![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
ಮಹಿಳಾ ಸಬಲೀಕರಣಕ್ಕೆ ವಾತಾವರಣ ನಿರ್ಮಿಸಿ
Team Udayavani, Oct 9, 2020, 3:41 PM IST
![ಮಹಿಳಾ ಸಬಲೀಕರಣಕ್ಕೆ ವಾತಾವರಣ ನಿರ್ಮಿಸಿ](https://www.udayavani.com/wp-content/uploads/2020/10/mandya-tdy-1-5-620x372.jpg)
ಮಂಡ್ಯ: ಜಿಲ್ಲೆಯಲ್ಲಿರುವ ನಿರ್ಗತಿಕರು, ಅಸಹಾಯಕರು, ಬಡವರು ಸೇರಿದಂತೆ ಮಹಿಳೆಯರಿಗೆ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯ ನೀಡುವ ಮೂಲಕ ಮಹಿಳೆಯರ ಸಬಲೀಕರಣ ಮಾಡಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ವಿ.ಟಿಂಗಳಿ ಹೇಳಿದರು.
ನಗರದ ಜಿಪಂ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ನಡೆದ ನಿಗಮದ ವಿವಿಧಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಶೇ.100ರಷ್ಟು ಪ್ರಗತಿ ಸಾಧಿಸಲಿ: ಈಗಾಗಲೇ 16 ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದು, ಕೆಲವೊಂದು ಜಿಲ್ಲೆ ಯಲ್ಲಿ ತೃಪ್ತಿದಾಯಕಕೆಲಸಗಳು ಆಗಿಲ್ಲ. ಮಂಡ್ಯ ಜಿಲ್ಲೆ ಯಲ್ಲಿ ಸ್ವಲ್ಪ ತೃಪ್ತಿದಾಯಕವಾಗಿದೆ. ಆದರೆ, ಇನ್ನೂಶೇ.100ರಷ್ಟು ಪ್ರಗತಿ ಸಾಧಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸಂಕಷ್ಟದಲ್ಲಿದ್ದವರಿಗೆ ನೆರವಾಗಿ: ಬೀದಿಬದಿ ಮಹಿಳಾ ವ್ಯಾಪಾರಿಗಳಿಗೆ, ನಿರ್ಗತಿಕರಿಗೆ, ಅಸಹಾಯಕ ಮಹಿಳೆಯರು ಸೇರಿದಂತೆ ಇನ್ನಿತರೆ ಸಂಕಷ್ಟದಲ್ಲಿರುವ ಮಹಿಳೆಯರ ನೆರವಿಗೆ ನಿಗಮ ಮಂಡಳಿ ನಿಲ್ಲಬೇಕಿದೆ. ನಿಗಮದಿಂದ ಸಿಗುವ ಸೌಲಭ್ಯಗಳನ್ನು ಪ್ರಾಮಾಣಿಕವಾಗಿ ಫಲಾನುಭವಿಗಳಿಗೆ ತಲುಪಿಸುವ ಮೂಲಕ ಆರ್ಥಿಕ ಸಬಲರನ್ನಾಗಿ ಮಾಡಬೇಕಾಗಿದೆ. ಬ್ಯಾಂಕ್ಗಳಿಂದ ಸಾಲ ಸೌಲಭ್ಯಗಳನ್ನು ನೀಡುವ ಮೂಲಕ ಕೋವಿಡ್ ಸಂಕಷ್ಟದಲ್ಲಿ ಮಹಿಳೆಯರು ಸಬಲರಾಗುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ಪ್ರಾಮಾಣಿಕವಾಗಿ ಕೆಲಸ ಮಾಡಿ: ಜಿಲ್ಲೆಯಲ್ಲಿ ನೀಡಿದ ಭೌತಿಕ ಗುರಿಯನ್ನು ಶೇ.100ರಷ್ಟು ಸಾಧಿಸ ಬೇಕು. ಅಧಿಕಾರಿಗಳು ಪ್ರಾಮಾಣಿಕವಾಗಿ ಫಲಾನುಭವಿಗಳನ್ನು ಗುರುತಿಸುವ ಕೆಲಸ ಮಾಡಬೇಕು. ಫಲಾ ನುಭವಿಗಳು ಸಾಲವನ್ನು ಪಡೆದುಕೊಂಡು ಸ್ವಾವಲಂಬಿಯಾಗಿ ಸ್ವಯಂ ಉದ್ಯೋಗ ಕೈಗೊಂಡು ನಿಗದಿತ ವೇಳೆಯಲ್ಲಿ ಮರು ಪಾವತಿ ಮಾಡುವ ಮೂಲಕ ಆರ್ಥಿಕವಾಗಿ ಸಬಲರಾಗುವಂತೆ ಗಮನ ಹರಿಸಬೇಕು. ಸಾಲ ತೆಗೆದುಕೊಂಡವರು ಸರಿಯಾದ ರೀತಿಯಲ್ಲಿ ಬಳಕೆ ಮಾಡಿಕೊಂಡಿದ್ದಾರೆಯೇ ಎಂಬುದರ ಬಗ್ಗೆ ಆಗಾಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸ ಬೇಕು ಎಂದು ಸೂಚಿಸಿದರು.
ಸ್ವಸಹಾಯ ಸಂಘಗಳ ತಂಡ ರಚಿಸಿ: ಜಿಲ್ಲೆಯಲ್ಲಿರುವಸ್ವ ಸಹಾಯ ಸಂಘಗಳಲ್ಲಿರುವ ಒಬ್ಬೊಬ್ಬರು ಸದಸ್ಯರನ್ನು ಕೂಡಿಸಿ ಒಂದು ತಂಡ ರಚಿಸಿ, ಅದರ ಮೂಲಕ ಕೌಶಲ್ಯಾಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳುವಂತೆಮಾಡಬೇಕು. ಅವರಿಗೆ ಅಗತ್ಯವಾದ ಮಾರುಕಟ್ಟೆಕಲ್ಪಿಸಿಕೊಡಲು ಅಗತ್ಯ ಕ್ರಮ ಕೈಗೊಳ್ಳಿ ಎಂದು ಹೇಳಿದರು. ಸಭೆಯಲ್ಲಿ ಜಿಪಂ ಸಿಇಒ ಎಸ್.ಎಂ.ಜುಲ್ಫಿಕರ್
ಉಲ್ಲಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜಮೂರ್ತಿ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಕದರಪ್ಪ ಸೇರಿದಂತೆ ಅಧಿಕಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ](https://www.udayavani.com/wp-content/uploads/2024/07/KRS-150x84.jpg)
KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ
KRS Dam: ಶೀಘ್ರ ಕೆಆರ್ಎಸ್ ಡ್ಯಾಂ ಭರ್ತಿ 92 ಗ್ರಾಮಗಳಲ್ಲಿ ಪ್ರವಾಹ ಭೀತಿ
![Cheluvaraya-swamy](https://www.udayavani.com/wp-content/uploads/2024/07/Cheluvaraya-swamy-150x90.jpg)
Cauvery Water: ಎಚ್ಡಿಕೆ ಕಾವೇರಿ ಸಮಸ್ಯೆ ಬಗೆಹರಿಸಿದ್ರೆ, ನಾನು ಚುನಾವಣೆಗೆ ಸ್ಪರ್ಧಿಸಲ್ಲ
![HDK](https://www.udayavani.com/wp-content/uploads/2024/07/HDK-3-150x90.jpg)
Cauvery Water Problem; ಸಾಯುವುದರೊಳಗೆ ಕಾವೇರಿ ಸಮಸ್ಯೆಗೆ ಮುಕ್ತಿ: ಎಚ್ಡಿಕೆ
![1-eee](https://www.udayavani.com/wp-content/uploads/2024/07/1-eee-150x82.jpg)
Mandya; ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ
MUST WATCH
ಹೊಸ ಸೇರ್ಪಡೆ
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.