ಮೈಷುಗರ್ ಕಾರ್ಖಾನೆ ಆರಂಭಕ್ಕೆ ಒತ್ತಾಯ
Team Udayavani, Sep 4, 2020, 2:28 PM IST
ಮಂಡ್ಯ: ಮೈಷುಗರ್ ಕಾರ್ಖಾನೆಯನ್ನು ಒ ಅಂಡ್ ಎಂಗೆ ವಹಿಸುವ ಮೂಲಕ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ಮೈಷುಗರ್ ಕಬ್ಬು ಬೆಳೆಗಾರರ ಒಕ್ಕೂಟ ವತಿಯಿಂದ ರೈತರು ಬೆಂಗಳೂರಿನ ಮೌರ್ಯ ಸರ್ಕಲ್ನಲ್ಲಿ ಪ್ರತಿಭಟನೆ ನಡೆಸಿದರು.
ಮೈಷುಗರ್ ಕಾರ್ಖಾನೆ ವ್ಯಾಪ್ತಿಯಲ್ಲಿ 10 ಲಕ್ಷ ಟನ್ ಕಬ್ಬು ಇದ್ದು, ಕಟಾವಿನ ಅವಧಿ ಮೀರುತ್ತಿದೆ. ಇದರಿಂದರೈತರು ನಷ್ಟ ಅನುಭವಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಕಳೆದ ಬಾರಿ ಕಾರ್ಖಾನೆ ಆರಂಭವಾಗದ ಹಿನ್ನೆಲೆಯಲ್ಲಿ ಸಾಕಷ್ಟು ಸಂಕಷ್ಟ ಅನುಭವಿ ಸಿದ್ದಾರೆ. ಈ ಬಾರಿಯೂ ಇದು ಮುಂದುವರಿದರೆ ರೈತರ ಆತ್ಮಹತ್ಯೆ ಹೆಚ್ಚಾಗಲಿದೆ ಎಂದು ಅಳಲು ತೋಡಿಕೊಂಡರು.
ಸಾಲದ ಸುಳಿಗೆ: ಜುಲೈ, ಆಗಸ್ಟ್ ತಿಂಗಳಿಗೆ ಸಾಕಷ್ಟು ಕಬ್ಬು ಅವಧಿ ಮೀರಿದೆ. ಇನ್ನೂ ಕಟಾವು ಮಾಡದೆ ಇದ್ದರೆ ನಷ್ಟವಾಗಿ ರೈತರು ಸಾಲದ ಸುಳಿಗೆ ಸಿಲುಕಲಿದ್ದಾರೆ. ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಜಿಲ್ಲೆಯ ಮಗನಾಗಿದ್ದು, ಸಕ್ಕರೆ ನಗರ ಎಂಬ ಹೆಸರನ್ನು ಚಿರಸ್ಥಾಯಿ ಯಾಗಿ ಉಳಿಸಲು ಮೈಷುಗರ್ ಕಾರ್ಖಾನೆಯನ್ನು ಒ ಅಂಡ್ ಎಂ ಮೂಲಕ ಪ್ರಾರಂಭಿಸಿ ರೈತರನ್ನು ಕಾಪಾಡಬೇಕು ಎಂದು ಆಗ್ರಹಿಸಿದರು.
ಮನವಿಗೆ ಸಿಎಂ ಸ್ಪಂದನೆ: ಪ್ರತಿಭಟನೆಗೆ ಸ್ಪಂದಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಇನ್ನೊಂದು ವಾರದೊಳಗೆ ಸೂಕ್ತ ನಿರ್ಧಾರ ಕೈಗೊಂಡು ಕಾರ್ಖಾನೆ ಆರಂಭಿಸಲು ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು ಎಂದು ಒಕ್ಕೂಟದ ಅಧ್ಯಕ್ಷ ಸಾತನೂರು ವೇಣುಗೋಪಾಲ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಪ್ರತಿಭಟನೆಯಲ್ಲಿ ಒಕ್ಕೂಟದ ಗೌರವಾಧ್ಯಕ್ಷ ಎಸ್. ಕೃಷ್ಣಕೀಲಾರ, ಉಪಾಧ್ಯಕ್ಷ ಸಂಪಳ್ಳಿ ಶಿವಶಂಕರ್, ಎಂ.ಇ.ಚಂದ್ರಶೇಖರ್ ಮಲ್ಲಿಗೆರೆ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ
Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು
Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ