ಕುಡಿವ ನೀರಿನ ದರ ಏರಿಕೆ ಖಂಡಿಸಿ ಪ್ರತಿಭಟನೆ
ನೀರು ಗ್ರಾಹಕರ ಜಾಗೃತಿ ವೇದಿಕೆಯಿಂದ ಪ್ರತಿಭಟನೆ • ಜಿಲ್ಲಾಡಳಿತ, ಜಲಮಂಡಳಿ ಅಧಿಕಾರಿಗಳ ಕ್ರಮಕ್ಕೆ ಆಕ್ರೋಶ
Team Udayavani, Jul 2, 2019, 12:22 PM IST
ನಗರದಲ್ಲಿ ಕುಡಿವ ನೀರಿನ ದರ ಏರಿಕೆ ವಿರೋಧಿಸಿ ಕುಡಿಯುವ ನೀರು ಗ್ರಾಹಕರ ಜಾಗೃತ ವೇದಿಕೆಯಿಂದ ಪ್ರತಿಭಟನೆ ನಡೆಸಲಾಯಿತು.
ಮಂಡ್ಯ: ನಗರ ಕುಡಿಯುವ ನೀರಿನ ಅವೈಜ್ಞಾನಿಕ ದರ ಏರಿಕೆ ವಿರುದ್ಧ ಕುಡಿಯುವ ನೀರು ಗ್ರಾಹಕರ ಜಾಗೃತಿ ವೇದಿಕೆ ಕಾರ್ಯಕರ್ತರು ಸೋಮವಾರ ನಗರದ ಜಲಮಂಡಳಿ ಎದುರು ಪ್ರತಿಭಟನೆ ನಡೆಸಿದರು.
ಜಲಮಂಡಳಿ ಎದುರು ಜಮಾಯಿಸಿದ ವೇದಿಕೆ ಕಾರ್ಯಕರ್ತರು, ಜನಪ್ರತಿನಿಧಿಗಳ ಗಮನಕ್ಕೇ ತರದೆ ಕುಡಿಯುವ ನೀರಿನ ದರ ಏರಿಸಿರುವ ಅಧಿಕಾರಿಗಳು ಹಾಗೂ ಅದಕ್ಕೆ ಅನುಮತಿ ನೀಡಿರುವ ಜಿಲ್ಲಾಧಿಕಾರಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕುಡಿಯುವ ನೀರಿನ ದರ ಏರಿಕೆ ನಿರ್ಧಾರವನ್ನು ಕೂಡಲೇ ವಾಪಸ್ ಪಡೆಯುವಂತೆ ಆಗ್ರಹಿಸಿದರು. ಜಲಮಂಡಳಿಯಿಂದ ಮಂಡ್ಯ ನಗರಕ್ಕೆ ಸಮರ್ಪಕ ನೀರು ಪೂರೈಕೆಯಾಗುತ್ತಿಲ್ಲ. ನಾಲ್ಕೈದು ದಿನಗಳಿಗೊಮ್ಮೆ ನೀರು ಸರಬರಾಜು ಮಾಡುತ್ತಿದ್ದು, ಕೆಲವು ಸಲ ಪೂರೈಕೆಯಾಗುವ ನೀರು ಕುಡಿಯಲು ಯೋಗ್ಯವಾಗಿರುವುದಿಲ್ಲ ಎಂದು ಆರೋಪಿಸಿದರು.
ಮನಸಿಗೆ ಬಂದಾಗ ನೀರು: ನಗರದ ವಿವಿಧ ಬಡಾವಣೆಗಳಿಗೆ ನೀರು ಬಿಡುವ ಸಮಯವೂ ನಿಗದಿಯಾಗಿರುವುದಿಲ್ಲ. ಇಷ್ಟಬಂದಾಗ ನೀರು ಸರಬರಾಜು ಮಾಡುವ ಚಾಳಿ ಬೆಳೆಸಿಕೊಂಡಿದ್ದಾರೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ದೂರಿದರು.
ಜನರ ಶೋಷಣೆ: ಈವರೆಗೆ ಕುಡಿಯುವ ನೀರು ಸರಬರಾಜಿಗೆ ಪ್ರತಿ ಮನೆಯಿಂದ 120 ರೂ. ಪಡೆಯಲಾಗುತ್ತಿತ್ತು. ಆ ದರವನ್ನು ಏಪ್ರಿಲ್ 1ರಿಂದ ದಿಢೀರನೆ 282 ರೂ.ಗೆ ಏರಿಕೆ ಮಾಡಲಾಗಿದೆ. ಅಲ್ಲದೆ, 2018 ರಿಂದ 2019ರ ಏಪ್ರಿಲ್ವರೆಗೆ 2229 ರೂ. ಬಾಕಿ ಎಂದು ನೋಟೀಸ್ ನೀಡಲಾಗಿದೆ. ಇದರ ಹಿಂದೆ ಜನರನ್ನು ಶೋಷಣೆ ಮಾಡುವ ತಂತ್ರ ಅಡಗಿದೆ ಎಂದು ಆರೋಪಿಸಿದರು.
ನಗರಸಭೆಗೆ ಹೊಸದಾಗಿ ಚುನಾಯಿತರಾದ ಸದಸ್ಯರು ಅಧಿಕೃತವಾಗಿ ಆಡಳಿತಕ್ಕೆ ಬರುವ ತನಕ ದರ ಹೆಚ್ಚಿಸಬಾರದು ಎಂದು ಜಿಲ್ಲಾಧಿಕಾರಿ, ನಗರಸಭೆ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ. ಆ ಹಿನ್ನೆಲೆಯಲ್ಲಿ ನೀರಿನ ಕರವನ್ನು 120 ರೂ.ನಿಂದ 282 ರೂ.ಗೆ ಹೆಚ್ಚಿಸಿರುವ ದರವನ್ನು ಕೂಡಲೇ ರದ್ದುಪಡಿಸಬೇಕು. ಅಲ್ಲದೆ, ಬಾಕಿ ಹಣ ನೀಡುವ ಆದೇಶವನ್ನೂ ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ವೇದಿಕೆ ಕಾರ್ಯಕರ್ತರಾದ ವೆಂಕಟಗಿರಿಯಯ್ಯ, ಸಿ.ಕುಮಾರಿ, ಎಂ.ಎಸ್.ಚಿದಂಬರ್, ಬೇಕ್ರಿ ರಮೇಶ್, ಸತ್ಯಸಾವಿತ್ರಿ, ಸುಚಿತಾ, ಮಲ್ಲೇಶ, ಹೇಮಂತ್ಕುಮಾರ್, ವೈ.ಥಾಮಸ್ ಬೆಂಜಮಿನ್, ನಗರಸಭೆ ಮಾಜಿ ಸದಸ್ಯ ಮಹೇಶ್, ಸುನೀತಾ, ಶಿವರಾಜ್ ಮರಳಿಗ, ಶಾಂತಮ್ಮ, ಕಮಲಮ್ಮ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?