2 ಗ್ರಾಮಸ್ಥರಿಂದ ಪರಸ್ಪರ ಬಡಿದಾಟ

ಸರ್ಕಾರಿ ಗೋಕಟ್ಟೆ  ಒತ್ತುವರಿ ವಿಚಾರಕ್ಕೆ  ಗಲಾಟೆ „ ಕಸಬಾ ಹೋಬಳಿಯ ಹೊನ್ನುಡಿಕೆಹಳ್ಳಿ  ಗ್ರಾಮದಲ್ಲಿ ಘಟನೆ

Team Udayavani, Oct 24, 2021, 6:37 PM IST

ಗ್ರಾಮಸ್ಥರು

ನಾಗಮಂಗಲ: ಸರ್ಕಾರಿ ಗೋಕಟ್ಟೆ ಒತ್ತುವರಿ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗ್ರಾಮದವರು ಪರಸ್ಪರ ದೊಣ್ಣೆಯಿಂದ ಬಡಿದಾಡಿಕೊಂಡಿರುವ ಘಟನೆ ತಾಲೂಕಿನ ಕಸಬಾ ಹೋಬಳಿಯ ಹೊನ್ನುಡಿಕೆಹಳ್ಳಿ ಗ್ರಾಮದಲ್ಲಿ ಸಂಭವಿಸಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಹೊನ್ನುಡಿಕೆ ಗ್ರಾಮಕ್ಕೆ ಹೊಂದಿಕೊಂಡಂತಿರುವ ಅರೆಹಳ್ಳಿ ಸರ್ವೆ ನಂ.5ರಲ್ಲಿ ಸರ್ಕಾರಿ ಗೋಕಟ್ಟೆಯಿದ್ದು, ಅರೆಹಳ್ಳಿ ಗ್ರಾಮದ ಕೆಲ ಪ್ರಭಾವಿಗಳು ಈ ಗೋಕಟ್ಟೆಯನ್ನು ಒತ್ತುವರಿ ಮಾಡಿಕೊಂಡಿದ್ದಾರೆಂಬ ಆರೋಪವಿದ್ದು, ಹಿಟಾಚಿ ಯಂತ್ರ ಮತ್ತು ಟ್ರ್ಯಾಕ್ಟರ್‌ ಬಳಸಿ ಮುಚ್ಚುವ ಕೆಲಸ ಮಾಡಿದ್ದಾರೆ. ಈ ವೇಳೆ ಇದನ್ನು ತಡೆಯಲು ಮುಂದಾದ ಹೊನ್ನುಡಿಕೆಹಳ್ಳಿ ಗ್ರಾಮಸ್ಥರ ನಡುವೆ ಗಲಾಟೆ ನಡೆದಿದೆ ಎನ್ನಲಾಗಿದೆ.

 ಮಾತಿನ ಚಕಮಕಿ: ಜಾನುವಾರುಗಳ ಅನುಕೂಲ ಕ್ಕಾಗಿ ಇರುವ ಸರ್ಕಾರಿ ಗೋಕಟ್ಟೆಯನ್ನು ಅರೆಹಳ್ಳಿಯ ಕೆಲ ಮಂದಿ ಪ್ರಭಾವಿಗಳು ಒತ್ತುವರಿ ಮಾಡಿ ಮುಚ್ಚಿರುವುದಲ್ಲದೇ ಈ ಜಾಗವನ್ನು ಉಳುಮೆ ಮಾಡಲು ಮುಂದಾಗಿರುವುದನ್ನು ವಿರೋಧಿಸಿದ್ದರಿಂದ ಒತ್ತುವರಿದಾರರು ಮತ್ತು ಹೊನ್ನುಡಿಕೆಹಳ್ಳಿ ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆದು ಕೈ ಕೈ ಮಿಲಾಯಿಸುವ ಹಂತ ತಲುಪಿ ತಳ್ಳಾಟ ನೂಕಾಟದ ನಂತರ ಒಬ್ಬರಿ ಗೊಬ್ಬರು ದೊಣ್ಣೆಯಿಂದ ಬಡಿದಾಡಿಕೊಂಡಿದ್ದಾರೆ.

ದೂರು ದಾಖಲಾಗಿಲ್ಲ: ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಬಿಂಡಿಗನವಿಲೆ ಪೊಲೀಸ್‌ ಠಾಣೆ ಪಿಎಸ್‌ಐ ಪ್ರಕಾಶ್‌ಯತ್ತಿನಮನೆ, ಎರಡೂ ಬಣಗಳ ನಡುವೆ ಮಾತುಕತೆ ನಡೆಸಿ, ವಿವಾದಿತ ಜಾಗಕ್ಕೆ ಸಂಬಂಧಿಸಿದ ದಾಖಲೆಗಳೊಂದಿಗೆ ತಹಶೀಲ್ದಾರ್‌ ಮೂಲಕ ಸೌಹಾರ್ದತೆಯಿಂದ ಸಮಸ್ಯೆಯನ್ನು ಇತ್ಯರ್ಥಪಡಿಸಿಕೊಂಡು ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ತಿಳಿಸಿ ಹೋಗಿದ್ದಾರೆ. ಆದರೆ ಈ ಘಟನೆ ಸಂಬಂಧ ಪೊಲೀಸ್‌ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ.

ಇದನ್ನೂ ಓದಿ:- ನಿಖಿಲಣ್ಣ ಶಾಸಕರಾಗುವುದು ಬೇಡ, ಸುಮಲತಾ ವಿರುದ್ಧ ಗೆಲ್ಲಲೇಬೇಕು

 ಸರ್ಕಾರಿ ಗೋಕಟ್ಟೆ ಉಳಿಸುವಂತೆ ಮನವಿ: ಅರೆ ಹಳ್ಳಿ ಸರ್ವೆ ನಂ.5ರಲ್ಲಿರುವ ಸರ್ಕಾರಿ ಗೋಕಟ್ಟೆಯು ಹೊನ್ನುಡಿಕೆಹಳ್ಳಿಗೆ ಹೊಂದಿಕೊಂಡಿದ್ದು, ಎರಡೂ ಗ್ರಾಮಗಳ ಜಾನುವಾರುಗಳಿಗೆ ಅನುಕೂಲವಾಗ ಲಿದೆ. ಆದರೆ ಈ ಕಟ್ಟೆಯನ್ನು ಅರೆಹಳ್ಳಿ ಗ್ರಾಮದ ಕೆಲ ಪ್ರಭಾವಿಗಳು ಒತ್ತುವರಿ ಮಾಡಿಕೊಂಡಿರು ವುದರಿಂದ ಜನ ಜಾನುವಾರುಗಳಿಗೆ ತೊಂದರೆ ಯಾಗಲಿದ್ದು, ಈ ಸರ್ಕಾರಿ ಗೋಕಟ್ಟೆಯನ್ನು ಉಳಿಸಿ ಕೊಡುವಂತೆ ಹೊನ್ನುಡಿಕೆಹಳ್ಳಿ ಗ್ರಾಮಸ್ಥರು ತಹಶೀಲ್ದಾರ್‌ ಅವರಿಗೆ ಮನವಿ ನೀಡಿದ್ದಾರೆ.

ಸರ್ಕಾರಿ ಗೋಕಟ್ಟೆಯನ್ನು ಅರೆಹಳ್ಳಿ ಗ್ರಾಮದ ಎಂಟುಮಂದಿ ಒತ್ತುವರಿ ಮಾಡಿಕೊಂಡಿದ್ದಾರೆಂಬ ವಿಚಾರಕ್ಕೆ ಸಂಬಂಧಿಸಿದಂತೆ ಹೊನ್ನುಡಿಕೆಹಳ್ಳಿ ಗ್ರಾಮಸ್ಥರು ನೀಡಿರುವ ಮನವಿ ಮೇರೆಗೆ ಅ.25ರ ಸೋಮವಾರ ಸರ್ವೆ ಇಲಾಖೆ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಖುದ್ದು ಭೇಟಿ ಕೊಟ್ಟು ಪರಿಶೀಲಿಸಿ ಆ ಜಾಗವನ್ನು ಅಳತೆ ಮಾಡಿಸಲಾಗುವುದು. ಭೂದಾಖಲೆಗಳ ಪ್ರಕಾರ ಒತ್ತುವರಿಯಾಗಿರುವ ಜಾಗ ಸರ್ಕಾರಿ ಗೋಕಟ್ಟೆಯಾಗಿದ್ದರೆ ಒತ್ತುವರಿ ತೆರವುಗೊಳಿಸಲು ಅಗತ್ಯ ಕ್ರಮ ವಹಿಸಲಾಗುವುದು.                       – ಕುಂಞ ಅಹಮ್ಮದ್‌, ನಾಗಮಂಗಲ ತಹಶೀಲ್ದಾರ್‌

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.