ನಿವೇಶನ ಕಬಳಿಕೆ ತನಿಖೆಗಾಗಿ ಉಪವಾಸ ಸತ್ಯಾಗ್ರಹ
Team Udayavani, Dec 22, 2020, 2:48 PM IST
ಶ್ರೀರಂಗಪಟ್ಟಣ: ಪುರಸಭಾ ವ್ಯಾಪ್ತಿಯಲ್ಲಿ ಬಡವರ ಆಶ್ರಯ ಯೋಜನೆಯ ನಿವೇಶನಗಳನ್ನು ಜನಪ್ರತಿನಿಧಿಗಳು ಕಬಳಿಕೆ ಮಾಡಿದ್ದಾರೆ ಎಂದು ಆರೋಪಿಸಿ, ನಾಗರಿಕ ಹಿತ ರಕ್ಷಣಾ ಸಮಿತಿ ಸದಸ್ಯರು ಪುರಸಭೆ ಮುಂಭಾಗದಲ್ಲಿ ಉಪವಾಸ ಸತ್ಯಾಗ್ರಹ ನಡೆಸಿದರು.
ಹಿತ ರಕ್ಷಣಾ ವೇದಿಕೆ ಅಧ್ಯಕ್ಷ ಚಂದನ್ ನೇತೃತ್ವದಲ್ಲಿ ಕಾರ್ಯಕರ್ತರು, ಪುರಸಭೆಯಲ್ಲಿ ಅವ್ಯವ ಹಾರ ನಡೆದಿದೆ. ಪುರಸಭೆ ಮುಖ್ಯಾಧಿಕಾರಿ ಸೇರಿ ದಂತೆ ಕೆಲ ಜನಪ್ರತಿನಿಧಿಗಳು ಬಡವರು, ನಿವೇಶನ ರಹಿತರಿಗೆ ಆಶ್ರಯ ಯೋಜನೆಯಲ್ಲಿ ನೀಡಲಾಗಿದ್ದ ನಿವೇಶನಗಳನ್ನು ಕಬಳಿಕೆ ಮಾಡಿದ್ದಾರೆ. ಜನಪ್ರತಿನಿಧಿಗಳು ಹಾಗೂ ಉಳ್ಳವರಿಗೆ ಈ ನಿವೇಶನಗಳನ್ನು ನೀಡಿರುವುದು ಕಂಡು ಬಂದಿದ್ದು, ಇವೆಲ್ಲವೂ ಪುರಸಭೆ ಅವ್ಯವಹಾರಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಆಕೊ›àಶ ವ್ಯಕ್ತಪಡಿಸಿದರು.
ನಿವೇಶನ ಹಿಂಪಡೆದುಕೊಳ್ಳಿ: ಜನಪ್ರತಿನಿಧಿಗಳು ಬೇರೆಯವರ ಆಶ್ರಯಯೋಜನೆಗಳ ನಿವೇಶದ ಅಕ್ರಮ ಖಾತೆಗಳನ್ನು ಮಾಡಿಕೊಂಡಿರುವುದು ಕಂಡು ಬಂದಿದೆ. ಕೂಡಲೇ ಅಧಿಕಾರಿಗಳು ತನಿಖೆ ಮಾಡಬೇಕು. ಅಕ್ರಮವೆಸಗಿರುವ ಜನ ಪ್ರತಿನಿಧಿಗಳಿಂದ ನಿವೇಶನವನ್ನು ಸರ್ಕಾರಕ್ಕೆ ಹಿಂಪಡೆದುಕೊಳ್ಳಬೇಕು ಎಂದು ಆಗ್ರಹಿಸಿದರು.
ಹಕ್ಕು ಪತ್ರ ದುರ್ಬಳಕೆಗೆ ಖಂಡನೆ: ಸಮಿತಿಕಾರ್ಯದರ್ಶಿ ಮದನ್ರಾವ್ ಮಾತನಾಡಿ,ನಿವೇಶನ ರಹಿತರಿಗೆ ಆಶ್ರಯಯೋಜನೆಯಿಂದ ನೀಡಿದ ನಿವೇಶನದ ಹಕ್ಕು ಪತ್ರ ದುರ್ಬಳಕೆ ಮಾಡಿ, ಅಕ್ರಮ ಖಾತೆಗಳನ್ನು ಸ್ಥಳಿಯ ಜನಪ್ರತಿ ನಿಧಿಗಳ ಹೆಸರಿಗೆ ಖಾತೆಯಾಗಿರುವುದು ಖಂಡನೆ. ಬಡವರ ಪಾಲು ಉಳ್ಳವರ ಪಾಲಾಗುತ್ತಿದೆ. ಈ ಅವ್ಯವಹಾರದಲ್ಲಿ ಅಧಿಕಾರಿಗಳು ಭಾಗಿಯಾಗಿದ್ದು, ಹಲವು ವರ್ಷದಿಂದ ಕಂದಾಯ ಬಾಕಿ ಇರುವ ನಿವೇಶನಗಳಿಗೆ ಇಲ್ಲಿನ ಜನಪ್ರತಿ ನಿಧಿಗಳೇ ಬೇರೆ ನಿವೇಶನಗಳಿಗೆ ಕಂದಾಯ ಕಟ್ಟಿ ಅಕ್ರಮಖಾತೆಮಾಡಿಸಿಕೊಳ್ಳುತ್ತಿದ್ದಾರೆ.ಕೂಡಲೇ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಸ್ಥಳಕ್ಕೆ ತಹಶೀಲ್ದಾರ್ ಎಂ.ವಿ.ರೂಪ ಭೇಟಿ ನೀಡಿ ಪರಿಶೀಲನೆ ನಡೆಸಿ, ತಪ್ಪಿಸಸ್ಥರ ವಿರುದ್ಧ ಕ್ರಮ ಕೈಗೊಂಡು ಅಕ್ರಮ ಖಾತೆಯಾಗಿದ್ದರೆ ಅದನ್ನು ರದ್ದುಗೊಳಿಸಿ ಎಂದು ಪುರಸಭೆ ಮುಖ್ಯಾಧಿಕಾರಿ ಕೃಷ್ಣ ಅವರಿಗೆ ಸೂಚಿಸಿದರು. ಪುರಸಭೆ ಉಪಾಧ್ಯಕ್ಷ ಎಸ್.ಪ್ರಕಾಶ್, ಸದಸ್ಯ ರಾದ ಕೃಷ್ಣಪ್ಪ, ಶಿವು, ಸತೀಶ್, ಕೆಂಪೇಗೌಡ ರಮೇಶ್, ಅಭಿಷೇಕ್ ಹಾಜರಿದ್ದರು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
KBCಯಲ್ಲಿ 12.5 ಲಕ್ಷ ಗೆದ್ದು ಬಡ ಮಕ್ಕಳ ಆಶಾಕಿರಣವಾದ ರವಿ ಕಟಪಾಡಿ | Udayavani
Whatsapp ಅನ್ನು ಓವರ್ ಟೇಕ್ ಮಾಡಿದ ಸಿಗ್ನಲ್!!??
ದ.ಕ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ವಿತರಣೆ ಅಭಿಯಾನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಚಾಲನೆ
ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ 19 ಲಸಿಕೆ ಅಭಿಯಾನ; ಪ್ರಥಮ ಡೋಸ್ ನೀಡಿ ಚಾಲನೆ
ಉಡುಪಿಯಲ್ಲಿ ಕೋರೋನಾ ಲಸಿಕೆ ಪಡೆದ ಮೊದಲ ವ್ಯಕ್ತಿಯ ಮಾತು
ಹೊಸ ಸೇರ್ಪಡೆ
ಯಾವುದೇ ರಾಜಕೀಯ ಪಕ್ಷಕ್ಕೂ ಸೇರ್ಪಡೆಯಾಗಬಹುದು: ಸದಸ್ಯರಿಗೆ ರಜನಿ ಅಭಿಮಾನಿಗಳ ಸಂಘ!
ಅನುಮಾನಕ್ಕೆ ಎಡೆಮಾಡಿಕೊಟ್ಟ ಶಿಕ್ಷಕ ಹುದ್ದೆ ಸಂದರ್ಶನ
ಮಾವಿನ ಬೆಳೆಗೆ ಅಕಾಲಿಕ ಮಳೆ ಕರಿನೆರಳು : ಭರ್ಜರಿ ಇಳುವರಿ ಕನಸು ಈಗ ನುಚ್ಚುನೂರು
ಜನರ ನಡುವೆ ಹೋಗಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಹೋರಾಟ: ಡಿ ಕೆ ಶಿವಕುಮಾರ್
ಅಧಿಕಾರಿಗೆ ಸಡ್ಡು; ನಂದಿಗ್ರಾಮ ಕ್ಷೇತ್ರದಿಂದ ವಿಧಾನಸಭೆಗೆ ಸ್ಪರ್ಧೆ: ಮಮತಾ ಬ್ಯಾನರ್ಜಿ ಸವಾಲು