ಮಹಿಳಾ ಸಬಲೀಕರಣಕ್ಕೆ ವಾತಾವರಣ ನಿರ್ಮಿಸಿ


Team Udayavani, Oct 9, 2020, 3:41 PM IST

ಮಹಿಳಾ ಸಬಲೀಕರಣಕ್ಕೆ ವಾತಾವರಣ ನಿರ್ಮಿಸಿ

ಮಂಡ್ಯ: ಜಿಲ್ಲೆಯಲ್ಲಿರುವ ನಿರ್ಗತಿಕರು, ಅಸಹಾಯಕರು, ಬಡವರು ಸೇರಿದಂತೆ ಮಹಿಳೆಯರಿಗೆ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯ ನೀಡುವ ಮೂಲಕ ಮಹಿಳೆಯರ ಸಬಲೀಕರಣ ಮಾಡಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ವಿ.ಟಿಂಗಳಿ ಹೇಳಿದರು.

ನಗರದ ಜಿಪಂ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ನಡೆದ ನಿಗಮದ ವಿವಿಧಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಶೇ.100ರಷ್ಟು ಪ್ರಗತಿ ಸಾಧಿಸಲಿ: ಈಗಾಗಲೇ 16 ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದು, ಕೆಲವೊಂದು ಜಿಲ್ಲೆ ಯಲ್ಲಿ ತೃಪ್ತಿದಾಯಕಕೆಲಸಗಳು ಆಗಿಲ್ಲ. ಮಂಡ್ಯ ಜಿಲ್ಲೆ ಯಲ್ಲಿ ಸ್ವಲ್ಪ ತೃಪ್ತಿದಾಯಕವಾಗಿದೆ. ಆದರೆ, ಇನ್ನೂಶೇ.100ರಷ್ಟು ಪ್ರಗತಿ ಸಾಧಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಂಕಷ್ಟದಲ್ಲಿದ್ದವರಿಗೆ ನೆರವಾಗಿ: ಬೀದಿಬದಿ ಮಹಿಳಾ ವ್ಯಾಪಾರಿಗಳಿಗೆ, ನಿರ್ಗತಿಕರಿಗೆ, ಅಸಹಾಯಕ ಮಹಿಳೆಯರು ಸೇರಿದಂತೆ ಇನ್ನಿತರೆ ಸಂಕಷ್ಟದಲ್ಲಿರುವ ಮಹಿಳೆಯರ ನೆರವಿಗೆ ನಿಗಮ ಮಂಡಳಿ ನಿಲ್ಲಬೇಕಿದೆ. ನಿಗಮದಿಂದ ಸಿಗುವ ಸೌಲಭ್ಯಗಳನ್ನು ಪ್ರಾಮಾಣಿಕವಾಗಿ ಫ‌ಲಾನುಭವಿಗಳಿಗೆ ತಲುಪಿಸುವ ಮೂಲಕ ಆರ್ಥಿಕ ಸಬಲರನ್ನಾಗಿ ಮಾಡಬೇಕಾಗಿದೆ. ಬ್ಯಾಂಕ್‌ಗಳಿಂದ ಸಾಲ ಸೌಲಭ್ಯಗಳನ್ನು ನೀಡುವ ಮೂಲಕ ಕೋವಿಡ್ ಸಂಕಷ್ಟದಲ್ಲಿ ಮಹಿಳೆಯರು ಸಬಲರಾಗುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಪ್ರಾಮಾಣಿಕವಾಗಿ ಕೆಲಸ ಮಾಡಿ: ಜಿಲ್ಲೆಯಲ್ಲಿ ನೀಡಿದ ಭೌತಿಕ ಗುರಿಯನ್ನು ಶೇ.100ರಷ್ಟು ಸಾಧಿಸ ಬೇಕು. ಅಧಿಕಾರಿಗಳು ಪ್ರಾಮಾಣಿಕವಾಗಿ ಫ‌ಲಾನುಭವಿಗಳನ್ನು ಗುರುತಿಸುವ ಕೆಲಸ ಮಾಡಬೇಕು. ಫ‌ಲಾ ನುಭವಿಗಳು ಸಾಲವನ್ನು ಪಡೆದುಕೊಂಡು ಸ್ವಾವಲಂಬಿಯಾಗಿ ಸ್ವಯಂ ಉದ್ಯೋಗ ಕೈಗೊಂಡು ನಿಗದಿತ ವೇಳೆಯಲ್ಲಿ ಮರು ಪಾವತಿ ಮಾಡುವ ಮೂಲಕ ಆರ್ಥಿಕವಾಗಿ ಸಬಲರಾಗುವಂತೆ ಗಮನ ಹರಿಸಬೇಕು. ಸಾಲ ತೆಗೆದುಕೊಂಡವರು ಸರಿಯಾದ ರೀತಿಯಲ್ಲಿ ಬಳಕೆ ಮಾಡಿಕೊಂಡಿದ್ದಾರೆಯೇ ಎಂಬುದರ ಬಗ್ಗೆ ಆಗಾಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸ ಬೇಕು ಎಂದು ಸೂಚಿಸಿದರು.

ಸ್ವಸಹಾಯ ಸಂಘಗಳ ತಂಡ ರಚಿಸಿ: ಜಿಲ್ಲೆಯಲ್ಲಿರುವಸ್ವ ಸಹಾಯ ಸಂಘಗಳಲ್ಲಿರುವ ಒಬ್ಬೊಬ್ಬರು ಸದಸ್ಯರನ್ನು ಕೂಡಿಸಿ ಒಂದು ತಂಡ ರಚಿಸಿ, ಅದರ ಮೂಲಕ ಕೌಶಲ್ಯಾಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳುವಂತೆಮಾಡಬೇಕು. ಅವರಿಗೆ ಅಗತ್ಯವಾದ ಮಾರುಕಟ್ಟೆಕಲ್ಪಿಸಿಕೊಡಲು ಅಗತ್ಯ ಕ್ರಮ ಕೈಗೊಳ್ಳಿ ಎಂದು ಹೇಳಿದರು. ಸಭೆಯಲ್ಲಿ ಜಿಪಂ ಸಿಇಒ ಎಸ್‌.ಎಂ.ಜುಲ್ಫಿಕರ್‌

ಉಲ್ಲಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜಮೂರ್ತಿ, ಲೀಡ್‌ ಬ್ಯಾಂಕ್‌ ವ್ಯವಸ್ಥಾಪಕ ಕದರಪ್ಪ ಸೇರಿದಂತೆ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections: ಎಚ್‌ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್‌

Lok Sabha Elections: ಎಚ್‌ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.