ಗಣಕೀಕೃತ ಆರ್‌ಟಿಸಿಗೆ ಪೂರಕ ದಾಖಲೆ ಕೊಡಿ

10 ದಿನ ದಾಖಲೆ ಸಂಗ್ರಹಿಸಲು ಡೀಸಿ ಮಂಜುಶ್ರೀ ಸೂಚನೆ

Team Udayavani, Jul 20, 2019, 1:50 PM IST

mandya-tdy-2

ಮಂಡ್ಯ ತಾಲೂಕಿನ ಹೊನಗಳ್ಳಿಮಠ ಗ್ರಾಮದಲ್ಲಿ ನಡೆದ ಪಹಣಿ ಗಣಕೀಕೃತ ಆರ್‌ಟಿಸಿ ತಿದ್ದುಪಡಿ ಆಂದೋಲನ ಕಂದಾಯ ಅದಾಲತ್‌ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಮಂಜುಶ್ರೀ ಉದ್ಘಾಟಿಸಿದರು.

ಮಂಡ್ಯ: ತಾಲೂಕಿನ ಕೆರೆಗೋಡು ಹೋಬಳಿ ಆಲಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಡುವ ಹೊನಗಳ್ಳಿಮಠ ಇನಾಂ ಗ್ರಾಮವಾಗಿದ್ದು, ಇದುವರೆಗೂ ಗಣಕೀಕೃತ ಆರ್‌ಟಿಸಿ ಆಗದೇ ಇರುವುದರಿಂದ ರೈತರು ಆರ್‌ಟಿಸಿ ಪಡೆಯಲು ತಮ್ಮಲ್ಲಿರುವ ಅಗತ್ಯ ದಾಖಲೆಗಳನ್ನು ನೀಡಿ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಮಂಜುಶ್ರೀ ಮನವಿ ಮಾಡಿದರು.

ತಾಲೂಕಿನ ಹೊನಗಳ್ಳಿಮಠ ಗ್ರಾಮದಲ್ಲಿ ನಡೆದ ಪಹಣಿ ಗಣಕೀಕೃತ ಆರ್‌ಟಿಸಿ ತಿದ್ದುಪಡಿ ಆಂದೋಲನ ಕಂದಾಯ ಅದಾಲತ್‌ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಹೊನಗಳ್ಳಿಮಠ ಗ್ರಾಮದ ಕೆಲವು ಕೈ ಬರಹ ಪಹಣಿಯನ್ನು ಆಕಾರ್‌ ಬಂದ್‌ನಂತೆ ಗಣಕೀಕೃತ ಆರ್‌ಟಿಸಿಗೆ ತಾಳೆ ಮಾಡಲಾಗಿದ್ದು, ಇನ್ನು ಕೆಲವು ಬಾಕಿ ಇರುವ ಪಹಣಿಗಳನ್ನು ತಾಳೆ ಮಾಡಬೇಕಾಗಿದೆ. ಈ ಪಹಣಿಗಳನ್ನು ತಾಳೆ ಮಾಡಲು ದಾಖಲೆಗಳು ಅವಶ್ಯವಾಗಿರುತ್ತದೆ ಎಂದು ತಿಳಿಸಿದರು.

ದಾಖಲೆ ನೀಡಿ ಸಹಕರಿಸಿ: ಹಿಂದುಳಿದ ಜಿಲ್ಲೆ ರಾಯಚೂರಿನ ಕಂದಾಯ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದಾಗ ಅಲ್ಲಿ ಯಾವ ಗ್ರಾಮಕ್ಕೂ ಆರ್‌ಟಿಸಿ ಇಲ್ಲದೆ ಇರಲಿಲ್ಲ. ಆದರೆ, ಇಲ್ಲಿ ಹೊನಗಹಳ್ಳಿಮಠ ಗ್ರಾಮಕ್ಕೆ ಆರ್‌ಟಿಸಿ ಇಲ್ಲ. ಕೂಡಲೇ ಆರ್‌ಟಿಸಿ ನೀಡಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆದ್ದರಿಂದ ರೈತರು ಸಹ ತಮ್ಮಲ್ಲಿರುವ ದಾಖಲಾತಿಗಳನ್ನು ಅಧಿಕಾರಿಗಳಿಗೆ ನೀಡಿ ಸಹಕಾರ ನೀಡಬೇಕು ಎಂದು ಹೇಳಿದರು.

ಈ ಗ್ರಾಮದ ವ್ಯಾಪ್ತಿಗೆ ಬರುವ ಗ್ರಾಮ ಲೆಕ್ಕಾಧಿಕಾರಿಗಳು 10 ದಿನ ಬೆಳಿಗ್ಗೆ 9 ರಿಂದ 11 ಗಂಟೆವರೆಗೂ ಗ್ರಾಮದಲ್ಲಿದ್ದು, ರೈತರಿಂದ ಎಲ್ಲ ರೀತಿಯ ದಾಖಲೆಗಳನ್ನು ಪಡೆದುಕೊಳ್ಳುವಂತೆ ತಿಳಿಸಿದ ಜಿಲ್ಲಾಧಿಕಾರಿ ಗಳು, ಏನಾದರೂ ವ್ಯತ್ಯಾಸವಾಗಿದ್ದಲ್ಲಿ ರೈತರು ಅಧಿಕಾರಿಗಳೊಂದಿಗೆ ಚರ್ಚೆ ಮಾಡಿ ಸರಿಪಡಿಸಿಕೊಳ್ಳಿ ಎಂದು ಹೇಳಿದರು.

ಆರ್‌ಟಿಸಿಗೆ ವಂಶವೃಕ್ಷ ಕಡ್ಡಾಯ: ಆರ್‌ಟಿಸಿ ಪಡೆಯಲು ವಂಶವೃಕ್ಷ ಕಡ್ಡಾಯವಾಗಿರುತ್ತದೆ. ಆದ್ದರಿಂದ ರೋಟರಿ ಮೂಲಕ ತಮ್ಮ ವಂಶವೃಕ್ಷವನ್ನು ದೃಢೀಕರಿಸಿಕೊಂಡು ನಂತರ ನಾಡಕಚೇರಿ ಅಧಿಕಾರಿಗಳಿಗೆ ಕೊಟ್ಟರೆ ಅವರು ವಾರದೊಳಗೆ ನಿಮಗೆ ವಂಶವೃಕ್ಷ ನೀಡುತ್ತಾರೆ ಎಂದು ತಿಳಿಸಿದರು.

ಆರ್‌ಟಿಸಿಯಲ್ಲಿ ಯಾವುದೇ ರೀತಿಯ ತಂಟೆ ತಕರಾರು ಬಂದರೆ ಅವುಗಳನ್ನು ಸರಿಪಡಿಸಲು ಹಾಗೂ ಅವರೊಂದಿಗೆ ಚರ್ಚೆ ನಡೆಸಲು ಪ್ರತಿ ಮಂಗಳವಾರ ವಿಶೇಷ ದಿನ ಎಂದು ನಡೆಸಲು ತೀರ್ಮಾನಿಸಲಾಗಿದೆ. ಅಂದು ಬಂದು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಬಹುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಂಡ್ಯ ಉಪ ವಿಭಾಗಧಿಕಾರಿಗಳಾದ ಹೋಟೆಲ್ ಶಿವಪ್ಪ, ಭೂ ದಾಖಲೆಗಳ ಸಹಾಯಕ ನಿರ್ದೇಶಕ ನಿರಂಜನ್‌, ಮಂಡ್ಯ ತಹಶೀಲ್ದಾರ್‌ ಎಲ್. ನಾಗೇಶ್‌ ಮತ್ತಿತರರು ಉಪಸ್ಥಿತರಿದರು.

ಟಾಪ್ ನ್ಯೂಸ್

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.