ಸಕಾಲದಲ್ಲಿ ಸಾಲ ಮರುಪಾವತಿಸಲು ಮನವಿ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಹಕಾರ ಸಂಘದ ಸರ್ವ ಸದಸ್ಯರ ಸಭೆ
Team Udayavani, Jun 29, 2019, 4:03 PM IST
ಕೆ.ಆರ್.ಪೇಟೆ: ಸದಸ್ಯರು ಸಂಘದ ಸಾಲ ವನ್ನು ಸದ್ಭಳಕೆ ಮಾಡಿಕೊಂಡು ಸಕಾಲದಲ್ಲಿ ಮರುಪಾವತಿ ಮಾಡಿದರೆ ಸಂಘಗಳ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಎಂದು ಪುರಸಭೆ ಹಿರಿಯ ಸದಸ್ಯ ಡಿ.ಪ್ರೇಮಕುಮಾರ್ ಮನವಿ ಮಾಡಿದರು.
ತಾಲೂಕು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಪತ್ತಿನ ಸಹಕಾರ ಸಂಘದ ಪ್ರಥಮ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದ ಅವರು, ಸಹಕಾರ ಸಂಘಗಳು ಗ್ರಾಮೀಣ ಪ್ರದೇಶದಲ್ಲಿ ಉಳಿದು ಹೆಮ್ಮರವಾಗಿ ಬೆಳೆದರೆ ಮಾತ್ರ ರೈತರು ಹಾಗೂ ಜನಸಾಮಾನ್ಯರ ರಕ್ತವನ್ನು ಹೀರುತ್ತಿರುವ ಖಾಸಗಿ ಲೇವಾದೇವಿದಾರರು ಹಾಗೂ ಚಕ್ರಬಡ್ಡಿ, ಮೀಟರ್ ಬಡ್ಡಿಯ ದಂಧೆ ತಡೆದು ಬಡಜನರು ನೆಮ್ಮದಿಯ ಜೀವನವನ್ನು ನಡೆಸಲು ಸಹಾಯ ಮಾಡಬಹುದಾಗಿದೆ ಎಂದು ಹೇಳಿದರು.
ಸಹಕಾರ ಸಂಘಗಳು ವರದಾನ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿರುವ ಜನರು ತಮಗೆ ವರವಾಗಿ ಸಿಕ್ಕಿರುವ ಸಹಕಾರ ಸಂಘಕ್ಕೆ ಕಡ್ಡಾಯವಾಗಿ ಷೇರುದಾರರಾಗುವ ಮೂಲಕ ಸರ್ಕಾರವು ಬಡವರಿಗಾಗಿಯೇ ನೀಡುತ್ತಿರುವ ಬಡ್ಡಿರಹಿತ ಸಾಲಗಳು ಹಾಗೂ ಸಬ್ಸಿಡಿ ಸಾಲ ಸೌಲಭ್ಯವನ್ನು ಸದ್ಭಳಕೆ ಮಾಡಿಕೊಂಡು ಆರ್ಥಿಕವಾಗಿ ಸದೃಢರಾಗಿ ಪ್ರಗತಿಯ ಧಿಕ್ಕಿನತ್ತ ಸಾಗಬೇಕು ಎಂದು ಕಿವಿಮಾತು ಹೇಳಿದರು.
ಸಭೆಯಲ್ಲಿ ತಾಲೂಕು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಪತ್ತಿನ ಸಹಕಾರ ಸಂಘದ ಮುಖ್ಯ ಪ್ರವರ್ತಕರಾದ ಕಮಲಾಕ್ಷಿ, ರಮೇಶ್, ಜ್ಯೋತಿಲಕ್ಷ್ಮೀ, ಚೆಲುವರಾಜು, ಶಿವಪ್ರಕಾಶ್, ವೆಂಕಟೇಶ್, ಮೋಹನ, ಶೋಭಾ, ಕವಿತಾ, ರೇಣುಕಮ್ಮ, ಮಲ್ಲೇಶ್, ಜಕ್ಕನಹಳ್ಳಿ ರಾಜೇಶ್, ಮೂರ್ತಿ ಮೊದಲಾದವರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
Mandya Lok Sabha Constituency; ಸ್ಟಾರ್ ಚಂದ್ರು ಪರ ಇಂದು ನಟ ದರ್ಶನ್ ಪ್ರಚಾರ
ಚುನಾವಣ ಬಾಂಡ್ ವಿಶ್ವದ ಅತಿದೊಡ್ಡ ಹಗರಣ: ರಾಹುಲ್
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ