ಮೋದಿ ರೋಡ್‌ ಶೋಗಾಗಿ ಮರದ ಕೊಂಬೆ ಕಟಾವು


Team Udayavani, Mar 9, 2023, 3:29 PM IST

tdy-22

ಮಂಡ್ಯ: ಮಾ.12ರಂದು ಪ್ರಧಾನಿ ಮೋದಿ ಜಿಲ್ಲೆಗೆ ಆಗಮಿಸುತ್ತಿದ್ದು, ರೋಡ್‌ ಶೋ ಹಿನ್ನೆಲೆಯಲ್ಲಿ ನಗರದ ಬೆಂಗಳೂರು -ಮೈಸೂರು ಹೆದ್ದಾರಿ ಇಕ್ಕೆಲಗಳಲ್ಲಿದ್ದ ಬೃಹತ್‌ ಮರಗಳ ಕೊಂಬೆಗಳನ್ನು ಅರಣ್ಯ ಇಲಾಖೆ ಕತ್ತರಿಸಿರಿವುದರಿಂದ ಸಾರ್ವಜನಿಕರು ಹಾಗೂ ಪರಿಸರವಾದಿಗಳಿಂದ ಆಕ್ರೋಶ ವ್ಯಕ್ತವಾಗಿದೆ.

ನಗರದ ಪಿಇಟಿ ಕ್ರೀಡಾಂಗಣದ ಹೆಲಿ ಪ್ಯಾಡ್‌ಗೆ ಬಂದಿಳಿಯುವ ಮೋದಿ, ಅಲ್ಲಿಂದ ಕಾರಿನ ಮೂಲಕ ಪ್ರವಾಸಿ ಮಂದಿರದ ವೃತ್ತದವರೆಗೆ ಬಂದು, ನಂತರ ನಂದ ವೃತ್ತದವರೆಗೂ ರೋಡ್‌ ಶೋ ನಡೆಸಲಿದ್ದಾರೆ. ಆದರೆ, ರೋಡ್‌ ಶೋ ನಡೆಯುವ 1.5 ಕಿ.ಮೀ ಉದ್ದದವರೆಗೂ ಹೆದ್ದಾರಿ ಇಕ್ಕೆಲಗಳಲ್ಲಿ ಇರುವ ಮರಗಳ ಕೊಂಬೆಗಳನ್ನು ಕಡಿದು ಹಾಕಿದ್ದಾರೆ.

ಮರ ಕತ್ತರಿಸಿರುವುದು ಎಷ್ಟು ಸರಿ: ಹೆದ್ದಾರಿಗೆ ಬಾಗುವ ಕೊಂಬೆಗಳನ್ನು ಮಾತ್ರ ಕಡಿದಿ ರುವುದರಿಂದ ಮತ್ತೂಂದು ಭಾಗದ ಮೇಲೆ ಮರದ ಭಾರ ಬಿದ್ದು, ಮಳೆಗಾಲದಲ್ಲಿ ಬಿರುಗಾಳಿಗೆ ಬೀಳುವ ಸ್ಥಿತಿಗೆ ತಲುಪಿವೆ. ಇದು ಅಕ್ಕಪಕ್ಕದ ಕಟ್ಟಡ ಮಾಲೀಕರಿಗೆ ಆತಂಕ ತಂದೊಡ್ಡಿದೆ. ಪರಿಸರ ಉಳಿಸಿ, ಜಾಗತಿಕ ತಾಪಮಾನ ಕಡಿಮೆ ಮಾಡಲು ಮರಗಿಡಗಳನ್ನು ಬೆಳೆಸಿ ಎನ್ನುವ ಪ್ರಧಾನಿ ಮೋದಿ ಅವರು, ತಮ್ಮ ರೋಡ್‌ ಶೋಗಾಗಿ ಮರಗಳನ್ನು ಕತ್ತರಿಸಿರುವುದು ಎಷ್ಟು ಸರಿ ಎಂಬ ಪ್ರಶ್ನೆಗಳು ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿವೆ.

ಪರಿಸರ ನಾಶ ಸರಿಯಲ್ಲ: ಮರಗಳ ಕೊಂಬೆಗಳನ್ನು ಕತ್ತರಿಸಿರುವುದರಿಂದ ಮಂಡ್ಯ ನಗರದ ಚಿತ್ರಣವೇ ಬದಲಾಗಿದೆ. ಹೆದ್ದಾರಿ ಸಂಪೂರ್ಣ ಹಸಿರುಮಯವಾಗಿತ್ತು. ಆದರೆ, ಈಗ ಸಂಪೂರ್ಣ ಬೋಳಾದಂತೆ ಕಂಡು ಬರುತ್ತಿದೆ. ಮೋದಿ ಅವರ ರೋಡ್‌ ಶೋ ಯಶಸ್ವಿಗೊಳಿಸಲು ಸರ್ಕಾರ ಈ ರೀತಿಯ ಪರಿಸರ ನಾಶ ಮಾಡಲು ಮುಂದಾಗಿರುವುದು ಸರಿಯಲ್ಲ ಎಂದು ಪರಿಸರವಾದಿಗಳು ಕಿಡಿಕಾರಿದ್ದಾರೆ.

ಇತ್ತೀಚೆಗೆ ಒಣಗಿದ ಮರದ ಕೊಂಬೆಯೊಂದು ಬಿದ್ದು ಪೌರ ಕಾರ್ಮಿಕನೊಬ್ಬ ಮೃತಪಟ್ಟಿದ್ದನು. ಇದರಿಂದ ಆತನ ಪತ್ನಿ, ಮಗು ಅನಾಥವಾಗಿದೆ. ಅಪಾಯದಲ್ಲಿರುವ ಒಣಗಿದ ಕೊಂಬೆಗಳನ್ನು ಕತ್ತರಿಸಲು ಮುಂದಾ ಗದ ಸರ್ಕಾರ, ಅರಣ್ಯ ಇಲಾಖೆ ಅಧಿಕಾರಿಗಳು ಚುನಾವಣೆ ರೋಡ್‌ ಶೋಗಾಗಿ ಚೆನ್ನಾಗಿರುವ ಮರದ ಕೊಂಬೆಗಳನ್ನು ಕತ್ತರಿಸಿರುವುದು ಎಷ್ಟು ಸರಿ?. ಪಾದಚಾರಿಗಳು, ಬೀದಿಬದಿ ವ್ಯಾಪಾರಿಗಳಿಗೆ ನೆರಳು ನೀಡುತ್ತಿದ್ದ ಮರಗಳ ಕೊಂಬೆಗಳನ್ನು ಕಡಿದಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಪಾಯದಲ್ಲಿರುವ ಒಣಗಿದ ಕೊಂಬೆಗಳನ್ನು ಕತ್ತರಿಸುವುದಕ್ಕೆ ನಮಗೆ ಅಭ್ಯಂತರವಿಲ್ಲ. ಆದರೆ, ಮೋದಿ ಬರುತ್ತಿರುವ ಹಿನ್ನೆಲೆ ರೋಡ್‌ ಶೋ ಯಶಸ್ವಿಗೊಳಿಸಲು ಹಸಿರುಮ ಯವಾಗಿದ್ದ ಮಂಡ್ಯ ನಗರವನ್ನು ಹಾಳು ಮಾಡಿದ್ದು ಸರಿಯಲ್ಲ. – ಎಂ.ಬಿ.ನಾಗಣ್ಣಗೌಡ, ಗೌರವಾಧ್ಯಕ್ಷ, ಕರುನಾಡು ಸೇವಕರು

ಸಂಘಟನೆ ಮರಗಳ ಕೊಂಬೆಗಳನ್ನು ಬೇಕಾಬಿಟ್ಟಿಯಾಗಿ ಕತ್ತರಿಸಿರು ವುದು ಸರಿಯಲ್ಲ. ಈ ಮರಗಳು ನಗರದ ಸೌಂದರ್ಯ ಹೆಚ್ಚಿಸಿದ್ದವು. ಅಲ್ಲದೆ, ಪಾದಚಾರಿಗಳಿಗೆ ನೆರಳು ನೀಡುತ್ತಿದ್ದವು. ಇಂತಹ ಮರಗಳನ್ನು ಅರ್ಧಂಬರ್ಧ ಕತ್ತರಿಸಿ ಹಾಕಿರುವುದು ಸರಿಯಲ್ಲ. – ಪ್ರೊ.ಜಿ.ಟಿ.ವೀರಪ್ಪ, ಮಾಜಿ ಅಧ್ಯಕ್ಷರು, ಕಸಾಪ

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.