ಭತ್ತ ಖರೀದಿಗೆ ನೋಂದಣಿ ಕೇಂದ್ರ ಆರಂಭ


Team Udayavani, Dec 16, 2020, 4:17 PM IST

ಭತ್ತ ಖರೀದಿಗೆ ನೋಂದಣಿ ಕೇಂದ್ರ ಆರಂಭ

ಮಂಡ್ಯ: 2020-21ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿರೈತರಿಂದ ಭತ್ತ ಖರೀದಿಸಲು ಜಿಲ್ಲೆಯಲ್ಲಿ ನೋಂದಣಿ ಕೇಂದ್ರಗಳನ್ನು ತೆರೆದಿದ್ದು, ರೈತರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್‌ ತಿಳಿಸಿದ್ದಾರೆ.

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕವ್ಯವಹಾರಗಳ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಗೆ ಕರ್ನಾಟಕ ರಾಜ್ಯ ಸಹಕಾರ ಮಾರುಕಟ್ಟೆಮಹಾಮಂಡಳಖರೀದಿಏಜೆನ್ಸಿಯಾಗಿಕಾರ್ಯನಿರ್ವಹಿಸುತ್ತಿದ್ದು, ಪ್ರತಿರೈತನಿಂದ ಗರಿಷ್ಠ 75 ಕ್ವಿಂಟಾಲ್‌ ಭತ್ತ ಸ್ವೀಕರಿಸಬಹುದಾಗಿದೆ.ಭತ್ತ (ಸಾಮಾನ್ಯ)ಕ್ಕೆ ನಿಗದಿಪಡಿಸಿರುವ ಕನಿಷ್ಠ ಬೆಂಬಲಬೆಲೆ ಕ್ವಿಂಟಾಲ್‌ಗೆ 1868 ರೂ. ಇದೆ.ಈ ಸಂಬಂಧಮಾನದಂಡಗಳನ್ವಯ ಏಫ್‌ಎಕ್ಯೂ ಗುಣ ಮಟ್ಟದ ಭತ್ತವನ್ನು, ಸರ್ಕಾರದ ನಿಗದಿಪಡಿಸಿರುವ ಬೆಲೆಯಂತೆ ರೈತರಿಂದ ಸ್ವೀಕರಿಸಬಹುದಾಗಿದೆ. ರೈತರ ನೋಂದಣಿ ಅವಧಿಯು 30 ನವೆಂಬರ್‌ 2020ರಿಂದ 30 ಡಿಸೆಂಬರ್‌2020ಆಗಿದೆ. ನೋಂದಾಯಿತರೈತರಿಂದಭತ್ತವನ್ನು ಖರೀದಿಸಿ, ಮಿಲ್‌ಗ‌ಳಲ್ಲಿ ಶೇಖರಿಸುವಮತ್ತು ಪರಿವರ್ತಿಸುವ ಕಾರ್ಯಾರಂಭ ಅವಧಿಯು ಡಿ.20ರಿಂದ ಮುಂದಿನ ಜನವರಿ 7ರವರೆಗೆನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನೋಂದಣಿ ಕೇಂದ್ರಗಳು: ಮಂಡ್ಯ ಜಿಲ್ಲೆಯಲ್ಲಿ ಒಟ್ಟು 31 ನೋಂದಣಿ ಕೇಂದ್ರಗಳನ್ನು ತೆರೆಯಲಾಗಿದೆ.ಮಂಡ್ಯದ ಕೆರಗೋಡು ರೈತ ಸಂಪರ್ಕ ಕೇಂದ್ರ, ಉಮ್ಮಡಹಳ್ಳಿರಾಜ್ಯ ಉಗ್ರಾಣ ನಿಗಮ ಆವರಣ, ಯಲಿಯೂರು ರಾಜ್ಯ ಉಗ್ರಾಣ ನಿಗಮ ಆವರಣ, ದುದ್ದ ರೈತಸಂಪರ್ಕ ಕೇಂದ್ರ, ಬಸರಾಳು ನಾಡಕಚೇರಿ, ಕೊತ್ತತ್ತಿ ರೈತ ಸಂಪರ್ಕ ಕೇಂದ್ರ,ಮದ್ದೂರಿನ ಎಪಿಎಂಸಿ ಆವರಣ, ಗ್ರಾಪಂ ಕೆ.ಎಂ.ದೊಡ್ಡಿ, ಗ್ರಾಪಂಕೊಪ್ಪ, ರಾಜ್ಯ ಉಗ್ರಾಣ ನಿಗಮ ಆವರಣ ಚಾಮನಹಳ್ಳಿ, ಗ್ರಾಪಂ ಕೆಸ್ತೂರು, ಮಳವಳ್ಳಿಯ ಎಪಿಎಂಸಿ ಆವರಣ, ರಾಜ್ಯ ಉಗ್ರಾಣನಿಗಮ ಆವರಣ ಕಿರುಗಾವಲು, ಹಲಗೂರು ರೈತಸಂಪರ್ಕ ಕೇಂದ್ರ, ಬಿ.ಜಿ.ಪುರ ನಾಡ ಕಚೇರಿ, ಕೆ.ಆರ್‌ .ಪೇಟೆಯ ಎಪಿಎಂಸಿ ಆವರಣ, ಕಿಕ್ಕೇರಿ ರೈತ ಸಂಪರ್ಕ ಕೇಂದ್ರ, ಬೂಕನಕೆರೆ ರೈತ ಸಂಪರ್ಕ ಕೇಂದ್ರ,ಅಕ್ಕಿ ಹೆಬ್ಟಾಳು ರೈತ ಸಂಪರ್ಕ ಕೇಂದ್ರ, ತೆಂಡೆಕೆರೆ ಗ್ರಾಪಂ, ಸಂತೇಬಾಚಹಳ್ಳಿ ರೈತ ಸಂಪರ್ಕ ಕೇಂದ್ರ, ಪಾಂಡವಪುರದ ಎಪಿಎಂಸಿ ಆವರಣ, ಜಕ್ಕನಹಳ್ಳಿ ರೈತ ಸಂಪರ್ಕ ಕೇಂದ್ರ, ಚಿನಕುರಳಿ ರೈತ ಸಂಪರ್ಕ ಕೇಂದ್ರ, ಕ್ಯಾತನಹಳ್ಳಿ ಗ್ರಾಪಂ, ಶ್ರೀರಂಗಪಟ್ಟಣದ ಎಪಿಎಂಸಿ ಕಚೇರಿಬೆಂಗಳೂರು-ಮೈಸೂರು ಹೆದ್ದಾರಿ, ಪಿಎಸಿಎಸ್‌ ಅರಕೆರೆ, ರೈತ ಸಂಪರ್ಕ ಕೇಂದ್ರ ಬೆಳಗೋಳ,ಪಿಎಸಿಎಸ್‌ಕೆ.ಶೆಟ್ಟಹಳ್ಳಿ,ನಾಗಮಂಗಲದ ಎಪಿಎಂಸಿ ಆವರಣ, ಬೆಳ್ಳೂರು ರೈತ ಸಂಪರ್ಕ ಕೇಂದ್ರಗಳಲ್ಲಿ ನೋಂದಣಿ ಮಾಡಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

ಗುಣಮಟ್ಟದ ಭತ್ತಸ್ವೀ ಕಾರ: ನೋಂದಾಯಿಸಿಕೊಂಡ ರೈತರ ಮೊಬೈಲ್‌ ಸಂಖ್ಯೆಗೆ ಸಂದೇಶ ಕಳುಹಿಸಲಾ ಗುತ್ತದೆ. ಮೊಬೈಲ್‌ಗೆ ಸಂದೇಶ ಸ್ವೀಕೃತವಾಗಿರುವರೈತರು ರೈಸ್‌ಮಿಲ್‌ಗೆ ಭತ್ತವನ್ನು ನೀಡುವ ಸಂದರ್ಭದಲ್ಲಿ ಸರ್ಕಾರವು ನಿಗದಿಪಡಿಸಿರುವಉತ್ತಮ ಸರಾಸರಿ ಗುಣಮಟ್ಟದಿಂದ ಕೂಡಿರಬೇಕು. ಉತ್ತಮ ಸರಾಸರಿ ಗುಣಮಟ್ಟ ಹೊಂದಿರದಭತ್ತವನ್ನು ಸ್ವೀಕರಿಸಲಾಗುವುದಿಲ್ಲ. ಆದ್ದರಿಂದ ರೈತರು

ಉತ್ತಮ ಗುಣಮಟ್ಟದ ಭತ್ತವನ್ನು ನೀಡಬೇಕು. ಯಾವುದೇ ಕಾರಣಕ್ಕೂ ಭತ್ತವನ್ನು ಮಧ್ಯವರ್ತಿಗಳಿಗೆಮಾರಾಟ ಮಾಡದೇ ಸರ್ಕಾರದ ಈ ಯೋಜನೆಯಡಿ ಸರಬರಾಜು ಮಾಡಿ ಸದುಪಯೋಗಪಡಿಸಿಕೊಳ್ಳಿ ಹಾಗೂ ಕೋವಿಡ್‌-19 ಹರಡುವಿಕೆಯನ್ನು ತಡೆಗಟ್ಟುವ ಬಗ್ಗೆ ಜಿಲ್ಲಾಡಳಿತ ನೀಡಿರುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ

Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ

ಪಟಾಕಿಗೆ ಮದ್ದು ತುಂಬುತ್ತಿದ್ದಾಗ ಸ್ಫೋಟ: ಓರ್ವ ಕಾರ್ಮಿಕ ಸಾವು

ಪಟಾಕಿಗೆ ಮದ್ದು ತುಂಬುತ್ತಿದ್ದಾಗ ಸ್ಫೋಟ: ಓರ್ವ ಕಾರ್ಮಿಕ ಸಾವು

Melukote: ಚೆಲುವನಾರಾಯಣಸ್ವಾಮಿಯ ಉತ್ಸವ… ಖಜಾನೆಯಿಂದ ವೈರಮುಡಿ ಕಿರೀಟ ರವಾನೆ

Melukote: ಶ್ರೀ ಚೆಲುವನಾರಾಯಣಸ್ವಾಮಿಯ ಉತ್ಸವ… ಖಜಾನೆಯಿಂದ ವೈರಮುಡಿ ಕಿರೀಟ ರವಾನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.