ನಿವೇಶನ ಮಂಜೂರು ಮಾಡಿ
Team Udayavani, Nov 24, 2020, 4:20 PM IST
ಮಂಡ್ಯ: ನಿವೇಶನಕ್ಕೆ ಗುರುತಿಸಿರುವ ಸರ್ಕಾರಿ ಭೂಮಿಯನ್ನು ವಿತರಿಸುವ ಭರವಸೆ ನೀಡಿದ್ದ ಜಿಲ್ಲಾಡಳಿತ ಕಾರ್ಯಗತಗೊಳಿಸದ ಹಿನ್ನೆಲೆಯಲ್ಲಿ ಬೂದನೂರು ಗ್ರಾಮ ಪಂಚಾಯ್ತಿ ನಿವೇಶನ ರಹಿತರು ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಮತ್ತೆ ಅನಿರ್ದಿಷ್ಟಾವಧಿ ಆಹೋರಾತ್ರಿ ಧರಣಿ ಆರಂಭಿಸಿದರು.
ಕಳೆದ ಅ.12ರಿಂದ 6 ದಿನಗಳ ಕಾಲ ಆಹೋರಾತ್ರಿ ಧರಣಿ ನಡೆಸಿದ್ದ ನಿವೇಶನ ರಹಿ ತರ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದಜಿಲ್ಲಾಡಳಿತದ ಪ್ರತಿನಿಧಿಯಾಗಿ ಆಗಮಿಸಿದ್ದ ಮಂಡ್ಯ ತಹಶೀಲ್ದಾರ್ ಅವರ ಭರವಸೆ ಈಡೇರಿಸಲಿಲ್ಲ ಎಂದು ನಿವೇಶನ ರಹಿತರು ಅಳಲು ತೋಡಿಕೊಂಡರು.
ಡೀಸಿ ಆಶ್ರಯ ಬಡಾವಣೆ ನಾಮಫಲಕ ಪ್ರದರ್ಶನ: ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ ಅವರು ಜಿಲ್ಲೆಗೆ ಆಗಮಿಸಿದ ಬಳಿಕ ನೂರಾರು ಎಕರೆ ಸರ್ಕಾರಿ ಭೂಮಿಯನ್ನುಗುರುತಿಸಿ, ಬಡಜನರಿಗೆ ಹಂಚುವ ಕಾರ್ಯಕ್ರಮ ರೂಪಿಸಿದ್ದಾರೆ. ಹಾಗಾಗಿ ಅವರ ಹೆಸರಿನಲ್ಲಿ ನಮ್ಮ ಗ್ರಾಮದಲ್ಲಿ ನಿರ್ಮಾಣವಾಗುವ ಬಡಾವಣೆಗೆ “ಡಾ.ಎಂ.ವಿ.ವೆಂಕಟೇಶ್ ಆಶ್ರಯ ಬಡಾವಣೆ’ ನಾಮಕರಣ ಮಾಡ ಲಾಗುವುದುಎಂದುನಾಮಫಲಕಪ್ರದರ್ಶನ ಮಾಡಿದರು.
ದಾಖಲೆ ತಿರುಚುವ ಯತ್ನ: ಬೂದನೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ 50 ಎಕರೆ ಸರ್ಕಾರಿ ಭೂಮಿ ಲಭ್ಯವಿದೆ. ಅದರಲ್ಲಿ ಗ್ರಾಮದ ಸರ್ವೆ ನಂ.190/ಪಿ10ರ 2 ಎಕರೆ ಭೂಮಿಯನ್ನು ನಿವೇಶನ ಯೋಗ್ಯ ಭೂಮಿ ಎಂದು ಹಿಗುರುತಿಸಿ ಸರ್ಕಾರಕ್ಕೆ ವರದಿ ಮಾಡಿದ್ದರು. ಸದ್ಯ ಅಳತೆ, ಹದ್ದುಬಸ್ತ್ ಮಾಡುವ ಬದಲು ಪ್ರಭಾವಿಗಳ ಒತ್ತಡಕ್ಕೆಮಣಿದು ದಾಖಲೆಗಳನ್ನು ತಿರುಚುವ ಯತ್ನ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.
ಅಧಿಕಾರಿಗಳು ಸ್ಪಂದಿಸಿಲ್ಲ: ಬೂದನೂರು ಗ್ರಾಪಂ ಮಾಜಿ ಸದಸ್ಯ ಬಿ.ಕೆ.ಸತೀಶಮಾತನಾಡಿ,ಕಳೆದ4 ವರ್ಷಗಳಿಂದ ನಿವೇಶನರಹಿತರು ಹಲವು ಮನವಿ ನೀಡಿ ಹೋರಾಟ ನಡೆಸುತ್ತಿದ್ದರೂ, ಅಧಿಕಾರಿಗಳು ಸ್ಪಂದಿಸದೆ ಅಮಿಷಗಳಿಗೆ ಬಲಿಯಾಗಿ ನಿವೇಶನ ರಹಿತರನ್ನು ವಂಚಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಳೆದ ನಾಲ್ಕು ವರ್ಷಗಳಲ್ಲಿ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ತನಿಖೆನಡೆಸಿ, ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ನಿವೇಶನ ರಹಿತರು ಆಗ್ರಹಿಸಿದರು.
ಪ್ರತಿಭಟನಾ ಧರಣಿಯಲ್ಲಿ ಗ್ರಾಪಂ ಮಾಜಿ ಸದಸ್ಯ ಕುಳ್ಳಪ್ಪ, ಸಿಐಟಿಯುನ ಪ್ರೇಮ, ಸುಧಾ, ಚೇತನ್, ಯಲ್ಲಮ್ಮ, ಕಾಮಾಕ್ಷಿ, ರಜನಿ ಮೊದಲಾದವರಿದ್ದರು.
ಜಿಲ್ಲಾಡಳಿತ ನೀಡಿರುವ ಗಡುವು ಮುಗಿದಿದೆ. ಹಾಗಾಗಿ ಸರ್ಕಾರಿ ಭೂಮಿ 1-5 ಮಾಡುವ ಮುನ್ನಾ ದಿಶಾಂಕ್ ತಂತ್ರಾಂಶ ಬಳಸಿ, ಭೂಮಿ ಗುರುತಿಸಿಕೊಡಬೇಕು. ಬೇಡಿಕೆ ಈಡೇರದಿದ್ದಲ್ಲಿ ಗ್ರಾಮ ಸಭೆಯಲ್ಲಿ ಮುಂದಿನ ಗ್ರಾಮ ಪಂಚಾಯ್ತಿ ಚುನಾವಣೆ ಬಹಿಷ್ಕರಿಸುವ ನಿರ್ಣಯಕೈಗೊಂಡು ಮನವಿ ನೀಡಲಾಗಿದೆ. – ಎಂ.ಬಿ.ನಾಗಣ್ಣಗೌಡ, ಸಂಚಾಲಕ, ಸ್ವಂತ ಮನೆ ನಮ್ಮ ಹಕ್ಕು ಹೋರಾಟ ಸಮಿತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು