ಪ್ರವಾಹ ಸಂತ್ರಸ್ತರ ನಷ್ಟ ಪರಿಹಾರಕ್ಕೆ ಆಗ್ರಹ
Team Udayavani, Aug 16, 2019, 4:39 PM IST
ಇತ್ತೀಚೆಗೆ ಪ್ರವಾಹದಿಂದ ಜಖಂಗೊಡಿದ್ದ ಶ್ರೀರಂಗಪಟ್ಟಣ ತಾಲೂಕಿನ ವೆಲ್ಲೆಸ್ಲಿ ಸೇತುವೆ ವೀಕ್ಷಿಸಿದ ಸಂಸದೆ ಸುಮಲತಾ.
ಶ್ರೀರಂಗಪಟ್ಟಣ: ಕೆಆರ್ಎಸ್ ಜಲಾಶಯದ ಪ್ರವಾಹದಿಂದ ಕಾವೇರಿ ನದಿ ತೀರದ ಪ್ರದೇಶದಲ್ಲಿ ಮನೆಗಳು ಹಾಗೂ ಆಸ್ತಿಪಾಸ್ತಿ, ಬೆಳೆ ಹಾನಿಗ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಂಸದೆ ಸುಮಲತಾ ಸಂತ್ರಸ್ತರಿ ಪರಿಹಾರ ಒದಗಿಸಲು ಸರ್ಕಾರಗಳಿಗೆ ಮನವಿ ಮಾಡುವುದಾಗಿ ಭರವಸೆ ನೀಡಿದರು.
ಈ ಬಗ್ಗೆ ತಹಶೀಲ್ದಾರ್ ಡಿ.ನಾಗೇಶ್ ಅವರಿಂದ ನಷ್ಟಕ್ಕೊಳ ಗಾದ ಸಂತ್ರಸ್ತರನ್ನು ಗುರುತಿಸಿ ಕೂಡಲೇ ಪರಿಹಾರಕ್ಕೆ ವರದಿ ತಯಾರಿಸುವಂತೆ ಸೂಚಿಸಿದರು.
ಕಾವೇರಿ ಉಕ್ಕಿ ಹರಿದ ಪ್ರವಾಹದಲ್ಲಿ ಪಟ್ಟಣ ಪುರಸಭಾ ವ್ಯಾಪ್ತಿಯ ನದಿ ತೀರದ 80 ಎಕರೆ ಕಬ್ಬು, 80 ಎಕರೆ ಭತ್ತ, 40 ಎಕರೆ ತೋಟಗಾರಿಕೆ ಬೆಳೆಗಳು ನಾಶವಾ ಗಿವೆ. 11 ಮನೆಗಳು ಕುಸಿದಿವೆ. 2 ಜಾನುವಾರು ನೀರಲ್ಲಿ ಕೊಚ್ಚಿ ಹೋಗಿವೆ. ಈ ಕುರಿತು ಈಗಾಗಲೇ ವರದಿ ತಯಾರಿಸಿ ಪರಿಹಾರಕ್ಕೆ ಜಿಲ್ಲಾಡಳಿತಕ್ಕೆ ಕಳುಹಿಸಿಕೊಡಲಾಗಿದೆ ಎಂದು ತಹಶೀಲ್ದಾರ್ ಡಿ.ನಾಗೇಶ್ ಸಂಸದರಿಗೆ ಮಾಹಿತಿ ನೀಡಿದರು.
ಬಳಿಕ ಪಾರಂಪರಿಕ ವೆಲ್ಲೆಸ್ಲಿ ಸೇತುವೆ ಬಳಿ ಪ್ರವಾಹಕ್ಕೆ ಸಿಲುಕಿದ್ದ ತಡೆಗೋಡೆ, ಚಪ್ಪಡಿಗಳು ಜಖಂ ಗೊಂಡಿರುವುದು, ತಾಲೂಕಿನ ದೊಡ್ಡಪಾಳ್ಯ ಗ್ರಾಮದ ಬಳಿ ನೆರೆ ಹಾವಳಿಗೆ ತುತ್ತಾಗಿದ್ದ ಕಬ್ಬು ಇತರೆ ಬೆಳೆಗಳನ್ನು ಸಂಸದರು ವೀಕ್ಷಿಸಿದರು. ತಾಪಂ ಇಒ ಅರುಣ್ ಕುಮಾರ್, ತಾಲೂಕು ಮಟ್ಟದ ಅಧಿಕಾರಿಗಳು, ಮುಖಂಡರಾದ ಎಸ್. ಎಲ್.ಲಿಂಗರಾಜು, ಸಚಿದಾ ನಂದ, ಮದನ್ಕುಮಾರ್, ಬೇಲೂ ರು ಸೋಮಶೇಖರ್ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya Lok Sabha Constituency; ಸ್ಟಾರ್ ಚಂದ್ರು ಪರ ಇಂದು ನಟ ದರ್ಶನ್ ಪ್ರಚಾರ
ಚುನಾವಣ ಬಾಂಡ್ ವಿಶ್ವದ ಅತಿದೊಡ್ಡ ಹಗರಣ: ರಾಹುಲ್
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
Lok Sabha Elections: ಎಚ್ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್
ಡಿಕೆಶಿಗೆ ಸಿದ್ದರಾಮಯ್ಯ ಏಕೆ ಸಿಎಂ ಸ್ಥಾನ ಬಿಟ್ಟುಕೊಡಲಿಲ್ಲ: ಪ್ರತಾಪಸಿಂಹ ಪ್ರಶ್ನೆ