ಕಲ್ಲು ಗಣಿಗಾರಿಕೆ ಸ್ಥಗಿತಕ್ಕೆ ಆಗ್ರಹ


Team Udayavani, Apr 26, 2022, 3:09 PM IST

Untitled-1

ಪಾಂಡವಪುರ: ಗಣಿಗಾರಿಕೆಯಿಂದ ರೈತರ ಬದುಕು ಸಂಕಷ್ಟಕ್ಕೆ ಸಿಲುಕಿದ್ದು, ತಕ್ಷಣ ಗಣಿಗಾರಿಕೆಯನ್ನು ಶಾಶ್ವತವಾಗಿ ನಿಷೇಧಿಸಬೇಕು ಎಂದು ಆಗ್ರಹಿಸಿ ತಾಲೂಕಿನ ಕನಗನಮರಡಿ ಗ್ರಾಮಸ್ಥರು ಪಾದಯಾತ್ರೆ ಮೂಲಕ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಗ್ರಾಮದಿಂದ 12 ಕಿ.ಮೀ ಪಾದಯಾತ್ರೆ ಮೂಲಕ ತಾಲೂಕು ಕಚೇರಿ ತಲುಪಿದ ಪ್ರತಿಭಟನಾಕಾರರು, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಗಣಿ ಮಾಲಿಕ ಅಶೋಕ್‌ ಪಾಟೀಲ್‌ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಭೂಮಿ ಬರಡಾಗಲಿದೆ: ಪ್ರತಿಭಟನೆ ನೇತೃತ್ವ ವಹಿಸಿದ್ದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಾ. ಎಚ್‌.ಎನ್‌.ರವೀಂದ್ರ ಮಾತನಾಡಿ, ಗಣಿಗಾರಿಕೆಗೆ ಅನುಮತಿ ನೀಡುವ ವಿಚಾರದಲ್ಲಿ ಅಧಿಕಾರಿಗಳಿಗೆ ಗಣಿಮಾಲಿಕನ ಮೇಲೆ ಪ್ರೀತಿ ಹೆಚ್ಚಿರುವಂತೆ ನಡೆದುಕೊಂಡಿದ್ದಾರೆ. ಗಣಿಗಾರಿಕೆಯಿಂದ ಇಲ್ಲಿನ ವಿಶ್ವೇಶ್ವರಯ್ಯ ಉಪ ನಾಲೆಗಳು, ಕುರಹಟ್ಟಿ ಅಕ್ವಡೆಕ್‌ (ಮೇಲ್ಗಾಲುವೆ), ಹುಲಿಕೆರೆ ಸುರಂಗ ಕಾಲುವೆ, ಸೇತುವೆ ಇತ್ಯಾದಿಗಳಿಗೆ ಅಪಾಯವಿರುವ ಕಾರಣ ಗಣಿಗಾರಿಕೆಗೆ ಅನುಮತಿ ನೀಡಬಾರದು ಎಂದು ನೀರಾವರಿ ಇಲಾಖೆ ಅಧಿಕಾರಿಗಳು ಪತ್ರ ಬರೆದಿದ್ದಾರೆ. ಗಣಿಗಾರಿಕೆಯಿಂದ ಏನಾದರೂ ಅಪಾಯ ಸಂಭವಿಸಿದರೆ 1.75 ಲಕ್ಷ ಎಕರೆ ಪ್ರದೇಶದ ಭೂಮಿ ಬರಡಾಗಲಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಾನೂನು ಮೀರಿದ್ದಾರೆ: ಅರಣ್ಯ ಇಲಾಖೆ ಮುಖ್ಯಸ್ಥರು ಗಣಿಗಾರಿಕೆಯಿಂದ ಅರಣ್ಯದಲ್ಲಿನ ಚಿರತೆ, ಕೃಷ್ಣಾಮೃಗ ಸೇರಿದಂತೆ ಇತರೆ ವನ್ಯಜೀವಿ ಗಳಿಗೆ ಅಪಾಯವಿದೆ ಎಂದಿದ್ದಾರೆ. ಆದರೂ, ಎಲ್ಲವನ್ನೂ ಮೀರಿ ಅಧಿಕಾರಿಗಳು ಗಣಿಗಾರಿಕೆಗೆ ಅನುಮತಿ ನೀಡಿದ್ದಾರೆ ಎಂದು ಆರೋಪಿಸಿದರು.

ಪೊಲೀಸರ ನಿಯೋಜನೆ ಇಲ್ಲ: ಪಾದಯಾತ್ರೆ ಸಂದರ್ಭದಲ್ಲಿ ಟ್ರಾಫಿಕ್‌ ನಿಯಂತ್ರಿಸಲು ಪೊಲೀಸರನ್ನು ನಿಯೋಜನೆ ಮಾಡಿರಲಿಲ್ಲ. ಒಂದು ವೇಳೆ ಪ್ರತಿಭಟನಾಕಾರರು ಮತ್ತು ಸಾರ್ವಜನಿಕರ ನಡುವೆ ಗಲಾಟೆ ಸಂಭವಿಸಿದರೆ ಪ್ರತಿಭಟನಾಕಾರರ ವಿರುದ್ಧ ಪ್ರಕರಣ ದಾಖಲಿಸಿ ಪ್ರತಿಭಟನೆ ಹತ್ತಿಕ್ಕಬಹುದು ಎಂಬ ಉದ್ದೇಶ ದಿಂದಲೇ ಪೊಲೀಸರು ಈ ರೀತಿ ಮಾಡಿದ್ದಾರೆ ಎಂದು ದೂರಿದರು.

ಬಳಿಕ ಉಪವಿಭಾಗಾಧಿಕಾರಿ ಬಿ.ಸಿ.ಶಿವಾನಂದ ಮೂರ್ತಿ ಹಾಗೂ ತಹಶೀಲ್ದಾರ್‌ ಎಸ್‌.ಎಲ್‌. ನಯನಾ ಅವರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಗ್ರಾಮಸ್ಥರಾದ ತಮ್ಮಣ್ಣ, ನಾಗರಾಜು, ಜಯರಾಮೇಗೌಡ, ಕೃಷ್ಣಮೂರ್ತಿ, ಬಸವರಾಜು, ರಾಜೇಶ್‌, ರಾಮಕೃಷ್ಣ, ಮಹ ದೇವು, ಕುಮಾರ ಮತ್ತಿತರರು ಉಪಸ್ಥಿತರಿದ್ದರು.

ಅಧಿಕಾರಿಗಳು ಪ್ರಾಯಶ್ಚಿತ್ತ ಪಡಬೇಕಾಗುತ್ತದೆ : ಅಧಿಕಾರ ವಿಕೇಂದ್ರಿಕರಣದಲ್ಲಿ ಸ್ಥಳೀಯ ಸಂಸ್ಥೆಗಳಿಗೆ ಹೆಚ್ಚಿನ ಅಧಿಕಾರವಿದೆ. ಸ್ಥಳೀಯ ಗ್ರಾಪಂ ಆಡಳಿತ ಮಂಡಳಿ ಗಣಿಗಾರಿಕೆ ಸ್ಥಗಿತಗೊಳಿಸುವಂತೆ ನಿರ್ಣಯ ಕೈಗೊಂಡಿದ್ದಾರೆ. ವಿದ್ಯುತ್‌ ಸಂಪರ್ಕ ಪಡೆಯಲು ಪಂಚಾಯ್ತಿಯಿಂದ ಎನ್‌ಒಸಿ ನೀಡಿಲ್ಲ. ಆದರೂ, ವಿದ್ಯುತ್‌ ಸಂಪರ್ಕ ಕಲ್ಪಿಸಲಾಗಿದೆ ಎಂದರಲ್ಲದೇ, ಪಾಪದ ಹಣ ಪಡೆದಿರುವ ಅಧಿಕಾರಿಗಳು ಇದಕ್ಕೆ ಪ್ರಾಯಶ್ಚಿತ್ತ ಪಡಬೇಕಾಗುತ್ತದೆ ಎಂದು ಕನಗನಮರಡಿ ಗ್ರಾಮಸ್ಥರು ಆರೋಪಿಸಿದರು.

ಟಾಪ್ ನ್ಯೂಸ್

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.