![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಗಾಂಧಿ ಜಯಂತಿ ದಿನ ಸರಣಿ ಪ್ರತಿಭಟನೆ
Team Udayavani, Oct 3, 2020, 1:50 PM IST
![ಗಾಂಧಿ ಜಯಂತಿ ದಿನ ಸರಣಿ ಪ್ರತಿಭಟನೆ](https://www.udayavani.com/wp-content/uploads/2020/10/MANDYA-TDY-1-1-620x372.jpg)
ಮಂಡ್ಯ: ನಗರದಲ್ಲಿ ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಸರಣಿ ಪ್ರತಿಭಟನೆಗಳು ರಿಂಗಣಿಸಿದವು. ರೈತಸಂಘ,ಕೃಷಿ ಕೂಲಿಕಾರರ ಪ್ರಾಂತ ರೈತಸಂಘ, ಸ್ವಂತ ಮನೆ ನಮ್ಮ ಹಕ್ಕು, ಸಿಐಟಿಯು, ಆರೋಗ್ಯ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು, ಮಹಿಳಾ ಮುನ್ನಡೆ ಸೇರಿದಂತೆ ನಾಲ್ಕೈದು ಸಂಘಟನೆ ಗಳು ಸರಣಿ ಪ್ರತಿಭಟನೆ ನಡೆಸಿದವು.
ಕಾಯ್ದೆಗಳ ವಿರುದ್ಧ ಆಕ್ರೋಶ: ಭೂ ಸುಧಾರಣೆ, ಎಪಿಎಂಸಿ, ವಿದ್ಯುತ್ ತಿದ್ದುಪಡಿ ಕಾಯ್ದೆಗಳನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿರುವ ಸರ್ಕಾರಗಳ ವಿರುದ್ಧ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ಪ್ರತಿ ಭಟನಾಕಾರರು ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಒಕ್ಕಲೆಬ್ಬಿಸುವಕೆಲಸ: ರೈತ ಸಂಘದ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂ ಗೌಡ ಮಾತನಾಡಿ, ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ಮೂಲಕ ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡಲಾಗುತ್ತಿದೆ. ರೈತರ ಜಮೀನನ್ನು ಬಂಡವಾಳ ಶಾಹಿಗಳಿಗೆ ಕೊಡಲು ಸರ್ಕಾರ ಗಳು ಹೊರಟಿವೆ. ಉಳುವವನೇ ಭೂಮಿಯ ಒಡೆಯ ಎಂಬನಿಯಮ ತೆಗೆದು ಹಾಕಿ, ಉಳ್ಳವನೇ ಭೂಮಿಯ ಒಡೆಯಮಾಡಲು ಹುನ್ನಾರ ನಡೆಸಿದ್ದಾರೆ ಎಂದು ಕಿಡಿಕಾರಿದರು. ರೈತರ ಬೆಳೆಗಳಿಗೆ ಬೆಂಬಲ ಬೆಲೆಘೋಷಿಸುವ ಬದಲು ಎಪಿ
ಎಂಸಿ ಕಾಯ್ದೆಗೆ ತಿದ್ದುಪಡಿ ತಂದು ಬಂಡವಾಳ ಶಾಹಿಗಳ ಕೈಗೆ ಒಪ್ಪಿಸುವಮೂಲಕರೈತರುಕೃಷಿಯಿಂದವಿಮುಖರಾಗುವಂತೆ ಮಾಡಲು ಸರ್ಕಾರ ಹೊರಟಿವೆ. ಇದರ ಜೊತೆಗೆ ವಿದ್ಯುತ್ನ್ನುಖಾಸಗಿಗೆ ನೀಡುವ ಮೂಲಕ ರೈತರು, ಸಾರ್ವಜನಿಕರು, ಬಡವರಿಂದ ಹಣ ವಸೂಲಿ ಮಾಡಲು ಮುಂದಾಗಿದೆ. ವಿದ್ಯುತ್ ಖಾಸಗಿಯಿಂದ ಎಲ್ಲ ವರ್ಗದ ಜನರಿಗೆ ತೊಂದರೆ ಯಾಗಲಿದೆ. ಖಾಸಗಿಯವರು ಇಷ್ಟಬಂದಂತೆ ದರ ಏರಿಸುವುದರಿಂದ ಜನರು ಹೈರಾಣರಾಗಲಿದ್ದಾರೆ. ಆದ್ದರಿಂದ ರೈತರ ವಿರೋಧಿ ಕಾಯ್ದೆಗಳನ್ನುಕೂಡಲೇ ರದ್ದುಪಡಿಸಬೇಕು ಎಂದು ಒತ್ತಾಯಿಸಿದರು. ರೈತಸಂಘ ಮಹಿಳಾಧ್ಯಕ್ಷೆ ಲತಾಶಂಕರ್, ಸಾಮಾಜಿಕ ಕಾರ್ಯಕರ್ತ ಕೆ.ಆರ್.ರವೀಂದ್ರ, ರಾಜಣ್ಣ ಹಾಜರಿದ್ದರು.
ಉದ್ಯೋಗಖಾತ್ರಿಕೂಲಿ ಹೆಚ್ಚಳಕ್ಕೆ ಆಗ್ರಹ: ಮಹಾತ್ಮ ಗಾಂಧಿ ಉದ್ಯೋಗ ಖಾತ್ರೆ ಯೋಜನೆಯಡಿ ದಿನಕ್ಕೆ 600 ರೂ. ಕೂಲಿ, ವರ್ಷದಲ್ಲಿ 200 ದಿನ ಕೆಲಸ, ಯಂತ್ರದ ಹಾವಳಿ ತಪ್ಪಿಸಿ, ಕಾಯಕ ಬಂಧುಗಳಿಗೆ ಗುರುತಿನ ಚೀಟಿ ನೀಡಲು ಮತ್ತುಕೃಷಿ, ಕಾರ್ಮಿಕ, ವಿದ್ಯುತ್, ದಿನಬಳಕೆ ವಸ್ತುಗಳ ಕಾಯ್ದೆಗಳಿಗೆ ಮಾಡಿರುವ ತಿದ್ದುಪಡಿಯನ್ನು ರದ್ದುಪಡಿಸುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ಪ್ರತಿಭಟನಾಕಾರರು ಸರ್ಕಾರ ಹಾಗೂ ಜಿಲ್ಲಾಡಳಿತ ವಿರುದ್ಧ ಘೋಷಣೆಕೂಗಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ತಿಂಗಳಿಗೊಂದು ರೋಜ್ಗಾರ್ ದಿವಸದ ಕಡ್ಡಾಯ ಆಚರಣೆ ಮಾಡಬೇಕು. ಯಂತ್ರದ ಹಾವಳಿ ತಪ್ಪಿಸಬೇಕು. ಕಾಯಕ ಬಂಧುಗಳ ನೋಂದಾಯಿಸಿ ಗುರುತಿನ ಕಾರ್ಡ್ ನೀಡಬೇಕು. ಒಂದು ತಿಂಗಳಿನಿಂದ ಬಾಕಿ ಉಳಿದಿರುವ ಕೂಲಿ ನೀಡಬೇಕು. ಕೃಷಿ, ಕಾರ್ಮಿಕ, ವಿದ್ಯುತ್, ದಿನಬಳಕೆ ವಸ್ತುಗಳ ಕಾಯ್ದೆಗಳಿಗೆ ತಿದ್ದುಪಡಿ ಮಾಡಿರುವುದನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿದರು.
ಜಿಲ್ಲಾಧ್ಯಕ್ಷ ಎಂ.ಪುಟ್ಟಮಾಧು, ಬಿ.ಹನುಮೇಶ್, ಕೆ. ಹನುಮೇಗೌಡ, ಶಿವಮಲ್ಲಯ್ಯ, ನಾಗರಾಜು, ಅಮಾ ಸಯ್ಯ, ಗಿರೀಶ್, ಆರ್.ರಾಜು, ಶಂಕರಪ್ಪ, ಬಸವಣ್ಣ, ಶುಭಾವತಿ, ರಾಮಣ್ಣ ಮತ್ತಿತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ](https://www.udayavani.com/wp-content/uploads/2024/07/KRS-150x84.jpg)
KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ
KRS Dam: ಶೀಘ್ರ ಕೆಆರ್ಎಸ್ ಡ್ಯಾಂ ಭರ್ತಿ 92 ಗ್ರಾಮಗಳಲ್ಲಿ ಪ್ರವಾಹ ಭೀತಿ
![Cheluvaraya-swamy](https://www.udayavani.com/wp-content/uploads/2024/07/Cheluvaraya-swamy-150x90.jpg)
Cauvery Water: ಎಚ್ಡಿಕೆ ಕಾವೇರಿ ಸಮಸ್ಯೆ ಬಗೆಹರಿಸಿದ್ರೆ, ನಾನು ಚುನಾವಣೆಗೆ ಸ್ಪರ್ಧಿಸಲ್ಲ
![HDK](https://www.udayavani.com/wp-content/uploads/2024/07/HDK-3-150x90.jpg)
Cauvery Water Problem; ಸಾಯುವುದರೊಳಗೆ ಕಾವೇರಿ ಸಮಸ್ಯೆಗೆ ಮುಕ್ತಿ: ಎಚ್ಡಿಕೆ
![1-eee](https://www.udayavani.com/wp-content/uploads/2024/07/1-eee-150x82.jpg)
Mandya; ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.