕರು ಹಾಗೂ ವಿರೋಧ ಪಕ್ಷಗಳ ಮುಖಂಡರನ್ನು ಹಲವಾರು ಪ್ರಕರಣಗಳಲ್ಲಿ ಸಿಲುಕಿಸುತ್ತಿದೆ. ಅವರನ್ನು ಬಂಧನಕ್ಕೊಳಪಡಿಸುವ ಮೂಲಕ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಬಿಜೆಪಿ ಪಕ್ಷವನ್ನು ದೇಶದ ಏಕೈಕ ಪಕ್ಷವಾಗಿ ಬೆಳೆಸುವ ಗುರಿಯೊಂದಿಗೆ ಎಲ್ಲಾ ಪಕ್ಷಗಳನ್ನು ನಾಶ ಮಾಡಲು ಹೊರಟಿದೆ ಎಂದು ಕಿಡಿಕಾರಿದರು.

ಪ್ರಜಾಪ್ರಭುತ್ವ ವಿರೋಧಿ ನೀತಿ: ದೇಶ ಈಗಾಗಲೇ ಜಿಡಿಪಿ ಕುಸಿತ, ಆರ್ಥಿಕ ಹಿಂಜರಿತ, ನಿರುದ್ಯೋಗ ಸಮಸ್ಯೆ, ಹಣಕಾಸಿನ ಸಂಕಷ್ಟದಿಂದ ಉದ್ಯಮಗಳು ಮುಚ್ಚುತ್ತಿವೆ. ದೇಶದಲ್ಲಿ ಹಲವಾರು ಸಮಸ್ಯೆಗಳಿವೆ. ಅವುಗಳಿಗೆ ಪರಿಹಾರ ಸೂಚಿಸದೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಶಾ ದೇಶದಲ್ಲಿ ಹಿಟ್ಲರ್‌ ನೀತಿ ಅನುಸರಿಸುತ್ತಿದ್ದಾರೆ ಎಂದು ಆಕ್ರೋಶಿಸಿದರು.

ಈಗಾಗಲೇ 4 ದಿನ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಅವರನ್ನು ವಿಚಾರಣೆ ನಡೆಸಿದ್ದಾರೆ. ವಿಚಾರಣೆಗೆ ಎಲ್ಲ ರೀತಿ ಸಹಕಾರ ನೀಡಿದ್ದರೂ, ರಾಜಕೀಯ ಹಗೆ ಸಾಧಿಸಲು ಬಂಧನಕ್ಕೊಳಪಡಿಸಿರುವುದು ಪ್ರಜಾಪ್ರಭುತ್ವ ವಿರೋಧಿ ನೀತಿಯಾಗಿದೆ. ಆದ್ದರಿಂದ ಕೂಡಲೇ ಡಿ.ಕೆ.ಶಿವಕುಮಾರ್‌ ಅವರನ್ನು ಬಿಡುಗಡೆ ಮಾಡಬೇಕು. ಬಿಜೆಪಿ ದ್ವೇಷ ರಾಜ ಕಾರಣ ಬಿಡಬೇಕು ಎಂದು ಆಗ್ರಹಿಸಿದರು.

ನ್ಯಾಯಸಮ್ಮತ ಆಡಳಿತ ನೀಡಿ: ಡಿ.ಕೆ.ಶಿವಕುಮಾರ್‌ ಅವರನ್ನು ಬಂಧಿಸಿ ರಾಜಕೀಯ ಶಕ್ತಿ ಕುಂದಿಸುವ ಮೂಲಕ ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ತನ್ನ ಆಧಿಪತ್ಯ ಸ್ಥಾಪನೆಗೆ ಮುಂದಾಗಿದೆ. ಇದು ನಡೆಯದ ಮಾತು. ಹಿಂದೆ ಬಿಜೆಪಿ ಚಿತ್ರದುರ್ಗ ಶಾಸಕರೊಬ್ಬರನ್ನು 25 ಕೋಟಿ ರೂ.ಗಳಿಗೆ ಖರೀದಿಸುವ ಬಗ್ಗೆ ಆಡಿಯೋವನ್ನು ಡಿ.ಕೆ.ಶಿವಕುಮಾರ್‌ ಬಿಡುಗಡೆ ಮಾಡಿದ್ದರು. ಅದನ್ನು ತನಿಖೆಗೆ ವಹಿಸಿದ್ದರೆ, ಇಂದು ಬಿ.ಎಸ್‌.ಯಡಿಯೂರಪ್ಪಜೈಲಿಗೆ ಹೋಗಬೇಕಾಗಿತ್ತು. ಆದ್ದರಿಂದ ಇಂಥ ದ್ವೇಷ ರಾಜಕಾರಣ ಬಿಟ್ಟು, ನ್ಯಾಯ ಸಮ್ಮತವಾಗಿ ಆಡಳಿತ ನಡೆಸಬೇಕು ಎಂದು ಒತ್ತಾಯಿಸಿದರು.

ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್‌, ಮಾಜಿ ಸಚಿವ ಎಂ.ಎಸ್‌.ಆತ್ಮಾನಂದ, ಮಹಿಳಾ ಘಟಕದ ಅಧ್ಯಕ್ಷೆ ಅಂಜನಾಶ್ರೀಕಾಂತ್‌, ಮುಖಂಡರಾದ ಪಿ.ರವಿಕುಮಾರ್‌, ರಶ್ಮಿ ಶಿವಕುಮಾರ್‌, ನಗರಸಭೆ ಸದಸ್ಯರಾದ ಟಿ.ಕೆ.ರಾಮಲಿಂಗಯ್ಯ, ನಯೀಂ, ಶ್ರೀಧರ್‌, ಬಿ.ಪಿ.ಪ್ರಕಾಶ್‌, ರಾಮಲಿಂಗಯ್ಯ ಸೇರಿದಂತೆ ಮಹಿಳಾ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections: ಎಚ್‌ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್‌

Lok Sabha Elections: ಎಚ್‌ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.