ಏಕವಚನದಲ್ಲಿ ಸಚಿವ-ಶಾಸಕರ ವಾಗ್ಯುದ್ಧ!
Team Udayavani, May 28, 2020, 5:13 AM IST
ಮಂಡ್ಯ: ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಲು ಕರೆದಿದ್ದ ಸಭೆ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ನಾಗಮಂಗಲ ಕ್ಷೇತ್ರದ ಶಾಸಕರ ಕಚ್ಚಾಟ ದ ವೇದಿಕೆಯಾಗಿ ಮಾರ್ಪಟ್ಟಿತು. ಸಭೆಯಲ್ಲಿ ಜನಪ್ರತಿನಿಧಿಗಳು ಪರಸ್ಪರ ಕಚ್ಚಾಡಿ ಕೊಂಡು ಏಕವಚನದಲ್ಲಿ ಬೈದಾಡಿಕೊಂಡರು.
ಇಬ್ಬರು ಕೈ ಕೈ ಮಿಲಾಯಿಸುವ ಹಂತವನ್ನೂ ತಲುಪಿದರು. ಸಚಿವ-ಶಾಸಕರ ನಡುವಿನ ಕಿತ್ತಾ ಟಕ್ಕೆ ಜಿಲ್ಲಾಧಿಕಾರಿಯೂ ಸೇರಿದಂತೆ ಅಧಿಕಾರಿ ವರ್ಗ ಮೂಕಪ್ರೇಕ್ಷಕವಾಗಿತ್ತು. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡರ ಅಧ್ಯಕ್ಷತೆಯಲ್ಲಿ ಕೋವಿಡ್-19 ನಿಯಂತ್ರಣ ಕುರಿತು ಜಿಲ್ಲಾಮ ಟ್ಟದ ಅಧಿಕಾರಿಗಳ ಸಭೆ ಕರೆಯಲಾಗಿತ್ತು.
ಅಧಿಕಾರಿಗಳಿಗೆ ತರಾಟೆ: ಸಭೆಯಲ್ಲಿ ಕೊರೊನಾ ಸೋಂಕಿತರ ಬಗ್ಗೆ ಸಮರ್ಪಕ ಮಾಹಿತಿ ನೀಡದಿರುವುದು, ಕ್ವಾರಂಟೈನ್ ಆದವ ರಿಗೆ ಸಮರ್ಪಕ ಸೌಲಭ್ಯ ಒದಗಿಸದಿರುವು ದು, ಕೊರೊನಾ ಪರೀಕ್ಷಾ ವರದಿಗಳು ಅದಲು- ಬದಲಾಗಿರುವುದು ಸೇರಿದಂತೆ ಹಲವಾರು ವಿಚಾರಗಳ ಬಗ್ಗೆ ಜೆಡಿಎಸ್ ಶಾಸ ಕರು ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದು ಕೊಂಡರು.
ತಿರುಗಿ ಬಿದ್ದ ಶಾಸಕರು: ಈ ವೇಳೆ ಅಧಿಕಾರಿಗಳ ನ್ನು ಸಮರ್ಥಿಸಿಕೊಳ್ಳುವುದಕ್ಕೆ ಸಚಿವ ನಾರಾ ಯಣಗೌಡರು ಮುಂದಾದರು. ಸಚಿವರ ಸಮರ್ಥನೆಯನ್ನು ಒಪ್ಪದ ಜೆಡಿಎಸ್ ಶಾಸ ಕರು ಸಚಿವರ ವಿರುದ್ಧ ತಿರುಗಿಬಿದ್ದರು. ಈ ಸಮಯದಲ್ಲಿ ಸಚಿವ ನಾರಾಯಣಗೌಡ ಹಾಗೂ ನಾಗಮಂಗಲ ಶಾಸಕ ಸುರೇಶ್ಗೌಡರ ನಡುವೆ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿತು. ತಾಳ್ಮೆ ಕಳೆದುಕೊಂಡ ಸಚಿವರು ಶಾಸಕ ಸುರೇಶ್ಗೌಡರನ್ನು ಏಕವಚನದಲ್ಲಿ ನಿಂದಿಸಿದರು.
ನೀನ್ಯಾವನೋ ನನ್ನ ಕೇಳ್ಳೋಕೆ. ಮುಚ್ಕೊಂಡು ಹೊಗಲೇ.. ಎಂದು ಏರುದನಿ ಯಲ್ಲಿ ಕೂಗಾಡಿದರು. ನೀವು ಹೇಳಿದೆ°ಲ್ಲಾ ಕೇಳ್ಕೊಂಡು ಹೋಗೋಕೆ ನಾವು ಬಂದಿಲ್ಲ ಎಂದು ಕಚ್ಚಾಡಿಕೊಂಡರು. ಈ ಸಮಯದಲ್ಲಿ ಶಾಸಕ ಸುರೇಶ್ಗೌಡರ ಬೆಂಬಲಕ್ಕೆ ನಿಂತ ಶ್ರೀರಂಗಪಟ್ಟಣ ಕ್ಷೇತ್ರದ ಶಾಸಕ ರವೀಂದ್ರ ಶ್ರೀಕಂಠಯ್ಯ, ಗೌರವ ಕೊಟ್ಟು ಮಾತನಾಡುವು ದನ್ನು ಕಲಿಯಿರಿ. ಇಂತಹ ಕೀಳುಮಟ್ಟದ ಮಾತುಗಳು ನಿಮಗೆ ಶೋಭೆ ತರುವುದಿಲ್ಲ ಎಂದು ಸಚಿವರನ್ನು ಖಂಡಿಸಿದರು.
ಪತ್ರಕರ್ತರನ್ನು ಹೊರಗಿಟ್ಟು ಸಭೆ: ಕೋವಿಡ್ -19 ನಿಯಂತ್ರಣ ಕುರಿತು ಜಿಲ್ಲಾಧಿಕಾರಿ ಕಚೇರಿ ಯಲ್ಲಿ ನಡೆದ ಸಭೆಗೆ ಪತ್ರಕರ್ತರು ಹಾಗೂ ದೃಶ್ಯ ಮಾಧ್ಯಮದವರನ್ನು ಹೊರಗಿಡಲಾಗಿತ್ತು. ಕಚ್ಚಾಟದ ದೃಶ್ಯವನ್ನು ಸೆರೆಹಿಡಿಯಲು ಮುಂದಾದ ದೃಶ್ಯ ಮಾಧ್ಯಮದವರನ್ನು ಶಾಸ ಕರು ಹಾಗೂ ಅಧಿಕಾರಿಗಳು ತಡೆಹಿಡಿದರು. ಸಭೆಯಲ್ಲಿ ಡೀಸಿ ಡಾ.ವೆಂಕಟೇಶ್, ಜಿಪಂ ಸಿಇಒ ಯಾಲಕ್ಕೀಗೌಡ, ಎಸ್ಪಿ ಪರಶುರಾಮ, ಡಿಎಚ್ಒ ಡಾ.ಮಂಚೇಗೌಡ, ಶಾಸಕರಾದ ಪುಟ್ಟರಾಜು, ಶ್ರೀನಿವಾಸ್, ಡಾ.ಅನ್ನದಾನಿ, ಸುರೇಶ್ ಗೌಡ, ರವೀಂದ್ರ ಶ್ರೀಕಂಠಯ್ಯ, ಎಂಎಲ್ಸಿ ಅಪ್ಪಾಜಿಗೌಡ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?