ಹನಿಟ್ರ್ಯಾಪ್‌: 50 ಲಕ್ಷ‌ ರೂ. ಕಳಕೊಂಡ ಉದ್ಯಮಿ: ಓರ್ವ ಆರೋಪಿ, ಕಾಂಗ್ರೆಸ್‌ ನಾಯಕಿಯ ಬಂಧನ


Team Udayavani, Aug 22, 2022, 6:25 AM IST

ಹನಿಟ್ರ್ಯಾಪ್‌: 50 ಲಕ್ಷ‌ ರೂ. ಕಳಕೊಂಡ ಉದ್ಯಮಿ: ಓರ್ವ ಆರೋಪಿ, ಕಾಂಗ್ರೆಸ್‌ ನಾಯಕಿಯ ಬಂಧನ

ಮಂಡ್ಯ: ಲಾಡ್ಜ್ ನಲ್ಲಿ ಯುವತಿಯ ಜತೆಗಿದ್ದ ವೀಡಿಯೋವನ್ನು ಚಿತ್ರೀಕರಿಸಿಕೊಂಡು ಉದ್ಯಮಿಯಿಂದ ಸುಮಾರು 50 ಲಕ್ಷ ರೂ. ಪಡೆದಿರುವ ಆರೋಪದಲ್ಲಿ ಮಹಿಳೆಯೊಬ್ಬರನ್ನು ನಗರದ ಪೊಲೀಸರು ಬಂಧಿಸಿದ್ದಾರೆ.

ನಗರದ ವಿವಿ ರಸ್ತೆಯಲ್ಲಿರುವ ಶ್ರೀನಿಗೋಲ್ಡ್‌ನ ಮಾಲಕ ಹಾಗೂ ಬಿಜೆಪಿ ವ್ಯಾಪಾರಿ ಪ್ರಕೋಷ್ಠದ ಜಿಲ್ಲಾ ಸಂಚಾಲಕ ಜಗನ್ನಾಥ್‌ ಎಸ್‌. ಶೆಟ್ಟಿ ವಂಚನೆಗೆ ಒಳಗಾದವರು. ಮಂಡ್ಯದ ಸುಭಾಷ್‌ ನಗರದ 8ನೇ ಕ್ರಾಸ್‌ ನಿವಾಸಿ ಸಲ್ಮಾಬಾನು ಹಾಗೂ ಜಯಂತ್‌ ಆರೋಪಿಗಳಾಗಿದ್ದಾರೆ. ಪೊಲೀಸರು ಸಲ್ಮಾ ಬಾನುಳನ್ನು 10 ದಿನಗಳ ಕಾಲ ಕಸ್ಟಡಿಗೆ ಪಡೆದುಕೊಂಡಿದ್ದಾರೆ.

ಪ್ರಕರಣದ ವಿವರ
2022ರ ಫೆ. 26ರಂದು ರಾತ್ರಿ 10.45ರ ಸುಮಾ ರಿಗೆ ಮೈಸೂರಿಗೆ ತೆರಳಲು ಮಂಡ್ಯದ ಸಾರಿಗೆ ಬಸ್‌ ನಿಲ್ದಾಣದಲ್ಲಿ ಜಗನ್ನಾಥ್‌ ಎಸ್‌. ಶೆಟ್ಟಿ ನಿಂತಿದ್ದಾಗ ಆರೋಪಿಗಳಾದ ಸಲ್ಮಾಬಾನು ಹಾಗೂ ಜಯಂತ್‌ ಸೇರಿ ಇತರರು ಕಾರಿನಲ್ಲಿ ಬಂದು ಪರಿಚಯ ಮಾಡಿಕೊಂಡು ತಾವು ಮೈಸೂರಿಗೆ ತೆರಳುತ್ತಿದ್ದು, ಬನ್ನಿ ಎಂದು ಹತ್ತಿಸಿಕೊಂಡಿದ್ದಾರೆ.

ಅನಂತರ ನಮ್ಮ ಸ್ನೇಹಿತ ಮೈಸೂರಿನ ದರ್ಶನ್‌ ಲಾಡ್ಜ್ ನಲ್ಲಿ ಚಿನ್ನದ ಬಿಸ್ಕೆಟ್‌ ತಂದಿದ್ದಾನೆ. ಅದನ್ನು ಪರೀಕ್ಷಿಸಿ ಅಸಲಿಯೇ, ನಕಲಿಯೇ ಎಂದು ತಿಳಿದು ಹೇಳಿ ಎಂದು ತಿಳಿಸಿದ್ದಾರೆ.

ನಾನು ಮಂಗಳೂರಿಗೆ ಹೋಗಬೇಕು. ಸಮಯ ಇಲ್ಲ ಎಂದಾಗ, 5 ನಿಮಿಷ ಬನ್ನಿ ಎಂದು ದರ್ಶನ್‌ ಲಾಡ್ಜ್ಗೆ ಕರೆದೊಯ್ದರು. ರೂಮಿಗೆ ಬಂದ ಬಳಿಕ ಆರೋಪಿಗಳು ನಾಪತ್ತೆಯಾಗಿದ್ದರು. ಸ್ವಲ್ಪ ಹೊತ್ತಿನಲ್ಲಿ ರೂಮಿಗೆ 22ರಿಂದ 25 ವರ್ಷದ ಯುವತಿ ಬಂದಿದ್ದಳು. ಕೆಲವೇ ನಿಮಿಷಗಳಲ್ಲಿ ಸಲ್ಮಾಬಾನು, ಜಯಂತ್‌ ಹಾಗೂ ಇತರರು ಬಂದು, ನೀನು ಯುವತಿಯೊಂದಿಗೆ ಇರುವ ವೀಡಿಯೋ ಚಿತ್ರೀಕರಿಸಿಕೊಂಡಿದ್ದೇವೆ. ನಮಗೆ 4 ಕೋಟಿ ರೂ. ನೀಡಬೇಕು ಎಂದು ಹೇಳಿ ಹಲ್ಲೆ ನಡೆಸಿದರು. ಅನಂತರ ನಾನು 50 ಲಕ್ಷ ರೂ. ಕೊಡುವುದಾಗಿ ಒಪ್ಪಿಕೊಂಡು ಮಾರನೇ ದಿನ ಬೆಳಗ್ಗೆ 10 ಗಂಟೆಗೆ 25 ಲಕ್ಷ ರೂ. ಕೊಟ್ಟಿದ್ದೇನೆ. ಬಳಿಕ ಇದುವರೆಗೂ ಒಟ್ಟು 50 ಲಕ್ಷ ರೂ.ಗಳನ್ನು ಪಡೆದುಕೊಂಡಿದ್ದಾರೆ. ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟ ಕಾರಣ ದೂರು ನೀಡಿದ್ದೇನೆಂದು ಜಗನ್ನಾಥ್‌ ತಿಳಿಸಿದ್ದಾರೆ.

ಆರೋಪಿಗಳು ಕುಖ್ಯಾತರು
ಸಲ್ಮಾಬಾನು, ಜಯಂತ್‌ ಸಹಿತ ಇತರ ಆರೋಪಿಗಳು ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ದ್ದಾರೆ ಎಂದು ತಿಳಿದು ಬಂದಿದೆ. ಸಲ್ಮಾಬಾನು ಕಾಂಗ್ರೆಸ್‌ ಮುಖಂಡೆ ಎಂದು ತಿಳಿದು ಬಂದಿದೆ.

 

ಟಾಪ್ ನ್ಯೂಸ್

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.