ಮಂಡ್ಯ : ಲಾರಿ – ಕಾರು ನಡುವೆ ಭೀಕರ ಅಪಘಾತ : ಮೂವರು ಸ್ಥಳದಲ್ಲೇ ಸಾವು, ಓರ್ವ ಗಂಭೀರ
Team Udayavani, Jun 25, 2022, 11:20 PM IST
ಮಂಡ್ಯ: ಲಾರಿ ಮತ್ತು ಕಾರು ನಡುವೆ ಮುಖಾಮುಖಿ ಢಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಾಗಮಂಗಲ ಪಟ್ಟಣದ ಹೊರವಲಯ ಚಾಮರಾಜನಗರ-ಜೀವರ್ಗಿ ರಾಷ್ಟ್ರೀಯ ಹೆದ್ದಾರಿ ಎಂ.ಹೊಸೂರು ಗೇಟ್ ಸಮೀಪ ಶನಿವಾರ ರಾತ್ರಿ 8;30 ರಲ್ಲಿ ನಾಗಮಂಗಲ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ನಾಗಮಂಗಲ ತಾಲೂಕಿನ ಬಿರೇಶ್ವರಪುರದ ದೇವರಾಜು, ಪಾಂಡವಪುರ ತಾಲೂಕಿನ ವದೆಸಮುದ್ರ ಗ್ರಾಮದ ಮಂಜುನಾಥ್ ಹಾಗೂ ವಿಳಾಸ ಪತ್ತೆಯಾಗದ ಮತ್ತೊಬ್ಬ ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಪಾಂಡವಪುರ ತಾಲೂಕಿನ ಎಲೆಕೆರೆ ಗ್ರಾಮದ ಸ್ವಾಮಿ ಎಂಬಾತನೇ ತೀವ್ರ ಗಾಯಗೊಂಡಿರುವ ಗಾಯಾಳಾಗಿದ್ದಾನೆ. ಪಾಂಡವಪುರ ತಾಲೂಕಿನ ಕೆನ್ನಾಳು ವೃತ್ತದ ಗ್ರಾಮ ಲೆಕ್ಕಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ದೇವರಾಜು ಹಾಗೂ ಕನಗನಮರಡಿ ವೃತ್ತದ ಗ್ರಾಮ ಸಹಾಯಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಜುನಾಥ್ ಸೇರಿದಂತೆ ಮತ್ತೊಬ್ಬ ರೈತ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ : ಉಳ್ಳಾಲ : ರಸ್ತೆ ಅಪಘಾತದಿಂದ ಏಳು ತಿಂಗಳು ಕೋಮಾದಲ್ಲಿದ್ದ ಯುವತಿ ಸಾವು
ಗಾಯಾಳು ಸ್ವಾಮಿ ಪಾಂಡವಪುರ ತಾಲೂಕಿನ ದಾಮರಹಳ್ಳಿ ವೃತ್ತದ ಗ್ರಾಮ ಸಹಾಯಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾನೆ. ಮೃತ ದೇವರಾಜು ತಮ್ಮ ಜಮೀನಿನ ಕೆಲಸಕ್ಕಾಗಿ ಇಬ್ಬರು ಗ್ರಾಮ ಸಹಾಯಕರು ಹಾಗೂ ಒಬ್ಬ ರೈತ ಕಾರ್ಮಿಕನನ್ನು ಕರೆತಂದು ಪಾಂಡವಪುರಕ್ಕೆ ವಾಪಸ್ಸಾಗುವಾಗ ಈ ದುರ್ಘಟನೆ ನಡೆದಿದೆ.
ಮೈಸೂರು ಕಡೆಯಿಂದ ಬೆಳಗಾಂ ಕಡೆಗೆ ಸಂಚರಿಸುತ್ತಿದ್ದ ಲಾರಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ.
ಸ್ಥಳದಲ್ಲೇ ಮೃತಪಟ್ಟ ಮೂವರ ಶವಗಳನ್ನು ನಾಗಮಂಗಲ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳು ಸ್ವಾಮಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಬಿ.ಜಿ.ನಗರದ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ನಾಗಮಂಗಲ ಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ