ಹಕ್ಕೊತ್ತಾಯಗಳ ಜಾರಿಗಾಗಿ ಆಗ್ರಹ
Team Udayavani, Jun 2, 2020, 5:47 AM IST
ಮಂಡ್ಯ: ಉದ್ಯೋಗ, ಆಹಾರ ಮತ್ತು ಹಿಂಸೆ ತಡೆಗೆ ಒತ್ತಾಯಿಸಿ ಅಖೀಲ ಭಾರತ ಜನವಾದಿ ಮಹಿಳಾ ಸಂಘಟನೆ ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು ಸರ್ಕಾರ ವಿರೋಧಿ ಭಿತ್ತಿಪತ್ರಗಳನ್ನು ಹಿಡಿದು ಘೋಷಣೆ ಕೂಗಿದರು. ಮಹಿಳೆಯರ ಘನತೆಯ ಬದುಕಿಗಾಗಿ ಮಂಡಿಸಿರುವ ಹಕ್ಕೊತ್ತಾಯಗಳನ್ನು ಕೂಡಲೇ ಜಾರಿಗೊಳಿಸುವಂತೆ ಆಗ್ರಹಿಸಿದರು.
ಆದಾಯ ತೆರಿಗೆಯಿಂದ ಹೊರಗಿರುವ ಎಲ್ಲ ಕುಟುಂಬಗಳ ಖಾತೆಗೆ 7500 ರೂ. ಜಮೆ ಮಾಡುವು ದು. ಪ್ರತಿಯೊಬ್ಬರಿಗೂ ತಲಾ 10 ಕೆಜಿಯಂತೆ ಆಹಾರ ಧಾನ್ಯಗಳನ್ನು 6 ತಿಂಗಳವರೆಗೆ ಉಚಿತವಾಗಿ ನೀಡಬೇಕು. ಆಹಾರ ಧಾನ್ಯಗಳ ಜೊತೆಗೆ ಇತರೆ ಜೀವ ನಾವಶ್ಯಕ ವಸ್ತುಗಳು, ಮಹಿಳೆಯರಿಗೆ ಸ್ಯಾನಿಟರಿ, ನ್ಯಾಪ್ಕಿನ್ಗಳನ್ನು ಪಡಿತರ ಅಂಗಡಿಗಳ ಮೂಲಕ ಉಚಿತವಾಗಿ ವಿತರಿಸುವಂತೆ ಒತ್ತಾಯಿಸಿದರು.
ಉದ್ಯೋಗಖಾತರಿ ಯೋಜನೆಯನ್ನು ನಗರ ಪಂಚಾಯ್ತಿಗಳಿಗೂ ವಿಸ್ತರಿಸುವುದು, ಕ್ವಾರಂಟೈನ್ಗೆ ಒಳಗಾದವರಿಗೆ ಮೂಲ ಸೌಲಭ್ಯ, ತುರ್ತು ಟೆಸ್ಟ್ ಮಾಡಿ ಅವಧಿ ಮುಗಿದವರನ್ನು ಗೌರವಯುತವಾಗಿ ಬಿಡುಗಡೆ ಮಾಡಬೇಕು. ಗರ್ಭನಿರೋಧಕ ಸಾಧನಗಳ ಉಚಿತ ವಿತರಣೆ, ಕೆಲಸ ಬಯಸುವ ಎಲ್ಲ ವಯಸ್ಕರರಿಗೆ ನರೇಗಾ ಅಡಿಯಲ್ಲಿ ಕನಿಷ್ಠ 200 ದಿನಗಳ ಮೇಲ್ಪಟ್ಟು ಕೆಲಸ ಒದಗಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ರಾಜ್ಯಾಧ್ಯಕ್ಷೆ ದೇವಿ, ಜಿಲ್ಲಾಧ್ಯಕ್ಷೆ ಶೋಭಾ, ಜಿಲ್ಲಾ ಕಾರ್ಯದರ್ಶಿ ಸುಶೀಲಾ, ಮಂಜುಳಾ, ಸುನೀತಾ, ಲತಾ, ಕೆ.ಎಸ್.ಸುನೀತಾ, ಚಂದ್ರಮ್ಮ, ರಾಣಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ
KRS Dam: ಶೀಘ್ರ ಕೆಆರ್ಎಸ್ ಡ್ಯಾಂ ಭರ್ತಿ 92 ಗ್ರಾಮಗಳಲ್ಲಿ ಪ್ರವಾಹ ಭೀತಿ
Cauvery Water: ಎಚ್ಡಿಕೆ ಕಾವೇರಿ ಸಮಸ್ಯೆ ಬಗೆಹರಿಸಿದ್ರೆ, ನಾನು ಚುನಾವಣೆಗೆ ಸ್ಪರ್ಧಿಸಲ್ಲ
Cauvery Water Problem; ಸಾಯುವುದರೊಳಗೆ ಕಾವೇರಿ ಸಮಸ್ಯೆಗೆ ಮುಕ್ತಿ: ಎಚ್ಡಿಕೆ
Mandya; ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ
MUST WATCH
ಹೊಸ ಸೇರ್ಪಡೆ
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.