ಪ್ರತಿಭಟನಾ ವಾರಾಚರಣೆ
Team Udayavani, Aug 30, 2020, 1:24 PM IST
ಮಂಡ್ಯ: ರಾಜ್ಯದ ಜಿಎಸ್ಟಿ ತೆರಿಗೆ ಹಣ ನೀಡಬೇಕು ಸೇರಿದಂತೆ ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಸಿಪಿಐಎಂ ವತಿಯಿಂದ ನಡೆಸುತ್ತಿರುವ ಪ್ರತಿಭಟನಾ ವಾರಾಚರಣೆ ಹಿನ್ನೆಲೆಯಲ್ಲಿ ಕಾರ್ಯಕರ್ತರು ಬೇಡಿಕೆ ಪಟ್ಟಿ ಸಲ್ಲಿಕೆ ಮಾಡಿದರು.
ಡೀಸಿ ಕಚೇರಿ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಆದಾಯ ತೆರಿಗೆವ್ಯಾಪ್ತಿಗೆ ಬರದ ಬಡಕುಟುಂಬಗಳಿಗೆ 6 ತಿಂಗಳವರೆಗೆ 7500 ರೂ. ವರ್ಗಾವಣೆ ಮಾಡಬೇಕು. 6 ತಿಂಗಳವರೆಗೆ ತಲಾ 10 ಕೆಜಿ ಉಚಿತ ಆಹಾರ ಧಾನ್ಯ ವಿತರಿಸಬೇಕು. ಉದ್ಯೋಗ ಖಾತ್ರಿ ಯೋಜನೆ ವಿಸ್ತರಿಸಿ ಕೂಲಿದರ ಏರಿಸಿ, 200 ದಿನಗಳ ಕೆಲಸ ಖಾತ್ರಿಪಡಿಸಬೇಕು. ನಗರ ಪ್ರದೇಶಗಳಿಗೂ ಉದ್ಯೋಗ ಖಾತ್ರಿ ವಿಸ್ತರಿಸಬೇಕು. ನಿರುದ್ಯೋಗಿಗಳಿಗೆ ನಿರುದ್ಯೋಗ ಭತ್ಯೆ ನೀಡಬೇಕು ಎಂದು ಆಗ್ರಹಿಸಿದರು.
ಅಂತರಾಜ್ಯ ವಲಸೆ ಕೆಲಸಗಾರರ ಕಾಯ್ದೆ 1979 ಅನ್ನು ತೆಗೆದು ಹಾಕುವ ಪ್ರಸ್ತಾವ ಕೈಬಿಟ್ಟು, ಕಾಯ್ದೆ ಬಲಪಡಿಸಬೇಕು. ಸಾರ್ವಜನಿಕ ಆರೋಗ್ಯಕ್ಕೆ ಕನಿಷ್ಠ ಜಿಡಿಪಿ ಶೇ.3ಕ್ಕೆ ಹೆಚ್ಚಿಸಬೇಕು. ಅಗತ್ಯ ವಸ್ತುಗಳ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ಮಾಡುವ ಎಲ್ಲ ಸುಗ್ರೀವಾಜ್ಞೆ ರದ್ದು ಮಾಡಬೇಕು. ಕಾರ್ಮಿಕ ಕಾನೂನುಗಳನ್ನು ರದ್ದು, ತಿದ್ದುಪಡಿ, ಅಮಾನತು ಮಾಡುವ ಎಲ್ಲ ಪ್ರಸ್ತಾವಗಳನ್ನು ಹಿಂತೆಗೆದುಕೊಳ್ಳಬೇಕು. ಸಾರ್ವಜನಿಕ ಉದ್ದಿಮೆಗಳನ್ನು ಖಾಸಗೀಕರಣ ನಿಲ್ಲಿಸಬೇಕು. ಪಿಎಂ ಖಾಸಗಿ ಟ್ರಸ್ಟ್ನಲ್ಲಿ ಸಂಗ್ರಹವಾಗಿ ನಿಧಿಯನ್ನು ಕೋವಿಡ್ ಸೋಂಕು ಮುಂಚೂಣಿಯಲ್ಲಿರುವ ರಾಜ್ಯಗಳಿಗೆ ವರ್ಗಾಯಿಸಬೇಕು ಎಂದು ಒತ್ತಾಯಿಸಿದರು.
ಸಿಪಿಐಎಂನ ಸಿ.ಕುಮಾರಿ, ನಾರಾಯಣ, ಪುಟ್ಟಮ್ಮ, ಚಂದ್ರಶೇಖರ್, ಲಕ್ಷ್ಮೀ, ಶ್ರೀನಿವಾಸ್, ಗಾಯಿತ್ರಿ, ಅಮಾಸೆ, ಶಿಲ್ಪಶ್ರೀ, ರಾಜು, ರಾಜಮ್ಮ ಹಾಜರಿದ್ದರು.
………………………………………………………………………………………………………………………………………………..
ಜನವಿರೋಧಿ ನೀತಿಗೆ ಖಂಡನೆ : ಮದ್ದೂರು: ಕೇಂದ್ರ ಸರ್ಕಾರದ ಜನವಿರೋಧಿ ನೀತಿಯನ್ನು ಖಂಡಿಸಿ, ಭಾರತ ಕಮ್ಯೂನಿಷ್ಟ್ ಪಕ್ಷದ ಪದಾಧಿಕಾರಿಗಳು ತಾಲೂಕು ಕಚೇರಿಗೆ ಮುತ್ತಿಗೆಹಾಕಿ ಶನಿವಾರ ಪ್ರತಿಭಟನೆ ನಡೆಸಿದರು. ಪಟ್ಟಣದ ತಾಲೂಕು ಕಚೇರಿ ಬಳಿ ಜಮಾಯಿಸಿದ ಸಂಘಟನೆ ಕಾರ್ಯಕರ್ತರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಕೂಡಲೇ ಪ್ರಧಾನಿ ನರೇಂದ್ರ ಮೋದಿ ಅವರು ಜನ ವಿರೋಧಿ ಯೋಜನೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿದರು.
ಲಾಕ್ಡೌನ್ನಿಂದ ಆರ್ಥಿಕ ಸಂಕಷ್ಟ: ಕೇಂದ್ರ ಸರ್ಕಾರ ಏಕಪಕ್ಷೀಯವಾಗಿ ಘೋಷಿಸಿದ ಲಾಕ್ಡೌನ್ನಿಂದ ಆರ್ಥಿಕ ಸಂಕಷ್ಟಗಳಿಗೆ ಸರ್ಕಾರವೇ ಸಂಪೂರ್ಣ ಹೊಣೆಯಾಗಿದೆ. ಕೂಡಲೇ ಎಲ್ಲಾ ವರ್ಗದ ಜನರಿಗೆ ಪರಿಹಾರ ಒದಗಿಸುವಂತೆ ಕೋವಿಡ್ ಸಂಕಷ್ಟ ಅನುಭವಿಸುತ್ತಿರುವ ಜನತೆಗೆ ನೆರವು ನೀಡಲು ಬಿಜೆಪಿ ಸರ್ಕಾರ ನಿರ್ಲಕ್ಷಿಸಿದೆ ಎಂದು ದೂರಿದರು.
ಉದ್ಯೋಗ ಖಾತರಿ ವಿಸ್ತರಿಸಿ: ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ವಿಸ್ತರಿಸಿ, ಕೂಲಿ ದರವನ್ನು ಹೆಚ್ಚಳ ಮಾಡುವ ಜತೆಗೆ ವರ್ಷದ 200 ದಿನಗಳ ಕೆಲಸವನ್ನು ನೀಡಬೇಕು. ಸಾರ್ವಜನಿಕ ಆರೋಗ್ಯಕ್ಕೆ ಕೇಂದ್ರೀಯ ವೆಚ್ಚವನ್ನು ಕನಿಷ್ಠ ಜಿಡಿಪಿಯ ಶೇ.3ಕ್ಕೆ ಹೆಚ್ಚಿಸಬೇಕು. ಬೇಡಿಕೆ ಈಡೇರಿಸುವಂತೆ ತಪ್ಪಿದಲ್ಲಿ ಪ್ರತಿಭಟನೆ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ಸಂಘಟನೆ ಕಾರ್ಯಕರ್ತರಾದ ಡಿ. ಸಿದ್ದರಾಜು, ವಿಷಕಂಠೇಗೌಡ, ರಾಮಚಂದ್ರು, ಸಿದ್ದೇಗೌಡ, ಡಿ.ಕೆ.ಲತಾ, ಶೋಭಾ, ಜಯಮ್ಮ, ಮಹದೇವಸ್ವಾಮಿ, ಹನುಮೇಶ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
MUST WATCH
ಹೊಸ ಸೇರ್ಪಡೆ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್ಐಎ ವಶಕ್ಕೆ
FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್