ಸಕಾಲ ವ್ಯಾಪ್ತಿಗೆ ನಮೂನೆ-3 ತರಲು ಶಿಫಾರಸು


Team Udayavani, Nov 26, 2019, 4:04 PM IST

MANDYA-TDY-1

ಮಂಡ್ಯ: ನಗರ ಮತ್ತು ಪುರಸಭೆ ವ್ಯಾಪ್ತಿಯಲ್ಲಿ ಬರುವ ವಾಣಿಜ್ಯ ಸಂಕೀರ್ಣ, ನಿವೇಶನ ಹಾಗೂ ಮನೆಗಳ ಆಸ್ತಿ ತೆರಿಗೆ ಪಾವತಿ ಬಳಿಕ ನೀಡಲಾಗುವ ನಮೂನೆ-3 ವಿತರಣಾ ವ್ಯವಸ್ಥೆಯನ್ನು ಸಕಾಲ ವ್ಯಾಪ್ತಿಗೆ ತರುವುದಕ್ಕೆ ಜಿಲ್ಲಾಡಳಿತ ನಿರ್ಧರಿಸಿದೆ.

ಪ್ರಸ್ತುತ ಆಸ್ತಿ ತೆರಿಗೆ ಪಾವತಿಸುವ ಕಟ್ಟಡಗಳ ಮಾಲೀಕರಿಗೆ ನಿಗದಿತ ಸಮಯದೊಳಗೆ ನಮೂನೆ-3 ಸಿಗದೆ ಪರದಾಡುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಕೇಳಿಬರುತ್ತಿವೆ. ನಮೂನೆ-3 ಕೈ ಬರಹದಲ್ಲೂ ನೀಡ ಲಾಗುತ್ತಿದೆ ಎಂಬ ಆರೋಪಗಳೂ ಇವೆ. ಆ ಹಿನ್ನೆಲೆಯಲ್ಲಿನಮೂನೆ-3 ಅನ್ನು ಸಕಾಲ ವ್ಯಾಪ್ತಿಗೆ ತರುವುದಕ್ಕೆ ರಾಜ್ಯಸರ್ಕಾರಕ್ಕೆ ಶಿಫಾರಸು ಮಾಡಲು ಮುಂದಾಗಿದೆ.

ಕಚೇರಿಗೆ ಅಲೆದಾಟ: ಆಸ್ತಿ ತೆರಿಗೆ ಪಾವತಿಸಿದ ಕಟ್ಟಡಮಾಲೀಕರಿಗೆ ನಮೂನೆ-3 ಅನ್ನು ಕೊಡುವುದಕ್ಕೆ ಕನಿಷ್ಠ 3ರಿಂದ 6 ತಿಂಗಳು ಕಚೇರಿಗಳಿಗೆ ಅಲೆಸುತ್ತಿರುವುದು ಕಂಡು ಬಂದಿದೆ. ಕಟ್ಟಡಗಳು ಹಾಗೂ ವಾಣಿಜ್ಯ ಸಂಕೀರ್ಣಗಳ ನಿರ್ಮಾಣಕ್ಕೆ ನಿಗದಿತ ಸಮಯದಲ್ಲಿ ನಮೂನೆ-3 ಸಿಗದೆ ಎಷ್ಟೋ ಮಂದಿ ಪರವಾನಗಿ ಇಲ್ಲದೆ ಕಟ್ಟಡ ನಿರ್ಮಿಸುತ್ತಿರುವ ಪ್ರಕರಣಗಳೂ ಚಾಲ್ತಿಯಲ್ಲಿವೆ.ಇದರಿಂದ ಪರವಾನಗಿ ಇಲ್ಲದೆ ನಿರ್ಮಾಣಗೊಳ್ಳುತ್ತಿರುವ ಕಟ್ಟಡಗಳ ಸಂಖ್ಯೆ ನಗರದಲ್ಲಿ ಹೆಚ್ಚುತ್ತಿರುವುದರಿಂದ ಇದಕ್ಕೆ ಕಡಿವಾಣ ಹಾಕಲು ನಿರ್ಧರಿಸಿರುವ ಜಿಲ್ಲಾಡಳಿತ ನಮೂನೆ-3 ಕೊಡುವ ವ್ಯವಸ್ಥೆ ಸಕಾಲ ವ್ಯಾಪ್ತಿಯಡಿಗೆ ತರಲು ನಿರ್ಧರಿಸಿದೆ.

ಮೇಲ್ಮನವಿಗೆ ಅವಕಾಶ: ಆಸ್ತಿ ತೆರಿಗೆ ಪಾವತಿಸಿದ ಬಳಿಕ ನಮೂನೆ-3 ನೀಡುವುದಕ್ಕೆ ನಗರಸಭೆ ಮತ್ತು ಪುರಸಭೆಗಳ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಸರ್ವೆಯರ್‌ಗಳು ಬಂದು ಸ್ಥಳ ಪರಿಶೀಲನೆ ನಡೆಸಿ ಆನ್‌ಲೈನ್‌ಗೆ ಅಪ್‌ಲೋಡ್‌ ಮಾಡುವುದಕ್ಕೂ ಕಾಲಮಿತಿ ನಿಗದಿಪಡಿಸಲಾಗುವುದು. ಒಂದು ವೇಳೆಲೋಪ ಕಂಡುಬಂದಲ್ಲಿ ಉಪ ವಿಭಾಗಾಧಿಕಾರಿಗಳಿಗೆ ಮೇಲ್ಮನವಿ ಸಲ್ಲಿಸಲು ಅವಕಾಶ ಕಲ್ಪಿಸಿಕೊಡುವುದಕ್ಕೆ ಮುಂದಾಗಿದೆ.

ಸರಳೀಕರಣಕ್ಕೆ ಚಿಂತನೆ: ನಮೂನೆ-3 ಅನ್ನು ಈಗಿರುವುದಕ್ಕಿಂತಲೂ ಸರಳೀಕರಣ ಮಾಡುವುದಕ್ಕೂ ಚಿಂತನೆ ನಡೆಸಿರುವ ಜಿಲ್ಲಾಡಳಿತ, ಜನರಿಗೆ ಸುಲಭವಾಗಿ ಅರ್ಥವಾಗುವಂತೆ ಹಾಗೂ ಅರ್ಜಿ ಫಾರಂನ್ನು ಭರ್ತಿ ಮಾಡುವುದು, ಆನ್‌ಲೈನ್‌ಗೆ ಅಪ್‌ಲೋಡ್‌ ಮಾಡುವುದು, ಆನ್‌ಲೈನ್‌ನಲ್ಲೇ ನಮೂನೆ-3 ಪಡೆದುಕೊಳ್ಳುವ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುವುದಕ್ಕೆ ಚಿಂತನೆ ನಡೆಸಿದೆ. ಗ್ರಾಮಾಂತರ ಪ್ರದೇಶಗಳಲ್ಲಿ ಆಸ್ತಿಗಳ ಆರ್‌ಟಿಸಿಗಳು ಸುಲಭವಾಗಿ ದೊರೆಯುವ ಮಾದರಿಯಲ್ಲೇ ನಮೂನೆ-3 ಅನ್ನೂ ಆನ್‌ಲೈನ್‌ನಲ್ಲೇ ಅರ್ಜಿ ಸಲ್ಲಿಸಿ ನಿಗದಿತ ಅವಧಿಯೊಳಗೆ ಸುಲಭವಾಗಿ ಪಡೆದುಕೊಳ್ಳುವಂತಹ ವ್ಯವಸ್ಥೆ ಜಾರಿಗೆ ತಂದಲ್ಲಿ ಹಲವು ಗೊಂದಲ ನಿವಾರಣೆಯಾಗುವ ಜೊತೆಗೆ ಸಿವಿಲ್‌ ವ್ಯಾಜ್ಯಗಳು ಸೃಷ್ಟಿಯಾಗುವುದು ತಪ್ಪಿಸಬಹುದು ಎಂಬ ಉದ್ದೇಶ ಹೊಂದಿದೆ.

ಕೈ ಬರಹದಲ್ಲಿ ನೀಡಿಕೆಗೆ ಕಡಿವಾಣ: ಕೈ ಬರಹಗಳಲ್ಲಿ ನಮೂನೆ-3 ನೀಡುತ್ತಿರುವುದರಿಂದ ಉಪನೋಂದಣಾಧಿಕಾರಿ ಕಚೇರಿಯಲ್ಲಿ ಸರ್ಕಾರಿ ಆಸ್ತಿಗಳನ್ನು ಅಕ್ರಮವಾಗಿ ಅತಿಕ್ರಮಿಸಿಕೊಂಡು ನೋಂದಣಿ ಮಾಡಿಸುತ್ತಿರುವುದು, ಕೈ ಬರಹದಲ್ಲಿರುವುದನ್ನು ತಿದ್ದುವುದು ಕಂಡುಬಂದಿದೆ. ಇದರಿಂದ ಸಿವಿಲ್‌ ವ್ಯಾಜ್ಯಗಳು ಉದ್ಭವವಾಗುತ್ತಿದೆ.ಇದನ್ನು ತಪ್ಪಿಸುವ ಉದ್ದೇಶದಿಂದ ನಮೂನೆ-3 ಅನ್ನು ಅಧಿಕೃತವಾಗಿ ತಂತ್ರಾಂಶದ ಮೂಲಕ ಪಡೆದು ಸಕ್ಷಮ ಅಧಿಕಾರಿಯಿಂದ ದೃಢೀಕರಿಸಿದ ಫಾರಂ-3 ಪಡೆದು ನಂತರ ಆಸ್ತಿಯನ್ನು ನೋಂದಣಿ ಮಾಡುವಂತೆ ಸಂಬಂಧಿಸಿದ ಉಪ ನೋಂದಣಾಧಿಕಾರಿಗಳ ಕಚೇರಿಗೆ ಸೂಚನೆ ನೀಡುವಂತೆ ಪೌರಾಡಳಿತ ನಿರ್ದೇಶನಾಲಯಕ್ಕೆ ಜಿಲ್ಲಾಡಳಿತ ಪತ್ರ ಬರೆದಿದೆ.

ಜಾಗೃತಿ ಫ‌ಲಕಕ್ಕೆ ಸೂಚನೆ: ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಕಚೇರಿಗಳಲ್ಲಿ ಆಸ್ತಿ ತೆರಿಗೆ ಪಾವತಿಸಿದ ಕಟ್ಟಡ ಮಾಲೀಕರು ನಮೂನೆ-3 ಪಡೆಯುವ ಬಗ್ಗೆ ಜಾಗೃತಿ ಫ‌ಲಕಗಳನ್ನು ಅಳವಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು. ಎಷ್ಟೋ ಜನರು ಆಸ್ತಿ ತೆರಿಗೆ ಪಾವತಿಸಿ ನಮೂನೆ-3 ಅನ್ನು ಪಡೆಯದೆ ರಸೀದಿ ಪಡೆದುಕೊಂಡು ಹೋಗುತ್ತಿದ್ದಾರೆ. ಕಟ್ಟಡ ಮಾಲೀಕರು ತಮ್ಮ ಆಸ್ತಿಯ ಎದುರು ನಿಂತು ಫೋಟೋ ತೆಗೆಸಿಕೊಂಡು ಬಳಿಕ ಆಸ್ತಿಯ ವಿವರಗಳನ್ನು ಅರ್ಜಿಯಲ್ಲಿ ನಮೂದಿಸಿ ಅಪ್‌ಲೋಡ್‌ ಮಾಡುವ ವಿಧಾನವೇ ಗೊತ್ತಿಲ್ಲದೆ ಪರಿತಪಿಸುತ್ತಿದ್ದಾರೆ. ಕೆಲವರು ನಮೂನೆ-3 ಪಡೆಯಲು ತಿಂಗಳಾನುಗಟ್ಟಲೆ ಅಲೆದಾಡುತ್ತಿರುವ ವಿಷಯ ಜಿಲ್ಲಾಧಿಕಾರಿಯವರ ಗಮನಕ್ಕೆ ಬಂದಿರುವುದರಿಂದ ನಗರಸಭೆ-ಪುರಸಭೆ, ಪಟ್ಟಣ ಪಂಚಾಯಿತಿಯಲ್ಲಿರುವ ಅವ್ಯವಸ್ಥೆ ಸರಿಪಡಿಸುವುದಕ್ಕೆ ಕಟ್ಟುನಿಟ್ಟಿನ ಕ್ರಮ ಜರುಗಿಸುವುದಕ್ಕೆ ಕಾರ್ಯೋನ್ಮುಖವಾಗಿದೆ.

 

-ಮಂಡ್ಯ ಮಂಜುನಾಥ್‌

ಟಾಪ್ ನ್ಯೂಸ್

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.