ಮುಚ್ಚಿದ್ದ ಶಾಲೆಗೆ ಮರುಜೀವ


Team Udayavani, Nov 25, 2019, 3:39 PM IST

mandya-tdy-1

ಭಾರತೀನಗರ: ಮೂಲಭೂತ ಸೌಕರ್ಯ ಕೊರತೆ ಹಾಗೂ ಶಿಕ್ಷಕರು-ಮಕ್ಕಳಿಲ್ಲದ ಪರಿಣಾಮ ಕಳೆದ ಒಂದು ವರ್ಷದಿಂದ ಮುಚ್ಚಿದ್ದ ಸರ್ಕಾರಿ ಶಾಲೆಯೊಂದನ್ನು ಜಾಗೃತ ಯುವಕರ ತಂಡ ಪುನರುಜ್ಜೀವನಗೊಳಿಸಿದೆ.

ಇಲ್ಲಿಗೆ ಸಮೀಪದ ಎಸ್‌.ಐ.ಹೊನ್ನಲ ಗೆರೆಯಲ್ಲಿ 1 ರಿಂದ 6ನೇ ತರಗತಿಯುಳ್ಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸುಣ್ಣ ಬಣ್ಣ ಕಂಡು ತನ್ನ ಹಿಂದಿನ ವೈಭವಕ್ಕೆ ಮರಳಿ ನಿಂತಿದೆ. ವಿವಿಧ ಖಾಸಗಿ ಶಾಲೆಗಳಲ್ಲಿ ದಾಖಲಾಗಿದ್ದ ಮಕ್ಕಳನ್ನು ಯುವಕರ ತಂಡ ಆಂದೋಲನ ನಡೆಸಿ, ಪೋಷಕರ ಮನವೊಲಿಸಿ 43 ವಿದ್ಯಾರ್ಥಿಗಳನ್ನು ಮತ್ತೆ ಶಾಲೆಗೆ ಕರೆ ತಂದಿದ್ದಾರೆ.

ಆಂದೋಲನ ನಡೆಸಿದ್ದರು: ಈ ಶಾಲೆಗೆ ಎಸ್‌ .ಐ.ಹೊನ್ನಲಗೆರೆ, ಹೊಸೂರು ಮತ್ತು ಬಾನಗಳ್ಳಿಯಿಂದ ವಿದ್ಯಾರ್ಥಿಗಳು ಬಂದು ವ್ಯಾಸಂಗ ಮಾಡುತ್ತಿದ್ದರು. ಆದರೆ ಶಿಕ್ಷಕರಿಲ್ಲದೆ, ಮೂಲ ಸೌಕರ್ಯವೂ ಇಲ್ಲದ್ದರಿಂದ ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸಿದ್ದರು. ಹೀಗಾಗಿ 2018-19ನೇ ಸಾಲಿನಲ್ಲಿ ಮಕ್ಕಳೇ ಇಲ್ಲದೆ ಶಾಲೆ ಬಾಗಿಲು ಮುಚ್ಚಿತ್ತು. ಈ ಪರಿಸ್ಥಿತಿಯಿಂದ ಮನನೊಂದ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮರಿಗೌಡ, ಮುಖ್ಯ ಶಿಕ್ಷಕ ಶಿವಕುಮಾರ್‌, ಗ್ರಾಮಸ್ಥರಾದ ನಾಗರಾಜು, ಶ್ರೀನಿವಾಸ್‌, ನವೀನ್‌, ಮಾದೇಗೌಡ, ಬಾನಗಳ್ಳಿ ರಮೇಶ್‌, ರಾಮು ಶಾಲೆ ಸ್ಥಿತಿಗತಿ ಕುರಿತಂತೆ ಜಾಲತಾಣಗಳಲ್ಲಿ ಹಾಕಿ ನೆರವಿಗಾಗಿ ಮನವಿ ಮಾಡಿದರು. ಅಲ್ಲದೆ ಮೂರು ಗ್ರಾಮಗಳಲ್ಲಿ ಆಂದೋಲನ ನಡೆಸಿ ಮಕ್ಕಳನ್ನು ಮರಳಿ ಸರ್ಕಾರಿ ಶಾಲೆಗೆ ಕರೆತರುವ ನಿರ್ಧಾರ ಕೈಗೊಂಡರು.

ಏನೇನು ಸೌಲಭ್ಯ: ಈ ಪ್ರಾಮಾಣಿಕ ಪ್ರಯತ್ನಕ್ಕೆ ಪ್ರತಿಫ‌ಲವೆಂಬಂತೆ ಇದೇ ಶಾಲೆಯಲ್ಲಿ ಓದಿ, ಬೆಂಗಳೂರಿನಲ್ಲಿದ್ದ ಬಾನಗಳ್ಳಿ ತಾರಾನಂದ ಅವರು ಬೆಂಗಳೂರಿನ “ಕನ್ನಡ ಮನಸ್ಸುಗಳು’ ತಂಡಕ್ಕೆ ವಿಷಯ ತಿಳಿಸಿದ್ದರು. ಕೂಡಲೇ ನೆರವಿಗೆ ಬಂದ ಅನುಷಾ, ಅಭಿ ಇತರರು ಈ ಶಾಲೆಯ ಸುಣ್ಣಬಣ್ಣದ ವೆಚ್ಚ ಭರಿಸಿದರು. ಬಳಿಕ ಶಾಲೆಗೆ ಶುಕ್ರದೆಸೆ ಆರಂಭವಾಯಿತು.

ದಾನಿ ಎಂಜಿನಿಯರ್‌ ಬಸವೇಗೌಡರು ಎಲ್ಲಾ 43 ಮಕ್ಕಳಿಗೂ ಎರಡು ಜೊತೆ ಸಮವಸ್ತ್ರ, ಶೂ, ನೋಟ್‌ಬುಕ್‌ ಮತ್ತಿತರ ಲೇಖನ ಸಾಮಗ್ರಿ ನೀಡಿದ್ದಾರೆ. ಮಾತ್ರವಲ್ಲ ಸರ್ಕಾರದಿಂದ ಇರುವ ಮೂವರು ಶಿಕ್ಷಕರೊಂದಿಗೆ ಇದೇ ಯುವಜನರ ತಂಡ ಮೂವರು ಶಿಕ್ಷಕರನ್ನು ನೇಮಕ ಮಾಡಿಕೊಂಡು ವೇತನ ಪಾವತಿಸುವ ಮೂಲಕ ಉತ್ತಮ ಶೈಕ್ಷಣಿಕ ವಾತಾವರಣ ಮೂಡಿಸಿದೆ. ಈ ಮೂಲಕ ಖಾಸಗಿ ಶಾಲೆಗಳತ್ತ ಪೋಷಕರು ತಿರುಗಿಯೂ ನೋಡದಂತೆ ಮಾಡಿರುವುದು ರಾಜ್ಯದಲ್ಲೇ ಮಾದರಿ ಪ್ರಯತ್ನವಾಗಿದೆ.

 

-ಅಣ್ಣೂರು ಸತೀಶ್‌

ಟಾಪ್ ನ್ಯೂಸ್

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.