ಸಿಎಂಗೆ ತಾಲೂಕು ಸ್ಥಿತಿಗತಿಗಳ ಮಾಹಿತಿ ರವಾನೆ
Team Udayavani, May 27, 2020, 6:15 AM IST
ಕೆ.ಆರ್.ಪೇಟೆ: ತಾಲೂಕಿನಲ್ಲಿ ಕೊರೊನಾ ಸ್ಥಿತಿಗತಿಗಳ ಬಗ್ಗೆ ಪ್ರತಿದಿನ ಮುಖ್ಯಮಂತ್ರಿ ಯಡಿಯೂರಪ್ಪ ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ನಿಯಂತ್ರಣಕ್ಕೆ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡುತ್ತಿದ್ದಾರೆ ಎಂದು ಸಚಿವ ನಾರಾಯಣಗೌಡ ತಿಳಿಸಿದರು.
ಸೀಲ್ಡೌನ್ ಆಗಿರುವ ಮರುವನಹಳ್ಳಿಗೆ ಭೇಟಿ ನೀಡಿ ಗ್ರಾಮಸ್ಥರಿಗೆ ಪಡಿತರ ಕಿಟ್ ವಿತರಿಸಿ ಮಾತನಾಡಿ, ಕೊರೊನಾ ಸೋಂಕಿನಿಂದ ಆತಂಕಕ್ಕೆ ಒಳಗಾಗದೆ, ಜಾಗ್ರತೆಗಳನ್ನು ಕಡ್ಡಾಯವಾಗಿ ಅನುಸರಿಸಬೇಕು. ಸರ್ಕಾರ ನಿಮ್ಮ ಗ್ರಾಮಕ್ಕೆ ಬೇಕಾಗಿರುವ ಎಲ್ಲಾ ಸೌಲಭ್ಯಗಳನ್ನು ನೀಡುತ್ತದೆ. ಎಲ್ಲರೂ ಮನೆಗಳಲ್ಲಿಯೇ ಇದ್ದು ಕೊರೊನಾ ತಡೆಗೆ ಸಹಕರಿಸಬೇಕೆಂದರು.
ಯಾವುದೇ ಕಾರಣಕ್ಕೂ ಯಾರೂ ಅಧಿಕಾರಿಗಳ ಕಣ್ಣುತಪ್ಪಿಸಿ ಗ್ರಾಮದಿಂದ ಹೊರಹೋಗುವುದು. ಗ್ರಾಮಕ್ಕೆ ಯಾರೂ ಅಕ್ರಮ ಪ್ರವೇಶ ಮಾಡಬಾರದು. ಈಗ ಮರುವನಹಳ್ಳಿಗೆ ಒಬ್ಬ ವ್ಯಕ್ತಿಯ ಅಕ್ರಮ ಪ್ರವೇಶದಿಂದಾಗಿಸಮಸ್ಯೆ ಎದುರಾಗಿದೆ. ಹೊರಗಿನಿಂದ ಬರುವವರು ಮೊದಲು ತಪಾಸಣೆ ಮಾಡಿಸಿಕೊಂಡು ಗ್ರಾಮಕ್ಕೆ ಬರಬೇಕು ಎಂದರು.
ಇದೇ ವೇಳೆ ಹಿರಿಯ ನಾಗರೀಕರು ಸಂಧ್ಯ, ಸುರಕ್ಷಾ, ವೃದಾಪ್ಯ ಪಿಂಚಣಿ ಸಕಾಲದಲ್ಲಿ ಬಿಡುಗಡೆಯಾಗುತ್ತಿಲ್ಲ ಎಂದು ದೂರಿದರು. ನಿಮ್ಮ ಸಮಸ್ಯೆ ಕೂಡಲೇ ಬಗೆಹರಿಸುವುದಾಗಿ ನಾರಾಯಣಗೌಡರು ಹೇಳಿದರು. ಈ ವೇಳೆ ಮುಡಾ ಅಧ್ಯಕ್ಷ ಶ್ರೀನಿವಾಸ್, ಎಸಿ ಶೈಲಜಾ, ತಹಶೀಲ್ದಾರ್ ಶಿವಮೂರ್ತಿ, ಜಿಪಂ ಮಾಜಿ ಉಪಾಧ್ಯಕ್ಷ ಅಂಬರೀಶ್, ಪಿಡಿಒಗಳಾದ ನಾಯಿದಾ ಅಕ್ತರ್, ಯಶಸ್ವಿನಿ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
Mandya Lok Sabha Constituency; ಸ್ಟಾರ್ ಚಂದ್ರು ಪರ ಇಂದು ನಟ ದರ್ಶನ್ ಪ್ರಚಾರ
ಚುನಾವಣ ಬಾಂಡ್ ವಿಶ್ವದ ಅತಿದೊಡ್ಡ ಹಗರಣ: ರಾಹುಲ್