ಸಮರ್ಪಕ ಉದ್ಯೋಗ ಖಾತ್ರಿ ಕೆಲಸ ಕೊಡಿ


Team Udayavani, Jul 23, 2019, 1:47 PM IST

mandya-tdy-1

ಭಾರತೀನಗರದ ಶೆಟ್ಟಹಳ್ಳಿ ಗ್ರಾಪಂಗೆ ಕೃಷಿ ಕೂಲಿ ಕಾರ್ಮಿಕರು ಉದ್ಯೋಗ ಖಾತ್ರಿ ಯೋಜನೆಯಡಿ ಸಮರ್ಪಕವಾಗಿ ಕೆಲಸ ನೀಡುವಂತೆ ಜಿಲ್ಲಾಧ್ಯಕ್ಷ ಪುಟ್ಟಮಾದು ನೇತೃತ್ವದಲ್ಲಿ ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

ಭಾರತೀನಗರ: ಉದ್ಯೋಗ ಖಾತ್ರಿ ಕೆಲಸ ಸಮರ್ಪಕವಾಗಿ ನೀಡಿ, ಗುತ್ತಿಗೆದಾರರ ಹಾವಳಿ ತಪ್ಪಿಸಲು ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಹೋಬಳಿಯ ಶೆಟ್ಟಹಳ್ಳಿ ಗ್ರಾಪಂಗೆ ಕೂಲಿಕಾರ್ಮಿಕರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಪಂಚಾಯ್ತಿ ವ್ಯಾಪ್ತಿಯ ಹನುಮಂತನಗರ, ಕರಡಕೆರೆ, ಅರೆಚಾಕನಹಳ್ಳಿ, ಶೆಟ್ಟಹಳ್ಳಿ ಕೂಲಿ ಕಾರ್ಮಿಕರು ಕಚೇರಿಗೆ ಜಮಾಯಿಸಿ, ಗ್ರಾಮೀಣರ ಗುಳೆ ತಪ್ಪಿಸಲು ಸರ್ಕಾರ ಉದ್ಯೋಗ ಖಾತ್ರಿ ಯೋಜನೆ ಜಾರಿಗೆ ತಂದಿದೆ. ಆದರೆ, ಅಧಿಕಾರಿಗಳು ಸಮರ್ಪಕವಾಗಿ ಕೆಲಸ ನೀಡದೆ ಯಂತ್ರಗಳ ಮೂಲಕ ಕೆಲಸ ಮಾಡಿಸಿ ಕೂಲಿಕಾರ್ಮಿಕರನ್ನು ವಂಚಿಸುತ್ತಿದ್ದಾರೆ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಪ್ರಾಂತ ಕೃಷಿ ಕೂಲಿಕಾರರ ಸಂಘದ ಜಿಲ್ಲಾಧ್ಯಕ್ಷ ಎಂ.ಪುಟ್ಟ ಮಾದು ಮಾತನಾಡಿ, ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆ ಜಿಲ್ಲೆಗೆ ಜಾರಿಯಾಗಿ 11 ವರ್ಷ ಕಳೆದರೂ ಇದುವರೆಗೂ ಜಿಲ್ಲಾದ್ಯಂತ ಗ್ರಾಪಂಗಳು ಕೂಲಿಕಾರರಿಗೆ ಸಮರ್ಪಕ ಕೆಲಸ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಕೆಲಸ ಕೇಳಿ ನಮೂನೆ -7ರಲ್ಲಿ ಅರ್ಜಿ ಸಲ್ಲಿಸಿರುವ ಎಲ್ಲಾ ಕೂಲಿಕಾರರಿಗೂ ಕೆಲಸ ನೀಡಬೇಕು. ಎನ್‌ಎಂಆರ್‌ ತೆಗೆಯದೆ ಕಾನೂನು ಬಾಹಿರವಾಗಿ ಕೆಲಸ ಮಾಡಿಸಬಾರದು. ಉದ್ದೇಶ ಪೂರಕವಾಗಿ ಕೆಲಸ ನೀಡದೆ ಕೂಲಿಕಾರರನ್ನು ವಂಚಿಸಬಾರದು ಎಂದು ಹೇಳಿದರು.

ಈಗಾಗಲೇ ಆರ್‌ಬಿಐ ನಿರ್ದೇಶನದಂತೆ ಷರತ್ತಿಲ್ಲದೆ ಬ್ಯಾಂಕ್‌ಗಳಿಗೆ ಸಾಲ ಕೇಳಿ ಅರ್ಜಿ ಸಲ್ಲಿಸಿರುವ ಕೂಲಿಕಾರರಿಗೆ ಸಾಲ ನಿಡಬೇಕು. ಕೂಲಿಕಾರರಿಗೆ ಗುರುತಿನ ಚೀಟಿ ನೀಡಬೇ ಕೆಂದು ಆಗ್ರಹಿಸಿದರು. ಸ್ಥಳಕಾಗಮಿಸಿದ ಇಂಜಿನೀಯರ್‌ ಲೋಹಿತ್‌ ಮತ್ತು ಎ.ಡಿ.ಮಂಜುನಾಥ್‌ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಿ ಕೂಲಿಕಾರರಿಗೆ ಸಮರ್ಪಕ ಉದ್ಯೋಗ ನೀಡಲು ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆದರು.

ಪುಟ್ಟಚನ್ನಮ್ಮ, ಚಂದ್ರಕಲಾ, ಶಶಿಕಲಾ, ಪದ್ಮಮಮ್ಮ, ಸವಿತಾ, ಚಂದ್ರಮ್ಮ, ವರಲಕ್ಷ್ಮೀ, ತಿಮ್ಮಯ್ಯ, ಕಮಲಮ್ಮ, ಅನಿತಾ, ಜಯಲಿಂಗೇ ಗೌಡ, ಆಶಾ, ರಾಧ ಇತರರಿದ್ದರು.

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.