ಚುನಾವಣೆಯಲ್ಲಿ ಮತಪತ್ರ ಬಳಸಲು ಆಗ್ರಹ


Team Udayavani, Jan 26, 2019, 9:41 AM IST

bsp.jpg

ಮಂಡ್ಯ: 2019ರ ಲೋಕಸಭಾ ಚುನಾವಣೆಯಲ್ಲಿ ಇವಿಎಂ ಬಳಸದೆ ಮತ ಪತ್ರಗಳನ್ನು ಬಳಸಿ ಚುನಾವಣೆ ನಡೆಸುವಂತೆ ಒತ್ತಾಯಿಸಿ ಬಹುಜನ ಸಮಾಜ ಪಾರ್ಟಿ(ಬಿಎಸ್‌ಪಿ) ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ಸಿಲ್ವರ್‌ ಜ್ಯೂಬಿಲಿ ಪಾರ್ಕಿನಲ್ಲಿ ಜಮಾಯಿಸಿದ ಕಾರ್ಯಕರ್ತರು, ಬೆಂಗಳೂರು- ಮೈಸೂರು ಹೆದ್ದಾರಿ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿ ಮೂಲಕ ಮುಖ್ಯ ಚುನಾವಣಾ ಆಯುಕ್ತರಿಗೆ ಮನವಿ ಸಲ್ಲಿಸಿದರು.

ಕಳೆದ 2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟದ ಅತ್ಯಂತ ಹೆಚ್ಚಿನ ಸ್ಥಾನಗಳನ್ನು ಗಳಿಸಿ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಆಶ್ಚರ್ಯ ಮತ್ತು ಅನುಮಾನ ಉಂಟಾಗಿತ್ತಾದರೂ, ಅದನ್ನು ಒಪ್ಪಿಕೊಳ್ಳಲಾಯಿತು. ಬಳಿಕ ನಡೆದ ಬೇರೆಬೇರೆ ರಾಜ್ಯಗಳ ಚುನಾವಣಾ ಫಲಿತಾಂಶಗಳು ಮಾತ್ರ ಭಾರತೀಯರೆಲ್ಲರನ್ನೂ ದಿಗ್ಬ್ರಾಂತಗೊಳಿಸಿದವು. 2014ರ ಚುನಾವಣೆಯ ಮೇಲಿನ ಅನುಮಾನಗಳು ಖಾತ್ರಿಗೊಳಿಸಿ ಮತದಾನ ಯಂತ್ರಗಳ ಮೇಲೆ ಅನುಮಾನ ತೀವ್ರಗೊಂಡವು ಎಂದು ದೂರಿದರು.

ಮತಯಂತ್ರಗಳಿಗೆ ಕನ್ನ: 2017ರಲ್ಲಿ ನಡೆದ ಉತ್ತರ ಪ್ರದೇಶ ಚುನಾವಣೆ ಮಾತ್ರ ಇವಿಎಂನಿಂದಲೇ ಬಿಜೆಪಿ ಗೆಲ್ಲುತ್ತಿದೆ ಎಂಬುದನ್ನು ಸಾಬೀತುಪಡಿಸಿತು. ಇದಕ್ಕೆ ಪೂರಕವಾಗಿ ಅಮೆರಿಕಾದ ಸೈಬರ್‌ ಪರಿಣಿತ ಸೈಯದ್‌ ಶುಖಾ ಲಂಡನ್‌ನಲ್ಲಿ ಇವಿಎಂಗಳನ್ನು ಹ್ಯಾಕ್‌ ಮಾಡಬಹುದು ಎಂಬುದನ್ನು ತೋರಿಸಿದರು. ಬಿಜೆಪಿ ನಾಯಕ ಗೋಪಿನಾಥ್‌ ಮುಂಡೆ ಅವರಿಗೆ ಮತಯಂತ್ರಗಳಿಗೆ ಕನ್ನ ಹಾಕುವ ಬಗ್ಗೆ ತಿಳಿದಿತ್ತು. ಅದಕ್ಕಾಗಿ 2014ರಲ್ಲಿ ಅವರನ್ನು ಕೊಲ್ಲಲಾಯಿತು. ಉತ್ತರಪ್ರದೇಶ, ಮಹಾರಾಷ್ಟ್ರ, ಗುಜರಾತ್‌ ರಾಜ್ಯಗಳಲ್ಲಿ ನಡೆದ ಚುನಾವಣೆಗಳಲ್ಲಿ ಮತಯಂತ್ರಗಳ್ನು ತಿರುಚಿಸಲಾಗಿತ್ತು. ಇವಿಎಂ ಹ್ಯಾಕ್‌ ಮಾಡಲು ಕಡಿಮೆ ಫ್ರಿಕ್ವೆನ್ಸಿ ಸಿಗ್ನಲ್‌ಗ‌ಳನ್ನು ರಿಲಿಯನ್ಸ್‌ ಜಿಯೋ ನೀಡಿದೆ ಎಂದು ಶುಖಾ ಹೇಳಿದ್ದಾರೆ. ಟ್ರಾನ್ಸ್‌ಮಿಷನ್‌ ನಿಲ್ಲಿಸಿದ ಪರಿಣಾಮ ಮಧ್ಯಪ್ರದೇಶ, ಛತ್ತೀಸ್‌ಘಡ, ರಾಜಸ್ತಾನಗಳಲ್ಲಿ ಬಿಜೆಪಿ ಸೋಲಲು ಕಾರಣವಾಯಿತು ಎಂದು ಆರೋಪಿಸಿದರು.

ಪ್ರಜಾಪ್ರಭುತ್ವದ ಕಗ್ಗೊಲೆ: ಪ್ರಜಾಪ್ರಭುತ್ವ ವಿರೋಧಿ ಕೃತ್ಯವನ್ನು ತಮ್ಮ ಅಧಿಕಾರದ ಆಸೆಗೋಸ್ಕರ ಮಾಡುತ್ತಾರೆಂದರೆ ಇದಕ್ಕಿಂತ ರಾಷ್ಟ್ರದ್ರೋಹದ ಕೆಲಸ ಬೇರೊಂದಿಲ್ಲ. ಪ್ರಜಾ ಪ್ರಭುತ್ವದ ಅಡಿಪಾಯವಾದ ಮತದಾನವನ್ನೇ ಕಳ್ಳತನ ಮಾಡುವುದು ಪ್ರಜಾಪ್ರಭುತ್ವದ ಕಗ್ಗೊಲೆ. ಹಾಗೂ ಇವಿಎಂಗಳ ಮೇಲಿನ ಅನುಮಾನ ದಿನೇದಿನೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಇವಿಎಂ ಬಳಸದಂತೆ ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಮುಖಂಡರಾದ ಎಸ್‌.ಸಿದ್ದಯ್ಯ, ಹೆಚ್.ಎಸ್‌.ನರಸಿಂಹಮೂರ್ತಿ, ನಲ್ಲಹಳ್ಳಿ ಸುರೇಶ್‌, ಬಿ.ಕೆ.ರಾಜು, ಎಂ.ಎಸ್‌.ವೆಂಕಟೇಶ್‌, ಎಚ್.ಸಿ.ಸತೀಶ್‌, ಅಭಿಗೌಡ, ಜಗದೀಶ್‌, ಶಿವಶಂಕರ್‌ ಇತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections: ಎಚ್‌ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್‌

Lok Sabha Elections: ಎಚ್‌ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.