ಸಿಬ್ಬಂದಿ ಇಲ್ಲದೆ ಆರ್‌ಟಿಒ ಕಚೇರಿ ಖಾಲಿ ಖಾಲಿ!


Team Udayavani, Sep 7, 2019, 12:12 PM IST

mandya-tdy-1

ಮಂಡ್ಯದ ಪ್ರಾದೇಶಿಕ ಸಾರಿಗೆ ಇಲಾಖೆ ಕಚೇರಿ.

ಮಂಡ್ಯ: ಇಲ್ಲಿನ ಪ್ರಾದೇಶಿಕ ಸಾರಿಗೆ ಅಧಿಕಾರಿ ಕಚೇರಿಯೊಳಗೆ ಕಾಲಿಟ್ಟರೆ ಸಾಕು ಖಾಲಿ ಕುರ್ಚಿಗಳದ್ದೇ ದರ್ಶನ. ಕಚೇರಿ ಕೆಲಸದಲ್ಲಿ ತೊಡಗಿರುವವರು ಅಲ್ಲೊಬ್ಬರು, ಇಲ್ಲೊಬ್ಬರು ಮಾತ್ರ ಸಿಗುತ್ತಾರೆ. ವರ್ಷದಿಂದ ಹುದ್ದೆಗಳು ಖಾಲಿಯಾಗುತ್ತಿವೆಯೇ ವಿನಃ ತೆರವಾದ ಹುದ್ದೆಗಳೆಲ್ಲವೂ ಭರ್ತಿಯಾಗದೆ ಹಾಗೆಯೇ ಉಳಿದಿವೆ. ಹೇಳ್ಳೋರಿಲ್ಲ.. ಕೇಳ್ಳೋರಿಲ್ಲ ಎನ್ನುವ ಪರಿಸ್ಥಿತಿ ಆರ್‌ಟಿಒ ಕಚೇರಿಯದ್ದಾಗಿದೆ.

ಆರ್‌ಟಿಒ ಕಚೇರಿಯಲ್ಲಿ ಒಟ್ಟು 31 ಹುದ್ದೆಗಳಿವೆ ಅದರಲ್ಲಿ ಅರ್ಧದಷ್ಟು ಹುದ್ದೆಗಳು ಖಾಲಿ ಇವೆ. ಇದರಲ್ಲೂ ಕೆಲವರಿಗೆ ಪ್ರಮೋಷನ್‌ ಆಗಿದೆ. ಒಬ್ಬರು ನಿವೃತ್ತರಾಗಿದ್ದಾರೆ. ಮತ್ತೂಬ್ಬರಿಗೆ ಅಪಘಾತವಾಗಿ ದೀರ್ಘ‌ಕಾಲದ ರಜೆ ಮೇಲೆ ತೆರಳಿದ್ದಾರೆ. ಇನ್ನೊಬ್ಬರು ನಿವೃತ್ತಿ ಹಂತದಲ್ಲಿದ್ದಾರೆ. ಈ ನಡುವೆ ಕಚೇರಿ ಕೆಲಸಗಳೆಲ್ಲವನ್ನೂ ಕೇವಲ ನಾಲ್ಕೈದು ಮಂದಿಯಷ್ಟೇ ನಿಭಾಯಿಸುತ್ತಿದ್ದಾರೆ.

ಖಾಲಿ ಇರುವ ಹುದ್ದೆಗಳು: ಆರ್‌ಟಿಒ ಕಚೇರಿಯಲ್ಲಿರುವ 5 ಮಂದಿ ದ್ವಿತೀಯ ದರ್ಜೆ ಸಹಾಯಕರಲ್ಲಿ 3 ಹುದ್ದೆಗಳು ಭರ್ತಿಯಾಗಿದ್ದು, 2 ಹುದ್ದೆ ಖಾಲಿ ಇದೆ. ಒಬ್ಬ ದ್ವಿತೀಯ ದರ್ಜೆ ಸಹಾಯಕರು ಕ್ಯಾಷ್‌ ಕೌಂಟರ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಅವರನ್ನು ಬೇರೆ ಯಾವುದೇ ಕೆಲಸಕ್ಕೂ ನಿಯೋಜಿಸಲು ಸಾಧ್ಯವೇ ಇಲ್ಲವಾಗಿದೆ. ಡಿ ಗ್ರೂಪ್‌ ನೌಕರರಾಗಿದ್ದ ಸವಿತಾ ಅವರಿಗೆ ಪ್ರಮೋಷನ್‌ ನೀಡಿ ದ್ವಿತೀಯ ದರ್ಜೆ ಸಹಾಯಕರಾಗಿ ಮಾಡಿದ್ದರೂ ಅವರಿಂದ ಹೆಚ್ಚಿನ ಕೆಲಸವನ್ನು ನಿರೀಕ್ಷಿಸಲು ಸಾಧ್ಯವಿಲ್ಲದಂತಾಗಿದೆ. ಮತ್ತೂಬ್ಬ ದ್ವಿತೀಯ ದರ್ಜೆ ಸಹಾಯಕ ಮುರಳಿ ಅವರಿಗೆ ಅಪಘಾತವಾಗಿ ಸುದೀರ್ಘ‌ ರಜೆಯ ಮೇಲೆ ತೆರಳಿದ್ದಾರೆ.

ಪ್ರಥಮ ದರ್ಜೆ ಸಹಾಯಕರ 3 ಹುದ್ದೆಗಳಲ್ಲಿ 1 ಖಾಲಿ ಇದೆ. ಇರುವ ಇಬ್ಬರಲ್ಲಿ ಒಬ್ಬರು ಪ್ರಥಮ ದರ್ಜೆ ಸಹಾಯಕ ಮಂಜುನಾಥ್‌ ಅವರಿಗೆ ಸೂಪರಿಂಟೆಂಡೆಂಟ್ ಆಗಿ ಪ್ರಮೋಷನ್‌ ಆಗಿದ್ದು ಸ್ಥಾನದಿಂದ ತೆರವುಗೊಳ್ಳುವುದಕ್ಕೆ ಕಾಯುತ್ತಿದ್ದಾರೆ. ಇವರ ಜಾಗಕ್ಕೆ ಗದಗ ಜಿಲ್ಲೆಯಿಂದ ಒಬ್ಬರು ನೇಮಕಗೊಂಡಿದ್ದರೂ ಇದುವರೆಗೂ ಅವರು ಕರ್ತವ್ಯ ವಹಿಸಿಕೊಂಡಿಲ್ಲ. ಮತ್ತೂಬ್ಬರು ಚನ್ನಕೇಶವ ಎಂಬುವರು ಹಣ ಸ್ವೀಕೃತ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ, ಹಿರಿಯ ಮೋಟಾರು ವಾಹನ ನಿರೀಕ್ಷಕರು, ಬೆರಳಚ್ಚುಗಾರರು, ಶೀಘ್ರಲಿಪಿಗಾರರು, ಖಜಾನೆ ರಕ್ಷಕ ಹುದ್ದೆಗಳೆಲ್ಲವೂ ಖಾಲಿ ಉಳಿದಿವೆ. 5 ಮೋಟಾರು ವಾಹನ ನಿರೀಕ್ಷಕರಲ್ಲಿ ಒಬ್ಬರು ಮಾತ್ರವೇ ಇದ್ದು 4 ಹುದ್ದೆಗಳು ಖಾಲಿ ಇವೆ. 5 ಮಂದಿ ಮೋಟಾರು ವಾಹನ ನಿರೀಕ್ಷಕರಿಗೆ ಒಬ್ಬರು ಮಾತ್ರ ಇರುವುದರಿಂದ ಇನ್ನೊಬ್ಬರು ನಿಯೋಜನೆ ಮೇರೆಗೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅಧೀಕ್ಷಕರು ಇಬ್ಬರಿದ್ದಾರೆ. ಈ ನಾಲ್ವರಲ್ಲಿ ಇಬ್ಬರು ಅಪಘಾತ ಪರಿಶೀಲನೆ, ನ್ಯಾಯಾಲಯ ವಿಚಾರಣೆ ಸೇರಿದಂತೆ ಕಚೇರಿಯ ಇನ್ನಿತರ ಕೆಲಸಗಳಿಗೆ ಹೊರಗಿರುತ್ತಾರೆ. ಇಬ್ಬರಿಂದ ಕಚೇರಿಗೆ ಬರುವ ವಾಹನಗಳ ಗುಣಮಟ್ಟ ಪರಿಶೀಲನೆ, ಎಲ್ಎಲ್ಆರ್‌, ಡಿಎಲ್, ವಾಹನಗಳ ವರ್ಗಾವಣೆ ಇನ್ನಿತರ ಕೆಲಸಗಳನ್ನು ನಿರ್ವಹಿಸುವುದು ಅಸಾಧ್ಯವಾಗಿದೆ.

ನಿತ್ಯ ಬರುವ ವಾಹನಗಳೆಷ್ಟು?: ನಿತ್ಯ ಆರ್‌ಟಿಒ ಕಚೇರಿಗೆ 100 ದ್ವಿಚಕ್ರ ವಾಹನಗಳು, 5 ರಿಂದ 6 ಸಾರಿಗೆ ವಾಹನ, 4 ರಿಂದ 5 ಕಾರುಗಳು ನೋಂದಣಿಗೆ ಬರುತ್ತಿವೆ. ವರ್ಗಾವಣೆ ಕೋರಿ 200 ವಾಹನಗಳು, 90 ಎಲ್ಎಲ್ಆರ್‌, 100 ವಾಹನ ಚಾಲನಾ ಪರವಾನಗಿಗೆ ಅರ್ಜಿಗಳು ಬಂದು ಸಲ್ಲಿಕೆಯಾಗುತ್ತಿವೆ. ಇವೆಲ್ಲವನ್ನು ಪರಿಶೀಲನೆ ನಡೆಸುವುದು ಕಚೇರಿಯಲ್ಲಿರುವ ಐದಾರು ಮಂದಿಯಿಂದ ಸಾಧ್ಯವೇ ಇಲ್ಲದಂತಾಗಿದೆ. ಇದರಿಂದ ವಾಹನಗಳ ನೋಂದಣಿ, ವರ್ಗಾವಣೆ ಸೇರಿದಂತೆ ಎಲ್ಲಾ ಕೆಲಸಗಳು ಆಮೆಗತಿಯಲ್ಲಿ ಸಾಗುತ್ತಿವೆ.

ಇವುಗಳ ಜೊತೆಗೆ ಅಪಘಾತಕ್ಕೀಡಾದ ವಾಹನಗಳು, ಚಾಲಕರ ಪರವಾನಗಿ ಸೇರಿದಂತೆ ನ್ಯಾಯಾಲಯದಿಂದ ಸಲ್ಲಿಕೆಯಾಗುವ ಕೋರಿಕೆ ಅರ್ಜಿಗಳ ಪರಿಶೀಲನೆ ನಡೆಸಿ ನಿಗದಿತ ಸಮಯದೊಳಗೆ ಅವುಗಳನ್ನು ಸಲ್ಲಿಸಬೇಕಿದೆ. ಹೀಗಾಗಿ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಬೆರಳೆಣಿಕೆಯಷ್ಟು ಸಿಬ್ಬಂದಿ ಮೇಲೆ ಕೆಲಸದ ಹೊರೆ ಬಿದ್ದಿದೆ.

ಕಳೆದೊಂದು ವರ್ಷದಿಂದ ಸಿಬ್ಬಂದಿ ಕೊರತೆ ಬಗ್ಗೆ ಅಧಿಕಾರಿಗಳು ಗಮನಸೆಳೆಯುತ್ತಿದ್ದರೂ ಸರ್ಕಾರ ಅದಕ್ಕೆ ಕಿವಿಗೊಡುತ್ತಿಲ್ಲ. ಹೊರಗುತ್ತಿಗೆ ಆಧಾರದ ಮೇಲೂ ನೌಕರರನ್ನು ನೇಮಕ ಮಾಡಿಕೊಳ್ಳುವುದಕ್ಕೆ ಅವಕಾಶವೇ ಇಲ್ಲದಂತಾಗಿದೆ.

 

● ಮಂಡ್ಯ ಮಂಜುನಾಥ್‌

ಟಾಪ್ ನ್ಯೂಸ್

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ಎಚ್‌ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್‌

Lok Sabha Elections: ಎಚ್‌ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್‌

ಡಿಕೆಶಿಗೆ ಸಿದ್ದರಾಮಯ್ಯ ಏಕೆ ಸಿಎಂ ಸ್ಥಾನ ಬಿಟ್ಟುಕೊಡಲಿಲ್ಲ: ಪ್ರತಾಪಸಿಂಹ ಪ್ರಶ್ನೆ

ಡಿಕೆಶಿಗೆ ಸಿದ್ದರಾಮಯ್ಯ ಏಕೆ ಸಿಎಂ ಸ್ಥಾನ ಬಿಟ್ಟುಕೊಡಲಿಲ್ಲ: ಪ್ರತಾಪಸಿಂಹ ಪ್ರಶ್ನೆ

Cheluvarayaswamy: ಚುಂಚಶ್ರೀ ದೂರವಾಣಿ ಕದ್ದಾಲಿಸಿದ್ದು ಯಾರು: ಚಲುವರಾಯಸ್ವಾಮಿ ಪ್ರಶ್ನೆ

Cheluvarayaswamy: ಚುಂಚಶ್ರೀ ದೂರವಾಣಿ ಕದ್ದಾಲಿಸಿದ್ದು ಯಾರು: ಚಲುವರಾಯಸ್ವಾಮಿ ಪ್ರಶ್ನೆ

Congress Party ನನ್ನ ಬಲ ಕುಗ್ಗಿಸಲು ಮಂಡ್ಯದಲ್ಲಿ ಎಚ್‌ಡಿಕೆ ಸ್ಪರ್ಧೆ: ಚಲುವರಾಯಸ್ವಾಮಿCongress Party ನನ್ನ ಬಲ ಕುಗ್ಗಿಸಲು ಮಂಡ್ಯದಲ್ಲಿ ಎಚ್‌ಡಿಕೆ ಸ್ಪರ್ಧೆ: ಚಲುವರಾಯಸ್ವಾಮಿ

Congress Party ನನ್ನ ಬಲ ಕುಗ್ಗಿಸಲು ಮಂಡ್ಯದಲ್ಲಿ ಎಚ್‌ಡಿಕೆ ಸ್ಪರ್ಧೆ: ಚಲುವರಾಯಸ್ವಾಮಿ

sumalatha

LS polls: ಇಂದು ಸುಮಲತಾ ಬಿಜೆಪಿಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.