ಗಣಿಗಾರಿಕೆ ಶಾಶ್ವತ ನಿಷೇಧಕ್ಕೆ ಮಳೆಯಲ್ಲೇ ಪ್ರತಿಭಟನೆ


Team Udayavani, May 21, 2022, 3:02 PM IST

Untitled-1

ಪಾಂಡವಪುರ: ಪೊಲೀಸರ ಎಚ್ಚರಿಕೆ ನಡುವೆಯೂ ಗಣಿಗಾರಿಕೆ ಪ್ರದೇಶದ ಸಮೀಪ ಪ್ರತಿಭಟನೆ ನಡೆಸುತ್ತಿದ್ದ ತಾಲೂಕಿನ ಕನಗನಮರಡಿ ಗ್ರಾಮಸ್ಥರನ್ನು ಪೊಲೀಸರು ಬಂಧಿಸಿ ಕರೆದೊಯ್ದರು.

ಗ್ರಾಮದ ಹೊರವಲಯದಲ್ಲಿ ಅಶೋಕ್‌ ಪಾಟೀಲ್‌ ಒಡೆತನದಲ್ಲಿ ನಡೆಯುತ್ತಿರುವ ಗಣಿಗಾರಿಕೆಯನ್ನು ಶಾಶ್ವತವಾಗಿ ಸ್ಥಗಿತಗೊಳಿಸುವ ತನಕ ಪ್ರತಿಭಟನೆ ಕೈಬಿಡುವುದಿಲ್ಲ ಎಂಬ ನಿಲುವಿಗೆ ಬಂದಿರುವ ಪ್ರತಿಭಟನಾಕಾರರು ಮಳೆಯಲ್ಲೇ ಪ್ರತಿಭಟನೆ ಮುಂದುವರಿಸಿದ್ದರು.

ಶ್ರೀರಂಗಪಟ್ಟಣಕ್ಕೆ ಸ್ಥಳಾಂತರ: ಗ್ರಾಮದಸುಮಾರು 80ಕ್ಕೂ ಹೆಚ್ಚು ಪ್ರತಿಭಟನಾಕಾರರು ಕಲ್ಲು ಗಣಿಗಾರಿಕೆ ಪ್ರದೇಶದಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪೊಲೀಸರು, 30ಕ್ಕೂಹೆಚ್ಚು ಪ್ರತಿಭಟನಾಕಾರರನ್ನು ಬಂಧಿಸಿ ಶ್ರೀರಂಗ ಪಟ್ಟಣಕ್ಕೆ ಸ್ಥಳಾಂತರಿಸಿದರು.

ಪ್ರತಿಭಟನೆಗೆ ಹಕ್ಕಿಲ್ಲ: ಈ ಹಿಂದೆ ನೂರಕ್ಕೂ ಹೆಚ್ಚಿನ ಪ್ರತಿಭಟನಾಕಾರರನ್ನು ಬಂಧಿಸಿ ಬಿಡುಗಡೆಗೊಳಿಸಿದ್ದಪೊಲೀಸರು, ಪ್ರತಿಭಟನಾಕಾರರು ಗಣಿಗಾರಿಕೆಪ್ರದೇಶದಲ್ಲಿ ಪ್ರತಿಭಟನೆಗಾಗಿ ಹಾಕಿದ್ದ ಶಾಮಿಯಾನ ತೆರವುಗೊಳಿಸಿದ್ದರು. ಪೊಲೀಸರ ಎಚ್ಚರಿಕೆಗೆಬಗ್ಗದ ಪ್ರತಿಭಟನಾಕಾರರು ಪ್ರತಿಭಟನೆ ಮುಂದುವರೆಸಿದ್ದರು. ಗಣಿಗಾರಿಕೆ ಪ್ರದೇಶದಲ್ಲಿ ಪ್ರತಿಭಟನೆ ಮಾಡಲು ನಿಮಗೆ ಹಕ್ಕಿಲ್ಲ. ಹೀಗಾಗಿ ಬಂಧಿಸುತ್ತಿರುವುದಾಗಿ ಕಾರಣ ನೀಡಿರುವ ಪೊಲೀಸರ ವರ್ತನೆಯನ್ನು ಪ್ರತಿಭಟನಾಕಾರರು ಖಂಡಿಸಿದರು.

ಕೆರೆ ನೀರು ಕಲುಷಿತ: ಕಲ್ಲು ಗಣಿಗಾರಿಕೆ ಹಾಗೂ ಸ್ಟೋನ್‌ ಕ್ರಷಿಂಗ್‌ನಿಂದ ಸಮೀಪದ ವಿಶ್ವೇಶ್ವರಯ್ಯನಾಲಾ ಅಕ್ವಡೆಕ್‌, ಹುಲಿಕೆರೆ ನಾಲಾ ಸುರಂಗಮಾರ್ಗ ಹಾನಿಗೊಳಗಾಗುತ್ತದೆ. ಇದರಿಂದ 1.75 ಲಕ್ಷ ಎಕರೆ ರೈತರ ಬದುಕು ಸಂಕಷ್ಟಕ್ಕೀಡಾಗಲಿದೆ.ಅಲ್ಲದೇ, ಗ್ರಾಮಗಳ ಮನೆಗಳು ಮತ್ತು ದೇವಸ್ಥಾನಗಳ ಗೋಡೆಗಳು ಬಿರುಕು ಬಿಡುತ್ತಿವೆ. ಕ್ರಷರ್‌ದೂಳು ಸುತ್ತಲಿನ ಜಮೀನಿಗೆ ಆವರಿಸಿ ರೈತರು ವ್ಯವಸಾಯ ಮಾಡಲು ಸಾಧ್ಯವಾಗುತ್ತಿಲ್ಲ. ಜತೆಗೆ ಕೆರೆಕಟ್ಟೆಗಳ ನೀರು ಕಲುಷಿತಗೊಳ್ಳುತ್ತಿದೆ. ಜಾನುವಾರುಗಳಿಗೆ ಮೇವು ಸಿಗುತ್ತಿಲ್ಲ ಎಂಬುದು ಪ್ರತಿಭಟನಾಕಾರರ ಆರೋಪವಾಗಿದೆ.

ಪ್ರತಿಭಟನಾಕಾರರ ಧಿಕ್ಕಾರ: ಗಣಿಗಾರಿಕೆಯಿಂದ ರೈತರು ಸಂಕಷ್ಟ ಎದುರಿಸುತ್ತಿದ್ದರೂ, ಅಧಿಕಾರಿಗಳು ಮಾತ್ರ ರೈತರ ನೋವಿಗೆ ಸ್ಪಂದಿಸುತ್ತಿಲ್ಲ. ಜಿಲ್ಲಾ,ತಾಲೂಕು ಮಟ್ಟದ ಅಧಿಕಾರಿಗಳು ಗಣಿಮಾಲಿಕ ಅಶೋಕ್‌ಗೌಡ ಅವರ ಪರವಾದ ಒಲುವು ಹೊಂದಿದ್ದಾರೆ. ಏನೇ ಆದರೂ ಗಣಿಗಾರಿಕೆ ನಿಲ್ಲುವ ತನಕಪ್ರತಿಭಟನೆ ಕೈ ಬಿಡುವುದಿಲ್ಲ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಅಲ್ಲದೇ, ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿದರು.

ಈ ಸಂದರ್ಭದಲ್ಲಿ ಕನಗನಮರಡಿ ಗ್ರಾಮಪಂಚಾಯ್ತಿ ಅಧ್ಯಕ್ಷ ಸ್ವಾಮಿಗೌಡ, ಕೃಷ್ಣಮೂರ್ತಿ, ನಿಂಗೇಗೌಡ, ಸಿ.ಕುಮಾರ, ರಾಜು, ಚಿಕ್ಕಣ್ಣ, ಗುಣ, ಸುಜೇಂದ್ರ, ಬೋರೇಗೌಡ, ಉಮೇಶ್‌, ನಂದೀಶ್‌ ಮತ್ತಿತರರನ್ನು ಪೊಲೀಸರು ಬಂಧಿಸಿದರು.

ಟಾಪ್ ನ್ಯೂಸ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.