ಕರ ವಸೂಲಿಗಾರನ ವಜಾಕ್ಕೆ ಆಗ್ರಹಿಸಿ ಪ್ರತಿಭಟನೆ
Team Udayavani, Oct 26, 2019, 3:45 PM IST
ಮದ್ದೂರು: ತಾಲೂಕಿನ ಕೌಡ್ಲೆ ಗ್ರಾಮ ಪಂಚಾಯಿತಿ ಕರ ವಸೂಲಿಗಾರ ನರಸಿಂಹೇಗೌಡ ಅವರನ್ನು ಕರ್ತವ್ಯದಿಂದ ವಜಾಗೊಳಿಸುವಂತೆ ಒತ್ತಾಯಿಸಿ ಗ್ರಾಪಂ ಸದಸ್ಯರೆ ಪ್ರತಿಭಟನೆಗೆ ಮುಂದಾದ ಘಟನೆ ಶುಕ್ರವಾರ ಜರುಗಿತು.
ತಾಲೂಕಿನ ಕೌಡ್ಲೆ ಗ್ರಾಪಂ ಕಚೇರಿಯ ಬಳಿ ಜಮಾವಣೆಗೊಂಡ ಸದಸ್ಯರು ತಾಲೂಕು ಆಡಳಿತ ಕರ ವಸೂಲಿಗಾರನ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಡಿಸಿ, ಆತನನ್ನು ಕರ್ತವ್ಯದಿಂದ ಬಿಡುಡೆಗೊಳಿಸುವಂತೆ ಒತ್ತಾಯಿಸಿದರು. ಕೌಡ್ಲೆ ಗ್ರಾಪಂ ವ್ಯಾಪ್ತಿಯ ಗ್ರಾಮಗಳಲ್ಲಿರುವ ಸರ್ಕಾರಿ ನಿವೇಶಗಳನ್ನು ಹಣ ಪಡೆದು ಉಳ್ಳವರಿಗೆ ನೀಡುತ್ತಿರುವ ಜತೆಗೆ ಸಮರ್ಪವಾಗಿ ಗ್ರಾಮಗಳಲ್ಲಿ ಕರ ವಸೂಲಿ ಮಾಡದೆ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿವೆ. ಈ ಬಗ್ಗೆ ಅಧ್ಯಕ್ಷರಿಗೆ ಹಲವಾರು ಬಾರಿ ಮನವಿ ಮಾಡಿದರೂ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ ಎಂದು ದೂರಿದರು. ಕರ್ತವ್ಯಕ್ಕೆ ಹಾಜರಾಗದೆ ವಿಳಂಬ ಧೋರಣೆ ಅನುಸರಿಸುತ್ತಿದ್ದು ಪ್ರತಿ ಗ್ರಾಮಗಳಿಗೆ ಭೇಟಿ ನೀಡಿ ಕರ ವಸೂಲಿಗೆ ಮುಂದಾಗದೆ ಪ್ರತಿ ತಿಂಗಳು ಶೇ.3ರಷ್ಟು ವಸೂಲಾತಿಗೆ ಮುಂದಾಗಿರುವುದರಿಂದ ಕುಡಿಯುವ ನೀರು, ರಸ್ತೆ ಅಭಿವೃದ್ಧಿ ವಿದ್ಯುತ್ ದೀಪ ಇನ್ನಿತರರ ಕಾಮಗಾರಿಗಳು ನನೆಗುದಿಗೆ ಬಿದ್ದಿರುವುದಾಗಿ ಆರೋಪಿಸಿದರು.
ಕಂದಾಯ ವಸೂಲಿ ಮಾಡುವ ನರಸಿಂಹೇಗೌಡ ಹಣ ದುರ್ಬಳಕೆ ಮಾಡಿಕೊಂಡಿದ್ದು ಪ್ರತಿದಿನ ಬ್ಯಾಂಕ್ಗೆ ಪಾವತಿಸಿಬೇಕಾದ ಹಣವನ್ನು 15 ದಿನಗಳಿಗೊಮ್ಮೆ ಪಾವತಿಸಿದರೂ ಪಿಡಿಒ ನರಸಿಂಹಮೂರ್ತಿ, ಗ್ರಾಪಂ ಅಧ್ಯಕ್ಷ ರಮೇಶ್, ಕಾರ್ಯದರ್ಶಿ ಶಿವರಾಮು ಕಂಡು ಕಾಣದಂತೆ ಮೌನಕ್ಕೆ ಶರಣಾಗಿದ್ದಾರೆಂದು ದೂರಿದರು. ಸ್ಥಳಕ್ಕೆ ಜಿಪಂ ಸಿಇಒ ಹಾಗೂ ತಾಪಂ ಇಒ ಮಣಿಕಂಠ ಅವರು ಸ್ಥಳಕ್ಕೆ ಆಗಮಿಸುವರೆಗೆ ಪ್ರತಿಭಟನೆ ಕೈ ಬಿಡುವುದಿಲ್ಲ ಎಂದು ಧರಣಿ ಮುಂದುವರಿಸಿದರು. ಪ್ರತಿಭಟನೆಯಲ್ಲಿ ಸದಸ್ಯರಾದ ಮಹೇಂದ್ರ, ಗಿರೀಶ್, ರಮೇಶ್, ಶಂಕುತಲಾ, ಶೋಭಾ ನೇತೃತ್ವವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ