ಕಲ್ಲು ಗಣಿಗಾರಿಕೆ ನಿಲ್ಲಿಸಲು ಅಹೋರಾತ್ರಿ ಧರಣಿ


Team Udayavani, Apr 10, 2022, 5:44 PM IST

Untitled-1

ಪಾಂಡವಪುರ: ಕಲ್ಲು ಗಣಿಗಾರಿಕೆ ಸ್ಥಗಿತಗೊಳಿಸುವಂತೆ ಆಗ್ರಹಿಸಿ ತಾಲೂಕಿನ ಕನಗನಮರಡಿ ಗ್ರಾಮಸ್ಥರು ಕ್ರಷರ್‌ ಬಳಿ ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನಾ ಧರಣಿ 5ನೇ ದಿನವಾದ ಶನಿವಾರವೂ ಮುಂದುವರಿದು ಭಾನುವಾರ 6ನೇ ದಿನಕ್ಕೆ ಕಾಲಿಟ್ಟಿದೆ.

ಕನಗನಮರಡಿ ಗ್ರಾಮದ ಹೊರವಲಯದಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆ ಸ್ಥಗಿತಗೊಳಿಸಬೇಕು, ಕಲ್ಲು ಗಣಿಗಾರಿಕೆಯಿಂದ ಕಗನಗನಮರಡಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಗೆ ಸಾಕಷ್ಟು ಸಮಸ್ಯೆ ಉಂಟಾಗುತ್ತಿದೆ. ಗಣಿಶಬ್ಧಕ್ಕೆ ಮನೆ, ದೇವಸ್ಥಾನ, ವಿಸಿ ನಾಲೆಯ ಅಕ್ವಡೆಟ್‌ ಬಿರುಕು ಬಿಡುತ್ತಿವೆ. ಜತೆಗೆ ಕಲ್ಲಿನ ದೂಳಿನಿಂದಾಗಿ ಸುತ್ತಮುತ್ತಲಿನ ಕೃಷಿ ಪ್ರದೇಶದಲ್ಲಿ ಬೆಳೆ ಬೆಳೆಯಲು ಅಸಾಧ್ಯವಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಸಮಸ್ಯೆ ಆಲಿಸಿಲ್ಲ: ಕಲ್ಲಿನ ದೂಳು ಮನುಷ್ಯರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ರಾತ್ರಿ ವೇಳೆ ಮನೆಗಳಲ್ಲಿ ಮಕ್ಕಳು, ವಯೋವೃದ್ಧರು ಮಲಗಲು ಸಾಧ್ಯವಾಗುತ್ತಿಲ್ಲ ಎಂದು ಕಲ್ಲು ಗಣಿಗಾರಿಕೆ ಹಾಗೂ ಕ್ರಷರ್‌ ಇರುವ ಸ್ಥಳದಲ್ಲಿಯೇ ಅಹೋರಾತ್ರಿ ಪ್ರತಿಭಟನೆ ಧರಣಿ ನಡೆಸುತ್ತಿದ್ದಾರೆ. ಅಹೋರಾತ್ರಿ ಪ್ರತಿಭಟನೆಯೂ ಶನಿವಾರಕ್ಕೆ 5ನೇ ದಿನಕ್ಕೆ ಕಾಲಿಟ್ಟರೂ ಜಿಲ್ಲಾಮಟ್ಟದ ಅಧಿಕಾರಿಗಳು ಸ್ಥಳಕ್ಕೆ ಭೇಟಿಕೊಟ್ಟು ಸಮಸ್ಯೆ ಆಲಿಸುವ ಕೆಲಸ ಮಾಡಿಲ್ಲ ಎಂದು ದೂರಿದರು.

ಎಚ್ಚರಿಸುವ ಕೆಲಸ: ಕನಗನಮರಡಿ ಗ್ರಾಮಸ್ಥರು ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆಗೆ ಕಾಂಗ್ರೆಸ್‌ ಮುಖಂಡ ಡಾ.ಎಚ್‌. ಎನ್‌.ರವೀಂದ್ರ ಅವರು ಸಾಥ್‌ ನೀಡುತ್ತಿದ್ದಾರೆ. ಐದು ದಿನಗಳ ಅಹೋರಾತ್ರಿ ಪ್ರತಿಭಟನೆಗಳಲ್ಲೂ ಪಾಲ್ಗೊಂಡು ಅಧಿಕಾರಿಗಳನ್ನು ಎಚ್ಚರಿಸುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್‌ ಮುಖಂಡ ಡಾ.ಎಚ್‌.ಎನ್‌.ರವೀಂದ್ರ ಮಾತನಾಡಿ, ಕನಗನಮರಡಿ ಗ್ರಾಮದ ಹೊರವಲಯದಲ್ಲಿ ಅಕ್ರಮವಾಗಿ ಚಾಲ್ತಿಯಲ್ಲಿ ಇರುವ ಗಣಿಗಾರಿಕೆ ಸ್ಥಗಿತಗೊಳಿಸಬೇಕೆಂದು ಆಗ್ರಹಿಸಿ ಕನಗನಮರಡಿ ಗ್ರಾಮಸ್ಥರು ನಡೆಸುತ್ತಿರುವ ಅಹೋರಾತ್ರಿ ಧರಣಿ ಶನಿವಾರಕ್ಕೆ 5ನೇ ದಿನವಾಗಿದೆ. ಇಲ್ಲಿಯವರೆಗೂ ಸಾಕಷ್ಟು ಬೆಳೆವಣಿ ನಡೆಯುತ್ತಿದ್ದು, ಇನ್ನೂ ತ್ವರಿತವಾಗಿ ಹೆಚ್ಚಿನ ಬೆಳವಣಿಗೆ ನಡೆದು ಗಣಿಗಾರಿಕೆ ಸ್ಥಗಿತಗೊಳಿಸಬೇಕಾಗಿದೆ ಎಂದು ಒತ್ತಾಯಿಸಿದರು. ಅಲ್ಲದೇ, ಇಲ್ಲಿ ಜನರಿಗೆ ಸಮಸ್ಯೆ ಉಂಟಾಗುತ್ತಿದೆ ಎನ್ನುವ ಉದ್ದೇಶಕ್ಕಾಗಿ ಪ್ರತಿಭಟನೆ ನಡೆಸಲಾಗುತ್ತಿದೆಯೇ ಹೊರತು ಬೂಟಾಟಿಕೆಗಾಗಿ ಅಲ್ಲ ಎಂದು ಸ್ಪಷ್ಟಪಡಿಸಿದರು.

ಪ್ರತಿಭಟನೆಯಲ್ಲಿ ಗ್ರಾಮಸ್ಥರಾದ ಗೋಸೇಗೌಡ, ಸ್ವಾಮೀಗೌಡ, ಸುರೇಂದ್ರಕುಮಾರ್‌, ಜಯರಾಮೇಗೌಡ, ಚನ್ನಕೇಶವ, ಉಮೇಶ್‌, ಚಂದ್ರು, ಶಿವಕುಮಾರ್‌ ಮತ್ತಿತರರಿದ್ದರು.

ತಹಶೀಲ್ದಾರ್‌ರಿಗೆ ಸೂಕ್ತ ದಾಖಲೆ : ಆರಂಭದಿಂದ ಗಣಿ ಅಧಿಕಾರಿಗಳು, ಅರಣ್ಯ ಅಧಿಕಾರಿಗಳು, ಕಂದಾಯ ಅಧಿಕಾರಿಗಳು ಬಂದು ವರದಿ ತಯಾರಿಸಿ ಹೋಗಿದ್ದಾರೆ. ಶುಕ್ರವಾರ ಪಾಂಡವಪುರ ತಹಶೀಲ್ದಾರ್‌ ನಯನಾ ಅವರು ಆಗಮಿಸಿ ನಮ್ಮ ಸಮಸ್ಯೆ ಆಲಿಸಿದ್ದಾರೆ. ನಾವೂ ತಹಶೀಲ್ದಾರ್‌ ಅವರಿಗೆ ಸೂಕ್ತದಾಖಲೆ ನೀಡಿದ್ದೇವೆ. ಗಣಿಗಾರಿಕೆ ಪ್ರದೇಶದ 5 ಕಿ.ಮೀ. ಒಳಗೆ ವಿ.ಸಿ. ನಾಲೆ ಅಕ್ವಟೆಡ್‌ ಇದೆ. ಜತೆಗೆ ಹುಲಿಕೆರೆ ಟನಲ್‌(ಸುರಂಗ) ಸೇರಿ ಹಲವು ಸಮಸ್ಯೆಗಳ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಅವರು ಶೀಘ್ರ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್‌ ಸಭೆ ನಡೆಸುವುದಾಗಿ ಭರವಸೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳು ಸೋಮವಾರ ಅಥವಾ ಮಂಗಳವಾರ ದೊಳಗಾಗಿ ಸೂಕ್ತ ಕ್ರಮವಹಿಸಬೇಕು ಎಂದು ಕಾಂಗ್ರೆಸ್‌ ಮುಖಂಡ ಡಾ.ಎಚ್‌.ಎನ್‌.ರವೀಂದ್ರ ಆಗ್ರಹಿಸಿದರು.

ಟಾಪ್ ನ್ಯೂಸ್

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.