ಕೈ ಕೊಟ್ಟ ಮಳೆ; ನೆಲಕಚ್ಚಿದ ರಾಗಿ, ಹುರುಳಿ ಬೆಳೆ


Team Udayavani, May 16, 2019, 11:29 AM IST

man-3

ಪಾಂಡವಪುರ: ತಾಲೂಕಿನ ಮಳೆಯಾಶ್ರಿತ ಪ್ರದೇಶದಲ್ಲಿ 2018-19ನೇ ಸಾಲಿನಲ್ಲಿ ಮುಂಗಾರು ಮತ್ತು ಹಿಂಗಾರುವಿನಲ್ಲಿ ನಿರೀಕ್ಷೆಯಷ್ಟು ಮಳೆಯಾಗದ ಹಿನ್ನೆಲೆಯಲ್ಲಿ ರಾಗಿ ಮತ್ತು ಹುರುಳಿ ಬೆಳೆಗಳು ನೆಲ ಕಚ್ಚಿದ್ದು ರೈತರು ದಿಕ್ಕು ತೋಚದೆ ಕಂಗಾಲಾಗಿದ್ದಾರೆ.

ಮುಂಗಾರು ಮಳೆಯಿಂದಾಗಿ ಸುಮಾರು 2250 ಹೆಕ್ಟೇರ್‌ನಲ್ಲಿ ರಾಗಿ ಬೆಳೆ ಒಣಗಿ ನಷ್ಟವಾದರೆ, ಹಿಂಗಾರು ಬೆಳೆಯಿಂದಾಗಿ ಸುಮಾರು 1945 ಹೆಕ್ಟೆರ್‌ನಲ್ಲಿ ಹುರುಳಿ ಬೆಳೆಗಳು ನಷ್ಟವಾಗಿವೆ.

ಸಾಲದ ಸುಳಿಗೆ: ತಾಲೂಕಿನ ಜಕ್ಕನಹಳ್ಳಿ ಹಾಗೂ ಚಿನಕುರಳಿ ಹೋಬಳಿಯ ಗ್ರಾಮಗಳು ಸಂಪೂರ್ಣ ವಾಗಿ ಮಳೆಯಾಶ್ರಿತ ಪ್ರದೇಶವಾಗಿದ್ದು ಈ ಭಾಗದ ರೈತರು ಮಳೆಯಾಶ್ರಿತ ಬೆಳೆಗಳಾದ ರಾಗಿ, ಹುರುಳಿ ಬೆಳೆ ಬಿತ್ತನೆ ಮಾಡಿ ಜೀವನ ನಡೆಸುತ್ತಾರೆ. ಆದರೆ, ಸೆಪ್ಟಂಬರ್‌ನಲ್ಲಿ ಅಲ್ಪ-ಸ್ವಲ್ಪ ಮಳೆಯಾದ ಹಿನ್ನೆಲೆಯಲ್ಲಿ ರಾಗಿ ಮತ್ತು ಹುರುಳಿ ಬೆಳೆಗಳನ್ನು ಬೆಳೆಯಲಾಗಿತ್ತು. ಆದರೆ, ಹಿಂಗಾರಿನಲ್ಲಿ ಮಳೆಯಾಗದೆ ಹುರುಳಿ ರಾಗಿ ಬೆಳೆಗಳು ನಷ್ಟವಾಗಿವೆ. ಇದರಿಂದ ಈ ಭಾಗದ ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದ್ದು ಮತ್ತೆ ಸಾಲದ ಸುಳಿಗೆ ಸಿಲುಕಿದ್ದಾರೆ.

ಪ್ರಸ್ತಾವನೆ ಕಳುಹಿಸಲಾಗಿದೆ: ರಾಗಿ-ಹುರುಳಿ ಬೆಳೆ ಪರಿಹಾರಕ್ಕಾಗಿ ತಾಲೂಕಿನ ಕೃಷಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಅಂತಿಮವಾಗಿ ಸರ್ವೆ ನಡೆಸಿ ಸುಮಾರು 2.85 ಕೋಟಿ ಪರಿಹಾರಕ್ಕಾಗಿ ಸ‌ರ್ಕಾರಕ್ಕೆ ಪ್ರಸ್ತಾವನೆ ಪಟ್ಟಿ ಸಲ್ಲಿಸಲಾಗಿದೆ ಎಂದು ಕೃಷಿ ಅಧಿಕಾರಿ ಎಚ್.ವಿ.ಜಗದೀಶ್‌ ತಿಳಿಸಿದ್ದಾರೆ.

ಮಳೆ ಕೊರತೆ: ಹಿಂಗಾರಿನಲ್ಲಿ ಅಕ್ಟೋಬರ್‌, ನವೆಂಬರ್‌ ಹಾಗೂ ಡಿಸೆಂಬರ್‌ ತಿಂಗಳಲ್ಲಿ ವಾಡಿಕೆಯಂತೆ 215.40 ಮಿ.ಮೀಟರ್‌ ಮಳೆ ಆಗಬೇಕಿತ್ತು . ಆದರೆ, 185.72 ಮೀ.ಮಿ. ಮಳೆ ಯಾಗಿದೆ. 29.68 ಮಿ.ಮೀಟರ್‌ ನಷ್ಟು ಮಳೆ ಕಡಿಮೆ ಯಾಗಿದ್ದು ಶೇ.13.77 ಮಳೆ ಕೊರತೆ ಯುಂಟಾಗಿದೆ. ಮುಂಗಾರಿನಲ್ಲೂ ಮಳೆ ಕೊರತೆ ಹೆಚ್ಚಾದ ಹಿನ್ನೆಲೆಯಲ್ಲಿ ರಾಗಿ ಬೆಳೆಯಲ್ಲಿ ನಷ್ಟ ಉಂಟಾ ಗಿದ್ದು, ನಿರೀಕ್ಷಿತ ಮಟ್ಟದಲ್ಲಿ ಮಳೆಯಾಗದ ಹಿನ್ನೆಲೆಯಲ್ಲಿ ಮಳೆಯಾಶ್ರಿತ ಪ್ರದೇಶದ ವ್ಯಾಪ್ತಿ ಹಳ್ಳಿಗಳಲ್ಲಿನ ಕೆರೆ-ಕಟ್ಟೆಗಳೂ ಭರ್ತಿಯಾಗಿಲ್ಲ. ಹೇಮಾವತಿ ನಾಲೆಯಿಂದ ನೀರು ಹರಿಸಿ ಅಲ್ಪ ಪ್ರಮಾಣದಲ್ಲಿ ಕೆರೆಗಳನ್ನು ಭರ್ತಿ ಮಾಡಲಾಗಿದೆಯೇ ಹೊರತು ಪೂರ್ಣ ಪ್ರಮಾಣದಲ್ಲಿ ಕೆರೆ-ಕಟ್ಟೆಗಳು ಭರ್ತಿಯಾಗಿಲ್ಲ. ಮುಂಜಾಗ್ರತಾ ಕ್ರಮವಾಗಿ ಕುಡಿಯುವ ನೀರಿಗೆ ಅಣೆಕಟ್ಟೆಗಳ ನೀರನ್ನು ಮೀಸಲಿರಿಸಿಕೊಳ್ಳಲಾಗಿದ್ದು ಮುಂದಿನ ದಿನಗಳ ಲ್ಲಾದರೂ ನಿರೀಕ್ಷಿತ ಮಟ್ಟದಲ್ಲಿ ಮಳೆಯಾಗಲಿದೆಯೇ ಎಂಬುದನ್ನು ಕಾದು ನೋಡಬೇಕಾಗಿದೆ.

ತಹಶೀಲ್ದಾರ್‌ ಖಾತೆಯಲ್ಲಿ ಹಣ

ಮುಂಗಾರು ಮಳೆಯಾಶ್ರಿತ ಪ್ರದೇಶದ ಒಟ್ಟು 9238 ರೈತರು ತಾವು ಬೆಳೆದ ಬೆಳೆಗಳಲ್ಲಿ ನಷ್ಟ ಅನುಭವಿಸಿರುವ ಬಗ್ಗೆ ಸರ್ವೆ ಕಾರ್ಯ ನಡೆಸಿ ಅರ್ಹ ಫ‌ಲಾನುಭವಿಗಳನ್ನು ಗುರುತಿಸಲಾಗಿದೆ. ಬೆಳೆ ನಷ್ಟದ ಹಣ ಸುಮಾರು 1.53ಕೋಟಿ ರೂ.ಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿತ್ತು. ಸರ್ಕಾರ ಈಗಾಗಲೇ ಅದರ ಹಣ ಬಿಡುಗಡೆ ಮಾಡಿ ತಹಶೀಲ್ದಾರ್‌ ಖಾತೆಯಲ್ಲಿ ಜಮೆ ಮಾಡಿದೆ. ಸದ್ಯದಲ್ಲಿಯೇ ಪರಿಹಾರದ ಹಣವನ್ನು ಅರ್ಹ ಫ‌ಲಾನುಭವಿ ರೈತರ ಖಾತೆಗೆ ಜಮೆ ಮಾಡಲಾಗುವುದು ಎಂದು ಕೃಷಿ ಅಧಿಕಾರಿ ಎಚ್.ವಿ.ಜಗದೀಶ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.