ದಲಿತರ ಮೇಲೆ ಹಲ್ಲೆ, ದೌರ್ಜನ್ಯ ತಡೆಗೆ ಆಗ್ರಹ


Team Udayavani, Jan 12, 2022, 2:20 PM IST

ದಲಿತರ ಮೇಲೆ ಹಲ್ಲೆ, ದೌರ್ಜನ್ಯ ತಡೆಗೆ ಆಗ್ರಹ

ಕೆ.ಆರ್‌.ಪೇಟೆ: ಇತ್ತೀಚಿನ ದಿನಗಳಲ್ಲಿ ದಲಿತರ ಮೇಲೆ ನಿರಂತರವಾಗಿ ಹಲ್ಲೆ, ದೌರ್ಜನ್ಯ ನಡೆಯುತ್ತಿದ್ದರೂ ಪೊಲೀಸ್‌ ಇಲಾಖೆ, ತಾಲೂಕು ಆಡಳಿತ ದಲಿತರಿಗೆ ರಕ್ಷಣೆ ನೀಡುವಲ್ಲಿ ವಿಫಲವಾಗಿವೆ ಎಂದು ರಾಜ್ಯ ಮಾದಿಗ ಸಮಾಜ ಸಂಘಟನೆಯ ತಾಲೂಕು ಅಧ್ಯಕ್ಷ ದೇವರಾಜು ಆರೋಪಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಮಾದಿಗ ಸಮಾಜ ಸಂಘಟನೆ, ಮಂಡ್ಯ ಜಿಲ್ಲಾ ಛಲವಾದಿ ಮಹಾಸಭಾ ಹಾಗೂ ದಲಿತ ಸಂಘರ್ಷ ಸಮಿತಿ ಸೇರಿದಂತೆ ವಿವಿಧ ದಲಿತ ಪರಸಂಘಟನೆಗಳ ಕಾರ್ಯಕರ್ತರು ಹಮ್ಮಿಕೊಂಡಿದ್ದಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ತಾಲೂಕಿನಾದ್ಯಂತ ಕೆಲವು ಹಳ್ಳಿಗಳಲ್ಲಿ ದಲಿತರ ಮೇಲೆ ದಾಳಿ ನಡೆಯುತ್ತಿದ್ದರೂ ಜಿಲ್ಲಾಡಳಿತ, ತಾಲೂಕು ಆಡಳಿತ ಕೈಕಟ್ಟಿ ಕೂತಿವೆ. ಮುಂದಿನ ದಿನ ಗಳಲ್ಲಿ ಇದೇ ರೀತಿ ಮುಂದುವರಿದರೆ ತಾಲೂಕಿನ ಎಲ್ಲಾ ದಲಿತ ಸಂಘಟನೆಗಳ ಜೊತೆ ಸೇರಿ ಬೃಹತ್‌ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಜಾತಿ ನಿಂದನೆ: ಛಲವಾದಿ ಮಹಾಸಭಾದ ಜಿಲ್ಲಾಧ್ಯಕ್ಷ ದಲಿತ ಮುಖಂಡರಾದ ಮಾಂಬಳ್ಳಿ ಜಯರಾಂ ಮಾತನಾಡಿ, ತಾಲೂಕಿನ ಶೀಳನೆರೆ ಹೋಬಳಿ ಎಚ್‌.ಬಳ್ಳೇಕೆರೆ ಗ್ರಾಮದ ದಲಿತ ಮಹಿಳೆಚಂಪಕ ಮತ್ತು ಚೆಲುವರಾಜು ಅವರು ಅಂಗಡಿಯಲ್ಲಿ ಸಾಮಾನು ತರಲು ಹೋಗಿದ್ದಾಗ ಸವ ರ್ಣೀಯ ವ್ಯಕ್ತಿಗಳಾದ ಬಸಪ್ಪ ಮತ್ತು ಅವರ ಪತ್ನಿರೂಪಾಬಸಪ್ಪ ಅವರು ಜಾತಿ ನಿಂದನೆ ಮಾಡಿನಂತರ ದಲಿತ ಕಾಲೋನಿಯ ಬಳಿ ಹೋಗಿ ಹಲ್ಲೆ ನಡೆಸಿ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿದರು.

ಕ್ಷುಲ್ಲಕ ಕಾರಣದಿಂದಾಗಿ ದಲಿತ ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವುದನ್ನು ಖಂಡಿಸಿದಲ್ಲದೇ ಹಲ್ಲೆ ಮಾಡಿದ ಮಹಿಳೆಯನ್ನು ಬಂಧಿಸಬೇಕು. ಅಲ್ಲದೇ ಹಲ್ಲೆಗೊಳಗಾದ ಕುಟುಂ ಬಕ್ಕೆ ಪೋಲೀಸ್‌ ಅಧಿಕಾರಿಗಳು ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದರು.

ಸಭೆ ನಡೆಸಿ: ತಾಲೂಕು ಡಾ.ಜಗಜೀವನರಾಂ ಸಂಘಗಳ ಒಕ್ಕೂಟದ ತಾಲೂಕು ಅಧ್ಯಕ್ಷ ಹೊಸ ಹೊಳಲು ಪುಟ್ಟರಾಜು ಮಾತನಾಡಿ, ಇಂದಿಗೂ ಕೆಲವು ಹಳ್ಳಿಗಳಲ್ಲಿ ಜಾತೀಯತೆ ಜೀವಂತವಾಗಿದೆ. ತಿಂಗಳಿಗೊಮ್ಮೆ ಆದರೂ ದಲಿತರ ಕುಂದುಕೊರತೆ ನಿವಾರಿಸಲು ಪೊಲೀಸ್‌ ಇಲಾಖೆಯ ಹಿರಿಯ ಅದಿಕಾರಿಗಳು ಸಭೆ ನಡೆಸಿ ದಲಿತರಿಗೆ ನ್ಯಾಯ ಕೊಡಿಸಬೇಕೆಂದು ತಿಳಿಸಿದರು.

ತಾಲೂಕು ದಲಿತ ಸಂಘಟನೆ ಸದಸ್ಯರು, ತಾಲೂಕು ಆಡಳಿತ ವಿರುದ್ಧ ಧಿಕ್ಕಾರ ಘೋಷಣೆಕೂಗಿ ಆಕ್ರೋಶ ವ್ಯಕ್ತಪಡಿಸಿದರು. ತಾಪಂ ಮಾಜಿ ಅಧ್ಯಕ್ಷ ಸೋಮಯ್ಯ, ದಲಿತ ಸಂಘರ್ಷ ಸಮಿತಿ ಪಾಂಡವಪುರ ಉಪವವಿಭಾಗೀಯ ಸಂಚಾಲಕ ಲಕ್ಷ್ಮೀಪುರ ರಂಗಸ್ವಾಮಿ, ಕೂಡಲಕುಪ್ಪೆ ರಾಜಯ್ಯ,ಖಜಾಂಚಿ ಪುಟ್ಟರಾಜು, ತಾ.ಸಂ.ಕಾರ್ಯದರ್ಶಿ ಮಹಾದೇವ, ಚಲುವರಾಜು, ಉಪಾಧ್ಯಕ್ಷರಾದ ಮೋಹನ್‌, ಆಲೇನಹಳ್ಳಿ ಮಹದೇವ, ಚಟ್ಟಂಗೆರೆ ನಿಂಗರಾಜು, ಸೋಮೇಶ್‌, ಗ್ರಾಪಂ ಸದಸ್ಯರಾದ ಶಿವು, ಪಿ.ಬಿ.ಮಂಚನಹಳ್ಳಿ ಮಹೇಶ್‌, ರಾಯಸಮುದ್ರ ವೆಂಕಟೇಶ್‌ ಸೇರಿದಂತೆ ತಾಲೂಕುದಲಿತ ಸಂಘಟನೆಯ ನೂರಾರು ಸದಸ್ಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.