ನಾಳೆ ಕೋಟೆ ಮುಂಬಾಗಿಲು ರಸ್ತೆ ಬದಿ ಅಂಗಡಿಗಳ ತೆರವು

ಕೋಟೆ ಬಾಗಿಲಿನಿಂದ ಹೆದ್ದಾರಿಯವರೆಗೆ ರಸ್ತೆ ಅಗಲೀಕರಣ ಕಾಮಗಾರಿ, ಪುರಸಭಾ ಅಧಿಕಾರಿಗಳಿಂದ ವ್ಯಾಪಾರಸ್ಥರಿಗೆ ಕೊನೆಯ ಎಚ್ಚರಿಕೆ

Team Udayavani, Sep 4, 2019, 11:51 AM IST

mandya-tdy-2

ಶ್ರೀರಂಗಪಟ್ಟಣದ ಕೋಟೆ ಮುಂಬಾಗಿಲು ರಸ್ತೆ ಬದಿ ವ್ಯಾಪಾರಿಗಳ ಅಂಗಡಿ ತೆರವು ಮಾಡಲು ಪುರಸಭಾ ಅಧಿಕಾರಿಗಳು ಮೌಖೀಕವಾಗಿ ವ್ಯಾಪಾರಸ್ಥರಿಗೆ ಸೂಚಿಸುವುದು.

ಶ್ರೀರಂಗಪಟ್ಟಣ: ಪಟ್ಟಣದ ಮೈಸೂರು -ಬೆಂಗಳೂರು ಹೆದ್ದಾರಿಯಿಂದ ಕೋಟೆ ಹೆಬ್ಟಾಗಿಲು ರಸ್ತೆಯ ಎರಡು ಬದಿ ಅಂಗಡಿಗಳ ತೆರವುಗೊಳಿಸಲು ಆದೇಶ ಬಂದಿದ್ದು ವ್ಯಾಪಾರಸ್ಥರು ಗುರುವಾರದೊಳಗೆ ತಮ್ಮ ತಮ್ಮ ಅಂಗಡಿಗಳನ್ನು ತೆರವುಗೊಳಿಸಬೇಕು ಎಂದು ಪಟ್ಟಣ ಪುರಸಭಾ ಮುಖ್ಯಾಧಿಕಾರಿ ಕೃಷ್ಣ ತಿಳಿಸಿದರು.

ವ್ಯಾಪಾರಸ್ಥರಿಗೆ ಮನವಿ: ಈ ಬಾರಿಯ ದಸರೆಯೊಳಗೆ ಕೋಟೆ ಬಾಗಿಲಿನಿಂದ ಹೆದ್ದಾರಿಯವರೆಗೆ ಅಂಗಡಿಗಳ ತೆರವುಗೊಳಿಸಿ ರಸ್ತೆ ಕಾಮಗಾರಿ ನಡೆಸಲು ಒಂದು ಕೋಟಿ ರೂ. ಹಣ ಬಿಡುಗಡೆಯಾಗಿದ್ದು ಕಾಮಗಾರಿ ನಡೆಸಲು ವ್ಯಾಪಾರಸ್ಥರು ಸ್ಥಳ ಬಿಟ್ಟುಕೊಡಲು ಅಂಗಡಿ ಮುಂಗ್ಗಟ್ಟುಗಳ ಮುಂದೆ ವ್ಯಾಪಾರಸ್ಥರಿಗೆ ಮನವಿ ಮಾಡಿದರು.

ಸ್ಥಳ ಪರಿಶೀಲನೆ: ಪಟ್ಟಣವನ್ನು ಪ್ರವಾಸೋದ್ಯಮ ನಗರವನ್ನಾಗಿಸಲು ಸರ್ಕಾರದಿಂದ ಈಗಾಗಲೇ ಹಣ ಬಿಡುಗಡೆಯಾಗಿದ್ದು ರಸ್ತೆ ಅಗಲೀಕರಣ ನಡೆಸಿ ರಸ್ತೆ ಚರಂಡಿ, ನಿರ್ಮಿಸಿ, ಸಾಲು ವಿದ್ಯುತ್‌ ದೀಪ ಅಳವಡಿಸಿ ಕೋಟೆ ಬಾಗಿಲು ನೇರವಾಗಿ ಹೆಬ್ಟಾಗಿಲಿನಂತೆ ಕಾಣಲು ಕಾಮಗಾರಿ ನಡೆಸುವಂತೆ ಆದೇಶ ಮಾಡಿದ್ದರಿಂದ ತ್ವರಿತವಾಗಿ ಲೋಕೋಪ ಯೋಗಿ ಇಲಾಖೆ ಎಇಇ ಮಹೇಶ್‌ ಹಾಗೂ ಇತರೆ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು.

ಮೌಖೀಕವಾಗಿ ತಿಳಿಸಲಾಗಿದೆ: ವ್ಯಾಪಾರಸ್ಥರನ್ನು ಕುರಿತು , ಪಟ್ಟಣದ ಪಾರಂಪರಿಕ ಯೋಜನೆಗಳಿಗೆ ಕೋಟೆ ಮುಂಭಾಗದಲ್ಲಿ ಇಟ್ಟಿರುವ ಅಂಗಡಿಗಳು ಧಕ್ಕೆಯಾಗುತ್ತಿವೆ. ಇಲ್ಲಿವರೆಗೂ ಸ್ಥಳ ಬಿಟ್ಟುಕೊಡಲು

ವ್ಯಾಪಾರಸ್ಥರಿಗೆ ಮೌಖೀಕವಾಗಿ ಸಿಬ್ಬಂದಿಗಳಿಂದ ತಿಳಿಸಲಾಗಿದೆ. ಆದರೂ, ಸ್ಥಳ ಬಿಟ್ಟುಕೊಡಲು ಒಪ್ಪದ ಕಾರಣ ಹೆದ್ದಾರಿಯಿಂದ ಕೋಟೆ ಬಾಗಿಲುವರೆಗೂ ಇಟ್ಟಿರುವ ಅಂಗಡಿಗಳನ್ನು ಗುರುವಾರ ಪುರಸಭಾ ಸಿಬ್ಬಂದಿಗಳೊಂದಿಗೆ ಅಂಗಡಿ ತೆರವು ಕಾರ್ಯ ನಡೆಸಲಾಗುತ್ತದೆ ಎಂದು ಮುಖ್ಯಾಧಿಕಾರಿ ಕೃಷ್ಣ ‘ಉದಯವಾಣಿ’ಗೆ ತಿಳಿಸಿದರು.

13 ಕೋಟಿ ರೂ.ವಿಶೇಷ ಅನುದಾನ: ಪಟ್ಟಣವನ್ನು ಪ್ರವಾಸೋದ್ಯಮ ನಗರವನ್ನಾಗಿ ಮಾಡಲು ಸರ್ಕಾರ ದಸರಾ ವಿಶೇಷವಾಗಿ 2018-19ನೇ ಸಾಲಿನಲ್ಲಿ 13 ಕೋಟಿ ರೂ.ಹಣ ಬಿಡುಗಡೆ ಗೊಳಿಸಿದೆ. ಕಾರಣಾಂತರದಿಂದ ಕಾಮಗಾರಿಗೆ ಚಾಲನೆ ದೊರೆತಿಲ್ಲ.

ಈಗ ಪ್ರಸ್ತುತ ಚಾಲನೆ ನೀಡಲು ಸರ್ಕಾರ ಮುಂದಾಗಿದ್ದು ಪಟ್ಟಣದ ನೀಲಿ ನಕ್ಷೆಯೊಂದಿಗೆ ಸಿದ್ಧತಾ ವರದಿ ತಯಾರಿ ನಡೆದಿದೆ. ಪಟ್ಟಣದ ಮುಖ್ಯ ರಸ್ತೆ, ಪಟ್ಟಣದ ಸುತ್ತಲ ರಾಂಪಾಲ್ ರಸ್ತೆ, ದಸರಾ ಬನ್ನಿ ಮಂಟಪದ ಬಳಿ ರಂಗಮಂದಿರ , ಪಟ್ಟಣ ಸ್ವಚ್ಛತೆಗೆ ಅಗತ್ಯ ಸೌಕರ್ಯ, ಇವೆಲ್ಲದರ ಜೊತೆಯಲ್ಲಿ ಬೃಹತ್‌ಕಾರದ ವಿದ್ಯುತ್‌ ದೀಪ ಸೇರಿ ಮೂಲ ಭೂತ ಸೌಕರ್ಯ ಅಳವಡಿಸಲು ಈಗಾಗಲೇ ಸಿದ್ಧತೆಯಲ್ಲಿದ್ದು ಕಾಮಗಾರಿಗೆ ಚಾಲನೆ ಸದ್ಯದಲ್ಲಿ ದೊರೆಯುತ್ತಿದೆ ಎಂದು ಲೋಕೋಪಯೋಗಿ ಇಲಾಖೆ ಎಇಇ ಮಹೇಶ್‌ ತಿಳಿಸಿದರು. ಈ ಸಂದರ್ಭದಲ್ಲಿ ಎಇ ರೇವಣ್ಣ, ಪುರಸಭಾ ಅಧಿಕಾರಿಗಳಾದ ಸೋಮಶೇಖರ್‌, ಶಿವಶಂಕರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.