ಆಲಿಕಲ್ಲು ಮಳೆಯಿಂದ ಅಪಾರ ನಷ್ಟ
ನೂರಾರು ಎಕರೆಯಲ್ಲಿ ಬೆಳೆ ನಾಶ; ಹಾರಿಹೋದ ಮನೆಗಳ ಛಾವಣಿ
Team Udayavani, Apr 30, 2020, 2:58 PM IST
ಎಚ್.ಡಿ.ಕೋಟೆ: ತಾಲೂಕಿನ ವಿವಿಧೆಡೆ ಬಿದ್ದ ಆಲಿಕಲ್ಲು ಮಳೆಯಿಂದ ನೂರಾರು ಎಕರೆ ಬೆಳೆ ನಾಶವಾಗಿದೆ. ಅಲ್ಲದೆ, ಈ ಮಳೆ ವರ್ಷಾರಂಭದ ಬಿತ್ತನೆ ಕಾರ್ಯಕ್ಕೆ ಅನುಕೂಲ ಮಾಡಿಕೊಟ್ಟಿದೆ. ಗಾಳಿ- ಮಳೆ ಸುಮಾರು 2 ಗಂಟೆಗಳ ಕಾಲ ಸುರಿದಿದೆ. ಮಳೆ ಮಾತ್ರ ಆಗಿದ್ದರೆ ರೈತರು ಬೆಳೆದಿದ್ದ ಬೆಳೆಗೆ ತೊಂದರೆಯಾಗುತ್ತಿರಲಿಲ್ಲ. ಆಲಿಕಲ್ಲು ಮಳೆಗೆ ಮರ ಗೆಣಸು, ಬಾಳೆ, ಮುಸುಕಿನ ಜೋಳ ಸೇರಿದಂತೆ ಇತರ ಬೆಳೆಗಳು ನಾಶವಾಗಿದೆ.
ಬೇಸಿಗೆಯಲ್ಲಿ ಸಾಲ ಮಾಡಿ ಬೆಳೆದಿದ್ದ ಬೆಳೆ ಇನ್ನೇನು ಕೈ ಸೇರುತ್ತದೆ ಅನ್ನುವ ಆಶಾಭಾವನೆಯಲ್ಲಿದ್ದ ಕೆ.ಜಿ.ಹಳ್ಳಿ, ಆನಗಟ್ಟಿ, ಲಕ್ಷ್ಮಿಪುರ, ಶೀರನಹುಂಡಿ, ನೂರಲಕುಪ್ಪೆ, ಅಂತರಸಂತೆ ಅಕ್ಕಪಕ್ಕದ ರೈತರಲ್ಲಿ ನಿರಾಶೆ ಮೂಡಿದ್ದು, ನಷ್ಟವಾಗಿರುವ ಬೆಳೆಗೆ ಸರ್ಕಾರ ಪರಿಹಾರ ನೀಡುವಂತೆ ರೈತರು ಆಗ್ರಹಿಸಿದ್ದಾರೆ.
ಹಾರಿಹೋದ ಮನೆಗಳ ಛಾವಣಿ: ತಾಲೂಕಿನ ಶೀರನಹುಂಡಿ ಗ್ರಾಮದ ಹಲವು ಮನೆಗಳ ಛಾವಣಿ ಗಾಳಿಗೆ ಸಿಲುಕಿ ಹಾರಿಹೋಗಿವೆ. ಗಾಳಿ ರಭಸಕ್ಕೆ ಮನೆ ಹೆಂಚುಗಳು ನೆಲಕ್ಕುರುಳಿ ಚೂರುಗಳಾಗಿವೆ. ಗ್ರಾಮದಲ್ಲಿ ಬಹುತೇಕ ಮನೆಗಳು ಶಿಥಿಲಾವಸ್ಥೆ ತಲುಪಿದ್ದು, ಗೋಡೆಗಳು ಬಿರುಕು ಬಿಟ್ಟವೆ. ಮಳೆ ಆರಂಭ ಗೊಳ್ಳುತ್ತಿದ್ದಂತೆಯೇ ಮನೆಯಲ್ಲಿ ರಾತ್ರಿ ವೇಳೆ ಆಕಸ್ಮಿಕವಾಗಿ ಮನೆಗಳ ಗೋಡೆ ಕುಸಿದು ಬಿದ್ದರೆ ಜೀವಹಾನಿಯಾಗುವ ಸಾಧ್ಯತೆಗಳಿವೆ. ಸರ್ಕಾರದಿಂದ ಮನೆಗಳ ನಿರ್ಮಾಣಕ್ಕೆ ಆಯ್ಕೆ ಮಾಡುವಂತೆ ಗ್ರಾಪಂ ಸದಸ್ಯರಲ್ಲಿ ಮನವಿ ಮಾಡಿಕೊಂಡರೆ, ಇಂತಿಷ್ಟು ಹಣ ನೀಡಿದವರಿಗೆ ಮಾತ್ರ ಸರ್ಕಾರದ ಯೋಜನೆ ಸಿಕ್ಕಿದೆ. ಬಡಜನತೆಗೆ ಸಿಕ್ಕಿಲ್ಲ ಎನ್ನುವ ಆರೋಪ ಕೇಳಿ ಬರುತ್ತಿದೆ. ಬುಧವಾರ ಬಿತ್ತನೆ ಕಾರ್ಯದಲ್ಲಿ ರೈತರು
ತೊಡಗಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್