Protest: ಲೋಡ್ ಶೆಡ್ಡಿಂಗ್ ಖಂಡಿಸಿ ಧರಣಿ
Team Udayavani, Oct 26, 2023, 3:54 PM IST
ಮಂಡ್ಯ: ಅನಧಿಕೃತ ಲೋಡ್ ಶೆಡ್ಡಿಂಗ್ ಜಾರಿಗೊಳಿಸಿ ಕೃಷಿ ಪಂಪ್ ಸೆಟ್ ಗಳಿಗೆ ಸಮರ್ಪಕ ವಿದ್ಯುತ್ ಪೂರೈಸದ ರಾಜ್ಯ ಸರ್ಕಾರದ ವಿರುದ್ಧ ರೈತರು ಪ್ರತಿಭಟನೆ ನಡೆಸಿದರು. ನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಕಾರ್ಯನಿರ್ವಾಹಕ ಎಂಜಿನಿಯರ್ ಕಚೇರಿ ಮುಂಭಾಗ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ರೈತರು ಪ್ರತಿಭಟನಾ ಧರಣಿ ನಡೆಸಿದರು.
ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯಿಂದ ಈಗಾಗಲೇ ರೈತರ ಬದುಕು ಸಂಕಷ್ಟ ದಲ್ಲಿದ್ದು, ಸರ್ಕಾರ ಅನಿಯಮಿತ ವಾಗಿ ವಿದ್ಯುತ್ ಕಡಿತ ಮಾಡುತ್ತಿರುವುದರಿಂದ ಬೆಳೆದು ನಿಂತಿರುವ ಬೆಳೆಗಳಿಗೆ ನೀರು ಪೂರೈಸಲು ಸಾಧ್ಯವಾಗುತ್ತಿಲ್ಲ. ರಾತ್ರಿ ವೇಳೆ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು, ರೈತರು ಜಮೀನಿನತ್ತ ಹೋಗಲು ಹೆದರುವ ಪರಿಸ್ಥಿತಿ ನಿರ್ಮಾಣ ವಾಗಿದೆ. ಇದರಿಂದ ಕಬ್ಬು ಮತ್ತು ಭತ್ತದ ಬೆಳೆ ಒಣಗುತ್ತಿವೆ ಎಂದು ಹೇಳಿದರು.
ಪ್ರತಿನಿತ್ಯ ಏಳು ತಾಸು ತ್ರೀ ಫೇಸ್ ವಿದ್ಯುತ್ ಪೂರೈಕೆ ಮಾಡಲಾಗುತ್ತಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಐದು ತಾಸಿಗೆ ಉಳಿಕೆ ಮಾಡಿದೆ. ಹಗಲು ಸರಬರಾಜು ಮಾಡುತ್ತಿದ್ದ ವಿದ್ಯುತ್ ಅನ್ನು ರಾತ್ರಿ ಪಾಳಿಗೆ ವರ್ಗಾಯಿಸಿದೆ. ಇದರಿಂದ ರೈತರಿಗೆ ಮತ್ತಷ್ಟು ತೊಂದರೆಯಾಗಿದೆ. ಪ್ರತಿನಿತ್ಯ ಎರಡು ತಾಸು ಕೂಡ ವಿದ್ಯುತ್ ನೀಡುತ್ತಿಲ್ಲ ಎಂದು ಹೇಳಿದರು. ಕೃಷಿ ಪಂಪ್ ಸೆಟ್ ಗಳಿಗೆ ಪ್ರತಿನಿತ್ಯ ಹತ್ತು ತಾಸು ತ್ರೀ ಫೇಸ್ ವಿದ್ಯುತ್ ಪೂರೈಕೆ ಮಾಡಬೇಕು, ಹಗಲು ಹೊತ್ತು ಹೆಚ್ಚಿನ ತಾಸು ವಿದ್ಯುತ್ ಸರಬರಾಜು ಮಾಡಬೇಕು ಎಂದು ಒತ್ತಾಯಿಸಿದರು.
ರೈತ ಸಂಘದ ಶಿವಳ್ಳಿ ಚಂದ್ರು, ಜವರೇಗೌಡ, ಚಿಕ್ಕ ಮಂಡ್ಯ ನಾಗರಾಜು. ರಾಮಲಿಂಗೈಗೌಡ, ಸಣ್ಣಪ್ಪ, ಕರುನಾಡ ಸೇವಕರು ಸಂಘಟನೆಯ ಎಂ.ಬಿ. ನಾಗಣ್ಣಗೌಡ, ರಾಮಚಂದ್ರ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ