ಮಳೆ ಕೊರತೆ: ಮಂಡ್ಯ ತಾಲೂಕಲ್ಲಿ ಬಿತ್ತನೆ ಕುಂಠಿತ

ತಿಂಗಳೊಳಗೆ ಜಾನುವಾರುಗಳಿಗೆ ಕಿವಿಯೋಲೆ ಅಳವಡಿಕೆ • ತಾಪಂ ಪ್ರಗತಿ ಪರಿಶೀಲನಾ ಸಭೆ

Team Udayavani, Aug 6, 2019, 4:35 PM IST

mandya-tdy-1

ಮಂಡ್ಯ: ಜಾನುವಾರುಗಳಿಗೆ ಕಿವಿಯೋಲೆ ತೊಡಿಸುವ ಅಭಿಯಾನ ಈ ತಿಂಗಳೊಳಗೆ ಪೂರ್ಣ, ಮಳೆ ಕೊರತೆಯಿಂದ ಬಿತ್ತನೆ ಕುಂಠಿತ, ತೆಂಗಿನ ಸಸಿಗಳನ್ನು ಪಡೆಯಲು ಮುಂದಾಗದ ರೈತ, ರೇಷ್ಮೆ ಹುಳುಮನೆಗೆ ಬೇಡಿಕೆ ಇದ್ದರೂ ಅನುದಾನವಿಲ್ಲ..

ಇವು ಸೋಮವಾರ ತಾಲೂಕು ಪಂಚಾಯಿತಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಚರ್ಚೆಗೆ ಬಂದ ಪ್ರಮುಖ ಅಂಶಗಳು.

ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಅಧ್ಯಕ್ಷೆ ಶೈಲಜಾ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಪಶುಪಾಲನಾ ಇಲಾಖೆ ಸಹಾಯಕ ನಿರ್ದೇಶಕ ಪ್ರವೀಣ್‌ಕುಮಾರ್‌ ಮಾತನಾಡಿ, ಜಾನುವಾರುಗಳಿಗೆ ಕಿವಿಯೋಲೆ ತೊಡಿಸುವ ಅಭಿಯಾನ ಆರು ತಿಂಗಳಿಂದ ನಡೆಯುತ್ತಿದೆ. ಈ ತಿಂಗಳೊಳಗೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದ್ದು, ಮಂಡ್ಯ ತಾಲೂಕಿನಲ್ಲಿ ಈವರೆಗೆ ಹಾಲು ನೀಡುವ 28 ಸಾವಿರ ರಾಸುಗಳಿಗೆ ಕಿವಿಯೋಲೆ ಅಳವಡಿಸಲಾಗಿದೆ ಎಂದು ಮಾಹಿತಿ ನೀಡಿದರು.

ವಿವರಣೆಗೆ ಕಿವಿಯೋಲೆ: ರಾಸುಗಳಿಗೆ ಕಿವಿಯೋಲೆ ತೊಡಿಸುವ ಕಾರ್ಯದಲ್ಲಿ 44 ಪಶು ವೈದ್ಯಕೀಯ ಸಂಸ್ಥೆಗಳು ತೊಡಗಿವೆ. ಕಿವಿಯೋಲೆ ತೊಡಿಸುವುದರಿಂದ ಅದು ಯಾವ ತಳಿ, ಮಾಲೀಕರು ಯಾರು, ಅದರ ವಯಸ್ಸು ಎಷ್ಟು, ಎಷ್ಟು ಪ್ರಮಾಣದ ಹಾಲು ನೀಡುತ್ತದೆ ಎಂಬುದನ್ನು ಸುಲಭವಾಗಿ ತಿಳಿಯಬಹುದು. ಕಳ್ಳತನ ನಡೆಯದಂತೆ ಹಾಗೂ ರಾಸು ಸತ್ತ ಸಮಯದಲ್ಲಿ ಮಾಹಿತಿ ಸಂಗ್ರಹಿಸುವುದಕ್ಕೂ ಅನುಕೂಲವಾಗಲಿದೆ ಎಂದು ಹೇಳಿದರು.

ಮನವೊಲಿಸಿ ಕಿವಿಯೋಲೆ ಅಳವಡಿಸಿ: ಪ್ರತಿ ಮನೆಗೂ ತೆರಳಿ ಜಾನುವಾರುಗಳಿಗೆ ಕಿವಿಯೋಲೆ ತೊಡಿಸಲಾಗುತ್ತಿದ್ದು, ಶೇ.90ರಷ್ಟು ರೈತರು ಇದಕ್ಕೆ ಸಹಕರಿಸುತ್ತಿದ್ದಾರೆ. ಕೆಲವರು ರಾಸುಗಳಿಗೆ ಗಾಯವಾಗಲಿದೆ ಎಂಬ ಕಾರಣಕ್ಕೆ ಹಿಂದೇಟು ಹಾಕುತ್ತಿದ್ದಾರೆ. ಕೃತಕ ಗರ್ಭಧಾರಣೆಗೆ ಬಂದ ಸಮಯದಲ್ಲಿ ಅವರ ಮನವೊಲಿಸಿ ಕಿವಿಯೋಲೆ ಅಳವಡಿಸಲಾಗುವುದು. 341 ಪ.ಜಾತಿ, ವರ್ಗದ ರಾಸುಗಳಿಗೆ ಉಚಿತ ಜಾನುವಾರು ವಿಮೆ ಮಾಡಿಸಲಾಗುತ್ತಿದೆ. ಅದಕ್ಕಾಗಿ ಸುಮಾರು 5 ಲಕ್ಷ ರೂ. ಹಣವನ್ನು ವಿಮಾ ಕಂಪನಿಗೆ ಇಲಾಖೆಯಿಂದಲೇ ಪಾವತಿಸಲಾಗುವುದು ಎಂದು ತಿಳಿಸಿದರು.

ಬೇಡಿಕೆ ಇದ್ದರೂ ಅನುದಾನವಿಲ್ಲ: ಜಿಲ್ಲೆಯಲ್ಲಿ ನಾಲ್ಕು ಸಾವಿರಕ್ಕೂ ಹೆಚ್ಚು ರೇಷ್ಮೆ ಬೆಳೆಗಾರರಿದ್ದಾರೆ. ಇದರಲ್ಲಿ 800 ರೇಷ್ಮೆ ಹುಳು ಮನೆಗೆ ಬೇಡಿಕೆ ಇದೆ. ಆದರೆ, ಅನುದಾನದ ಕೊರತೆ ಇದೆ ಎಂದು ರೇಷ್ಮೆ ಇಲಾಖೆ ಸಹಾಯಕ ನಿರ್ದೇಶಕ ಸಿದ್ದರಾಜು ವಿವರಿಸಿದರು.

20×30 ಅಡಿ ಅಳತೆಯ ಹುಳು ಮನೆಗೆ 2 ಲಕ್ಷ ರೂ. ಹಾಗೂ ಪರಿಶಿಷ್ಟ ಜಾತಿ, ಪಂಗಡದವರಿಗೆ 3.70 ಲಕ್ಷ ರೂ. ನೀಡಲಾಗುತ್ತಿದೆ. ರೇಷ್ಮೆ ಸಾಕಣೆದಾರರು ಮರಗಡ್ಡಿ ಪದ್ಧತಿ ಅಳವಡಿಸಿಕೊಳ್ಳುವಂತೆ ಜಾಗೃತಿ ಮೂಡಿಸಲಾಗುತ್ತಿದೆ. ಎಲ್ಲರೂ ಒಂದೇ ಬಾರಿಗೆ ಹಿಪ್ಪು ನೇರಳೆ ಬೆಳೆದರೆ ಬೆಳೆಗಳಿಗೆ ರೋಗ ಬಾಧೆ ಇರುವುದಿಲ್ಲ. ಇಲ್ಲದಿದ್ದರೆ ರೋಗ ಹರಡುವುದರ ಜೊತೆಗೆ ರೋಗ ನಿವಾರಣೆಗೆ ಕ್ರಮ ವಹಿಸುವುದಕ್ಕೂ ಆಗುವುದಿಲ್ಲ ಎಂದು ಹೇಳಿದರು.

ಈಗಾಗಲೇ ತರಕಾರಿ ಬೆಳೆ ಆಶ್ರಯಿಸಿದ್ದ ಊರಮಾರ ಕಸಲಗೆರೆಯ ಹಲವು ರೈತರು ದಿಢೀರನೆ ರೇಷ್ಮೆ ಬೆಳೆಯಲು ಮುಂದಾಗಿದ್ದರ ಪರಿಣಾಮ ಭೂಮಿಯೊಳಗಿನ ರಾಸಾಯನಿಕ ಎಲೆಗಳ ಮೂಲಕ ಹರಡಿ ಹುಳುಗಳು ಅದನ್ನು ತಿಂದು ಸಾವನ್ನಪ್ಪಿ ರೈತರಿಗೆ ನಷ್ಟವಾಗಿದೆ. ಹಸಿರೆಲೆಗೊಬ್ಬರ, ಸಾವಯವ ಗೊಬ್ಬರದ ನಡುವೆ ಹಿಪ್ಪುನೇರಳೆ ಬೆಳೆಯುವುದು ಸೂಕ್ತ ಎಂದು ರೈತರಿಗೆ ತಿಳಿವಳಿಕೆ ಮೂಡಿಸಲಾಗುವುದು ಎಂದು ಹೇಳಿದರು.

ತೆಂಗಿನ ಸಸಿ ಕೊಳ್ಳುವವರಿಲ್ಲ: ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕಿ ಪುಷ್ಪಲತಾ ಮಾತನಾಡಿ, ರೈತರಿಗೆ ಉಚಿತವಾಗಿ ತೆಂಗಿನ ಸಸಿಗಳನ್ನು ವಿತರಣೆ ಮಾಡಲಾಗುತ್ತಿದೆ. ಈಗಾಗಲೇ 100 ರೈತರಿಗೆ ಒಬ್ಬರಿಗೆ 16 ಗಿಡದಂತೆ 1600 ಗಿಡಗಳನ್ನು ನೀಡಲಾಗಿದೆ. ಆದರೆ, ಹೆಚ್ಚಿನ ಸಂಖ್ಯೆಯ ರೈತರು ತೆಂಗಿನ ಸಸಿಗಳನ್ನು ಪಡೆಯಲು ಮುಂದೆ ಬರುತ್ತಿಲ್ಲ. ನೀರಿನ ಕೊರತೆ ಕಾರಣದಿಂದ ನಿರ್ವಹಣೆ ಕಷ್ಟವಾಗಲಿದೆ ಎಂಬ ಮನೋಭಾವ ಅವರಲ್ಲಿದೆ ಎಂದು ಹೇಳಿದರು.

ತೆಂಗು ಪುನಶ್ಚೇತನ ಕಾರ್ಯಕ್ರಮದಡಿ 15 ವರ್ಷ ಹಳೆಯದಾದ ಫ‌ಲ ಕೊಡದ ತೆಂಗಿನ ಮರಗಳನ್ನು ತೆಗೆದು ಆ ಜಾಗದಲ್ಲಿ ತೆಂಗಿನ ಸಸಿಗಳನ್ನು ನೆಟ್ಟು ಬೆಳೆಸುವುದಕ್ಕೆ ಅವಕಾಶವಿದೆ. ನರೇಗಾ ಯೋಜನೆಯಡಿ ಇದನ್ನು ತೆಗೆದುಕೊಳ್ಳಬಹುದು. ಇದಕ್ಕೆ ಹೆಚ್ಚಿನ ಬೇಡಿಕೆ ಇದ್ದು, 1 ಎಕರೆಗೆ 20 ಸಾವಿರ ರೂ.ನಷ್ಟು ಸಹಾಯಧನವೂ ಸಿಗುತ್ತಿದೆ. ಆದರೆ, ಸಾಮಾಜಿಕ ಲೆಕ್ಕ ಪರಿಶೋಧನಾ ಸಮಿತಿ ಈ ಕಾರ್ಯಕ್ಕೆ ಅಡ್ಡಿಯಾಗಬಹುದೆಂಬ ಆತಂಕವಿದೆ ಎಂದು ಹೇಳಿದರು.

ಸಭೆಯಲ್ಲಿ ತಾಪಂ ಇಒ ಎಂ.ಗಂಗಣ್ಣ, ಸ್ಥಾಯಿ ಸಮಿತಿ ಅಧ್ಯಕ್ಷ ಬೋರಯ್ಯ, ಯೋಜನಾಧಿಕಾರಿ ಕೃಷ್ಣಮೂರ್ತಿ, ಸಹಾಯಕ ನಿರ್ದೇಶಕ (ನರೇಗಾ) ಆರ್‌.ಮಹದೇವ ಮತ್ತಿತರರು ಭಾಗವಹಿಸಿದ್ದರು.

ಅಲ್ಪಾವಧಿ ಬೆಳೆ ಬೆಳೆಯಲು ರೈತರಿಗೆ ಜಾಗೃತಿ: ಪ್ರತಿಭಾ

ಕೃಷಿ ಇಲಾಖೆ ಅಧಿಕಾರಿ ಪ್ರತಿಭಾ ಮಾತನಾಡಿ, ಜೂನ್‌ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದರೂ ಮಳೆ ಎಲ್ಲೆಡೆ ಸಮರ್ಪಕ ಹಂಚಿಕೆಯಾಗಿಲ್ಲ. ಇದರಿಂದ ಎಲ್ಲೆಡೆ ಬಿತ್ತನೆ ಕುಂಠಿತಗೊಂಡಿದೆ. ರಾಗಿ ಬಿತ್ತನೆಗೂ ಹಿನ್ನಡೆಯಾಗಿದ್ದು, ನಾಲೆಗಳಿಗೆ ನೀರು ಹರಿಸದಿರುವುದರಿಂದ ಭತ್ತದ ಬಿತ್ತನೆ ಬೀಜಗಳನ್ನು ವಿತರಿಸಿಲ್ಲ. ಅದಕ್ಕಾಗಿ ಅಲ್ಪಾವಧಿ ಬೆಳೆಗಳನ್ನು ಬೆಳೆಯುವಂತೆ ರೈತರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿದರು. ಈವರೆಗೆ 16 ಕ್ವಿಂಟಾಲ್ ಬಿತ್ತನೆ ರಾಗಿ ವಿತರಿಸಲಾಗಿದೆ. ರಸಗೊಬ್ಬರ ಮತ್ತು ಬಿತ್ತನೆ ಬೀಜ ದಾಸ್ತಾನಿದ್ದು, ಮಳೆಯಾಗದಿರುವುದರಿಂದ ಬಿತ್ತನೆಗೆ ಕುಂಠಿತಗೊಂಡಿದೆ. ಈ ಸಾಲಿನ ಕೃಷಿ ಯೋಜನೆಗಳಿಗೆ ಇನ್ನೂ ಹಣ ಬಿಡುಗಡೆಯಾಗಿಲ್ಲ. ಹಾಗಾಗಿ ಕಾರ್ಯಕ್ರಮಗಳನ್ನು ಕೈಗೆತ್ತಿಕೊಳ್ಳಲಾಗಿಲ್ಲ ಎಂದು ತಿಳಿಸಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ

Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.