ಕೈ ಕೊಟ್ಟ ಮಳೆ; ನೆಲಕಚ್ಚಿದ ರಾಗಿ, ಹುರುಳಿ ಬೆಳೆ
Team Udayavani, May 16, 2019, 11:29 AM IST
ಪಾಂಡವಪುರ: ತಾಲೂಕಿನ ಮಳೆಯಾಶ್ರಿತ ಪ್ರದೇಶದಲ್ಲಿ 2018-19ನೇ ಸಾಲಿನಲ್ಲಿ ಮುಂಗಾರು ಮತ್ತು ಹಿಂಗಾರುವಿನಲ್ಲಿ ನಿರೀಕ್ಷೆಯಷ್ಟು ಮಳೆಯಾಗದ ಹಿನ್ನೆಲೆಯಲ್ಲಿ ರಾಗಿ ಮತ್ತು ಹುರುಳಿ ಬೆಳೆಗಳು ನೆಲ ಕಚ್ಚಿದ್ದು ರೈತರು ದಿಕ್ಕು ತೋಚದೆ ಕಂಗಾಲಾಗಿದ್ದಾರೆ.
ಮುಂಗಾರು ಮಳೆಯಿಂದಾಗಿ ಸುಮಾರು 2250 ಹೆಕ್ಟೇರ್ನಲ್ಲಿ ರಾಗಿ ಬೆಳೆ ಒಣಗಿ ನಷ್ಟವಾದರೆ, ಹಿಂಗಾರು ಬೆಳೆಯಿಂದಾಗಿ ಸುಮಾರು 1945 ಹೆಕ್ಟೆರ್ನಲ್ಲಿ ಹುರುಳಿ ಬೆಳೆಗಳು ನಷ್ಟವಾಗಿವೆ.
ಸಾಲದ ಸುಳಿಗೆ: ತಾಲೂಕಿನ ಜಕ್ಕನಹಳ್ಳಿ ಹಾಗೂ ಚಿನಕುರಳಿ ಹೋಬಳಿಯ ಗ್ರಾಮಗಳು ಸಂಪೂರ್ಣ ವಾಗಿ ಮಳೆಯಾಶ್ರಿತ ಪ್ರದೇಶವಾಗಿದ್ದು ಈ ಭಾಗದ ರೈತರು ಮಳೆಯಾಶ್ರಿತ ಬೆಳೆಗಳಾದ ರಾಗಿ, ಹುರುಳಿ ಬೆಳೆ ಬಿತ್ತನೆ ಮಾಡಿ ಜೀವನ ನಡೆಸುತ್ತಾರೆ. ಆದರೆ, ಸೆಪ್ಟಂಬರ್ನಲ್ಲಿ ಅಲ್ಪ-ಸ್ವಲ್ಪ ಮಳೆಯಾದ ಹಿನ್ನೆಲೆಯಲ್ಲಿ ರಾಗಿ ಮತ್ತು ಹುರುಳಿ ಬೆಳೆಗಳನ್ನು ಬೆಳೆಯಲಾಗಿತ್ತು. ಆದರೆ, ಹಿಂಗಾರಿನಲ್ಲಿ ಮಳೆಯಾಗದೆ ಹುರುಳಿ ರಾಗಿ ಬೆಳೆಗಳು ನಷ್ಟವಾಗಿವೆ. ಇದರಿಂದ ಈ ಭಾಗದ ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದ್ದು ಮತ್ತೆ ಸಾಲದ ಸುಳಿಗೆ ಸಿಲುಕಿದ್ದಾರೆ.
ಪ್ರಸ್ತಾವನೆ ಕಳುಹಿಸಲಾಗಿದೆ: ರಾಗಿ-ಹುರುಳಿ ಬೆಳೆ ಪರಿಹಾರಕ್ಕಾಗಿ ತಾಲೂಕಿನ ಕೃಷಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಅಂತಿಮವಾಗಿ ಸರ್ವೆ ನಡೆಸಿ ಸುಮಾರು 2.85 ಕೋಟಿ ಪರಿಹಾರಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ ಪಟ್ಟಿ ಸಲ್ಲಿಸಲಾಗಿದೆ ಎಂದು ಕೃಷಿ ಅಧಿಕಾರಿ ಎಚ್.ವಿ.ಜಗದೀಶ್ ತಿಳಿಸಿದ್ದಾರೆ.
ಮಳೆ ಕೊರತೆ: ಹಿಂಗಾರಿನಲ್ಲಿ ಅಕ್ಟೋಬರ್, ನವೆಂಬರ್ ಹಾಗೂ ಡಿಸೆಂಬರ್ ತಿಂಗಳಲ್ಲಿ ವಾಡಿಕೆಯಂತೆ 215.40 ಮಿ.ಮೀಟರ್ ಮಳೆ ಆಗಬೇಕಿತ್ತು . ಆದರೆ, 185.72 ಮೀ.ಮಿ. ಮಳೆ ಯಾಗಿದೆ. 29.68 ಮಿ.ಮೀಟರ್ ನಷ್ಟು ಮಳೆ ಕಡಿಮೆ ಯಾಗಿದ್ದು ಶೇ.13.77 ಮಳೆ ಕೊರತೆ ಯುಂಟಾಗಿದೆ. ಮುಂಗಾರಿನಲ್ಲೂ ಮಳೆ ಕೊರತೆ ಹೆಚ್ಚಾದ ಹಿನ್ನೆಲೆಯಲ್ಲಿ ರಾಗಿ ಬೆಳೆಯಲ್ಲಿ ನಷ್ಟ ಉಂಟಾ ಗಿದ್ದು, ನಿರೀಕ್ಷಿತ ಮಟ್ಟದಲ್ಲಿ ಮಳೆಯಾಗದ ಹಿನ್ನೆಲೆಯಲ್ಲಿ ಮಳೆಯಾಶ್ರಿತ ಪ್ರದೇಶದ ವ್ಯಾಪ್ತಿ ಹಳ್ಳಿಗಳಲ್ಲಿನ ಕೆರೆ-ಕಟ್ಟೆಗಳೂ ಭರ್ತಿಯಾಗಿಲ್ಲ. ಹೇಮಾವತಿ ನಾಲೆಯಿಂದ ನೀರು ಹರಿಸಿ ಅಲ್ಪ ಪ್ರಮಾಣದಲ್ಲಿ ಕೆರೆಗಳನ್ನು ಭರ್ತಿ ಮಾಡಲಾಗಿದೆಯೇ ಹೊರತು ಪೂರ್ಣ ಪ್ರಮಾಣದಲ್ಲಿ ಕೆರೆ-ಕಟ್ಟೆಗಳು ಭರ್ತಿಯಾಗಿಲ್ಲ. ಮುಂಜಾಗ್ರತಾ ಕ್ರಮವಾಗಿ ಕುಡಿಯುವ ನೀರಿಗೆ ಅಣೆಕಟ್ಟೆಗಳ ನೀರನ್ನು ಮೀಸಲಿರಿಸಿಕೊಳ್ಳಲಾಗಿದ್ದು ಮುಂದಿನ ದಿನಗಳ ಲ್ಲಾದರೂ ನಿರೀಕ್ಷಿತ ಮಟ್ಟದಲ್ಲಿ ಮಳೆಯಾಗಲಿದೆಯೇ ಎಂಬುದನ್ನು ಕಾದು ನೋಡಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ