30 ನಿಮಿಷದಲ್ಲಿ 3.5 ಕೆ.ಜಿ.ರಾಗಿ ಮುದ್ದೆ ತಿಂದ ಶಿವಲಿಂಗುಗೆ ಬಹುಮಾನ


Team Udayavani, Jun 27, 2022, 3:56 PM IST

30 ನಿಮಿಷದಲ್ಲಿ 3.5 ಕೆ.ಜಿ.ರಾಗಿ ಮುದ್ದೆ ತಿಂದ ಶಿವಲಿಂಗುಗೆ ಬಹುಮಾನ

ಮಳವಳ್ಳಿ: ಗ್ರಾಮೀಣ ಕ್ರೀಡೆಗಳೇ ನಶಿಸಿ ಹೋಗುತ್ತಿರುವ ದಿನಮಾನಗಳಲ್ಲಿ ರಾಗಿಮುದ್ದೆ ಊಟದ ಸ್ಪರ್ಧೆಯಂಥ ಕ್ರೀಡೆಗಳಿಂದ ಜನರ ಮನಸ್ಸಿನಲ್ಲಿ ಗ್ರಾಮೀಣ ಕ್ರೀಡೆಗಳನ್ನು ಉಳಿಸಿ ಬೆಳೆಸಬೇಕೆಂಬ ಆಸಕ್ತಿ ಮೂಡಲಿದೆ ಎಂದು ಪುರಸಭೆ ಉಪಾಧ್ಯಕ್ಷ ಎಂ.ಟಿ.ಪ್ರಶಾಂತ್‌ ಅಭಿಪ್ರಾಯಪಟ್ಟರು.

ಪಟ್ಟಣದ ಶಾಂತಿ ಕಾಲೇಜು ಮುಂಭಾಗದಲ್ಲಿ ಜಯ ಕರ್ನಾಟಕ ಜನಪರ ವೇದಿಕೆ ತಾಲೂಕು ಘಟಕದ ವತಿಯಿಂದ ಆಯೋಜಿಸಿದ್ದ 4ನೇ ವರ್ಷದ ರಾಗಿಮುದ್ದೆ ಊಟದ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದರು. ಪ್ರೋತ್ಸಾಹಿಸಿ: ಕಬಡ್ಡಿ, ಎತ್ತಿನಗಾಡಿ ಸ್ಪರ್ಧೆ, ಕೆಸರುಗದ್ದೆ ಓಟದಂತಹ ಗ್ರಾಮೀಣ ಕ್ರೀಡೆಗಳ ಜತೆಗೆ ಇದೀಗ ನಾಟಿಕೋಳಿ ಸಾರು-ರಾಗಿಮುದ್ದೆ ಊಟದ ಸ್ಪರ್ಧೆಯೂ ಸೇರ್ಪಡೆಗೊಳ್ಳು ತ್ತಿರುವ ಸಂತಸ ತಂದಿದೆ. ಇಂತಹ ಸ್ಪರ್ಧೆಗಳನ್ನು ಮುಂದಿನ ದಿನಗಳಲ್ಲಿ ರಾಜ್ಯ, ರಾಷ್ಟ್ರಮಟ್ಟದಲ್ಲಿ ಆಯೋಜಿಸುವ ಮೂಲಕ ಪ್ರೋತ್ಸಾಹಿಸಬೇಕು ಎಂದು ಹೇಳಿದರು.

20ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ: ಜಿಲ್ಲೆಯ ವಿವಿಧೆಡೆಯಿಂದ 20ಕ್ಕೂ ಅಧಿಕ ಸ್ಪರ್ಧಿಗಳು ಭಾಗಿಯಾಗಿದ್ದರು. ಪುರಸಭೆ ಸದಸ್ಯ ಕುಮಾರ್‌, ಮಾಜಿ ಅಧ್ಯಕ್ಷ ದೊಡ್ಡಯ್ಯ, ಬಿಜೆಪಿ ರೈತ ಮೋರ್ಚಾದ ಜಿಲ್ಲಾ ಘಟಕದ ಉಪಾಧ್ಯಕ್ಷ ಯಮದೂರು ಸಿದ್ದರಾಜು, ಜಯಕರ್ನಾಟಕ ಸಂಘಟನೆ ರಾಜ್ಯ ಘಟಕದ ಕಾರ್ಯದರ್ಶಿ ರವಿಕುಮಾರ್‌, ತಾಲೂಕು ಘಟಕದ ಅಧ್ಯಕ್ಷ ಎಂ.ಪಿ.ನಾಗೇಶ್‌, ಒಕ್ಕಲಿಗರ ಸಂಘದ ತಾಲೂಕು ಘಟಕದ ನಿರ್ದೇಶಕಿ ಜಯಮ್ಮ, ಮುಖಂಡರಾದ ನಾಗರಾಜು, ರಾಜ್‌ ಕುಮಾರ್‌, ಬಾಲು, ರಾಜಣ್ಣ, ರಮೇಶ್‌, ಅರುಣ್‌ ಕುಮಾರ್‌ ಮತ್ತಿತರರು ಉಪಸ್ಥಿತರಿದ್ದರು.

ಬಹುಮಾನ ವಿಜೇತರ : ಸ್ಪರ್ಧೆಯಲ್ಲಿ ಮದ್ದೂರು ತಾಲೂಕಿನ ಚಿಕ್ಕರಸಿನಕೆರೆ ಶಿವಲಿಂಗು 30 ನಿಮಿಷಗಳಲ್ಲಿ 7 ಮುದ್ದೆ (3.5ಕೆಜಿ) ಊಟ ಮಾಡುವ ಮೂಲಕ ಪ್ರಥಮ ಸ್ಥಾನಗಳಿಸಿ 9 ಸಾವಿರ ರೂ. ನಗದು ಹಣ ಹಾಗೂ ನೆನಪಿನ ಕಾಣಿಕೆ ತಮ್ಮದಾಗಿಸಿಕೊಂಡರು. ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಗ್ರಾಮದ ರಾಜಶೇಖರ್‌ 6 ಮುದ್ದೆ(2.72ಕೆ.ಜಿ.) ಸವಿದು 6 ಸಾವಿರ ರೂ. ನಗದು ಹಾಗೂ ತಾಲೂಕಿನ ರಾಮನಾಥಮೊಳೆ ಗ್ರಾಮದ ಶಿವು 5 ಮುದ್ದೆ(2.5ಕೆ.ಜಿ.) ಊಟ ಮಾಡಿ 3 ನಗದು ರೂ.ಬಹುಮಾನ ಪಡೆದುಕೊಂಡರು.

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.