ಪ್ರಧಾನಿ ಮೋದಿ ಆಗಮನ; ಕೇಸರಿಮಯವಾದ ಸಕ್ಕರೆ ನಗರ: ರಾತ್ರೋರಾತ್ರಿ ದ್ವಾರ ಬದಲಾವಣೆ


Team Udayavani, Mar 12, 2023, 9:43 AM IST

ಪ್ರಧಾನಿ ಮೋದಿ ಆಗಮನ; ಕೇಸರಿಮಯವಾದ ಸಕ್ಕರೆ ನಗರ: ರಾತ್ರೋರಾತ್ರಿ ದ್ವಾರ ಬದಲಾವಣೆ

ಮಂಡ್ಯ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ರೋಡ್ ಶೋ ನಡೆಸುವ ಮಂಡ್ಯ ನಗರ ಸಂಪೂರ್ಣ ಕೇಸರಿ ಮಯವಾಗಿದೆ.

ಮೈಸೂರು ವಿಮಾನ ನಿಲ್ದಾಣದಿಂದ ಮಂಡ್ಯ ನಗರಕ್ಕೆ ಆಗಮಿಸುವ ಮೋದಿ ಅವರು, ನಗರದ ಪಿಇಟಿ ಕ್ರೀಡಾಂಗಣದ ಹೆಲಿಪ್ಯಾಡ್‌ ಗೆ ಬೆಳಿಗ್ಗೆ 11.20ಕ್ಕೆ ಬಂದಿಳಿಯಲಿದ್ದಾರೆ. ನಂತರ ನಗರದ ಪ್ರವಾಸಿ ಮಂದಿರದ ವೃತ್ತದಿಂದ ಎಸ್.ಡಿ.ಜಯರಾಂ ವೃತ್ತದವರೆಗೆ 1.5 ಕಿ.ಮೀ. ರೋಡ್ ಶೋ ನಡೆಸಲಿದ್ದಾರೆ.

ಮೋದಿ ಆಗಮನ ಹಿನ್ನೆಲೆಯಲ್ಲಿ ಮಂಡ್ಯ ನಗರದಿಂದ ಗೆಜ್ಜಲಗೆರೆ ಕಾಲೋನಿಯ ಬೃಹತ್ ವೇದಿಕೆವರೆಗೂ ಕೇಸರಿ ಬಾವುಟಗಳು, ಬಿಜೆಪಿ ಪಕ್ಷದ ಬಾವುಗಳು ಹಾರಾಡುತ್ತಿವೆ.

ನಗರದಲ್ಲಿ ನಾಲ್ಕು ಕಡೆ ಮಹಾದ್ವಾರಗಳನ್ನು ನಿರ್ಮಾಣ ಮಾಡಲಾಗಿದೆ. ನಗರದ ಪ್ರವಾಸಿ ಮಂದಿರ ವೃತ್ತದಿಂದ ಪ್ರಾರಂಭವಾಗುವ ರೋಡ್ ಶೋ ಹಿನ್ನೆಲೆಯಲ್ಲಿ ವೃತ್ತದಲ್ಲಿಯೇ ಸರ್ ಎಂ.ವಿಶ್ವೇಶ್ವರಯ್ಯ ಮಹಾದ್ವಾರ ಎಂದು ಮೊದಲ ದ್ವಾರ ಹಾಕಲಾಗಿದೆ. ಇನ್ನುಳಿದಂತೆ ಜೆ.ಸಿ.ವೃತ್ತದಲ್ಲಿ ಕೆಂಪೇಗೌಡ ಮಹಾದ್ವಾರ, ಮಹಾವೀರ ವೃತ್ತದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಮಹಾದ್ವಾರ ಹಾಗೂ ಮೈಷುಗರ್ ವೃತ್ತದಲ್ಲಿ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಮಹಾದ್ವಾರಗಳನ್ನು ಅಳವಡಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಸಾಗುವ ರಸ್ತೆಯುದ್ದಕ್ಕೂ ಜನರನ್ನು ನಿಯಂತ್ರಿಸುವ ಹಾಗೂ ರಸ್ತೆಗೆ ಸಾರ್ವಜನಿಕರು ಬರದಂತೆ ತಡೆಯುವ ನಿಟ್ಟಿನಲ್ಲಿ ಬ್ಯಾರಿಕೇಡ್‌ ಗಳ ನಿರ್ಮಾಣ ಮಾಡಲಾಗಿದೆ. ಹೆದ್ದಾರಿಯ ಎರಡು ಇಕ್ಕೆಲಗಳಲ್ಲಿ ಮರದ ಬ್ಯಾರಿಕೇಡ್‌ ಗಳನ್ನು ಅಳವಡಿಸಿ ಕ್ರಮ ವಹಿಸಲಾಗಿದೆ.

ಎಸ್‌ ಬಿಜಿ ತಂಡದಿಂದ ಪರಿಶೀಲನೆ: ಜಿಲ್ಲೆಗೆ ಆಗಮಿಸುವ ಪ್ರಧಾನಿಗೆ ಯಾವುದೇ ರೀತಿಯ ಭದ್ರತಾ ಲೋಪ ಆಗದಂತೆ ನೋಡಿಕೊಳ್ಳುವ ಹಿನ್ನೆಲೆ ವಿಶೇಷ ರಕ್ಷಣಾ ಪಡೆಯ ಅಧಿಕಾರಿಗಳು ಮಂಡ್ಯ ನಗರದಿಂದ ಗೆಜ್ಜಲಗೆರೆ ಕಾಲೋನಿಯ ವೇದಿಕೆಯವರೆಗೂ ಸಂಚರಿಸಿ ಭದ್ರತಾ ಪರಿಶೀಲನೆ ನಡೆಸಿದರು. ರಸ್ತೆಯುದ್ದಕ್ಕೂ ಎಲ್ಲೆಲ್ಲಿ ಹೆಚ್ಚಿನ ಭದ್ರತೆ ನಿಯೋಜಿಸುವ ಬಗ್ಗೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಾಂಬ್ ನಿಷ್ಕ್ರಿಯ ದಳ, ಶ್ವಾನದಳದವರು ಪರಿಶೀಲನೆ ನಡೆಸಿ ಹೆದ್ದಾರಿಯನ್ನು ಸಂಪೂರ್ಣ ಎಸ್‌ಬಿಜಿ ಅವರ ವಶಕ್ಕೆ ಪಡೆದಿದ್ದಾರೆ.

ಭದ್ರತೆಗಾಗಿ ಮಂಡ್ಯ ಹಾಗೂ ವಿವಿಧ ಹೊರ ಜಿಲ್ಲೆಗಳಿಂದಲೂ 2500 ಮಂದಿ ಪೊಲೀಸರನ್ನು ನಿಯೋಜಿಸಲಾಗಿದೆ. ಹೆದ್ದಾರಿಯುದ್ದಕ್ಕೂ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಅಲ್ಲದೆ, ಯಾವುದೇ ರೀತಿಯ ಡ್ರೋಣ್‌ಗಳ ಹಾರಾಟವನ್ನು ನಿಷೇಧಿಸಲಾಗಿದೆ. 5 ಮಂದಿ ಎಸ್ಪಿ, 17 ಮಂದಿ ಡಿವೈಎಸ್ಪಿ, ಪೊಲೀಸ್ ಇನ್ಸ್ಪೆಕ್ಟರ್‌ಗಳನ್ನು ನಿಯೋಜಿಸಲಾಗಿದ್ದು, ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ.

ರಾತ್ರೋರಾತ್ರಿ ದ್ವಾರ ಬದಲಾವಣೆ: ನೆಲೆ ಇಲ್ಲದ ಮಂಡ್ಯದಲ್ಲಿ ಬಿಜೆಪಿ ಹಿಂದುತ್ವ ಅಜೆಂಡಾ ಮೂಲಕ ಬೇರೂರಲು ಪ್ರಯತ್ನಿಸುತ್ತಿರುವ ಕೇಸರಿಪಾಳೇಯ ಟಿಪ್ಪು ಕೊಂದರು ಎನ್ನಲಾದ ಉರಿಗೌಡ, ದೊಡ್ಡನಂಜೇಗೌಡ ಅವರ ಹೆಸರಿನಲ್ಲಿ ಮಹಾದ್ವಾರವನ್ನು ಮೈಷುಗರ್ ವೃತ್ತದಲ್ಲಿ ಅಳವಡಿಸಲಾಗಿತ್ತು.

ಇದರ ವಿರುದ್ಧ ಪ್ರಗತಿಪರ ಸಂಘಟನೆಗಳು, ಕಾಂಗ್ರೆಸ್, ಜೆಡಿಎಸ್, ಸಿಪಿಐಎಂ, ಸಿಐಟಿಯು ಸಂಘಟನೆಗಳು ವಿರೋಧಿಸಿದ್ದವು. ಅಲ್ಲದೆ, ಕೂಡಲೇ ತೆರವುಗೊಳಿಸಬೇಕು. ಇಲ್ಲದಿದ್ದರೆ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದವು. ಇದಕ್ಕೆ ಬೆದರಿದ ಬಿಜೆಪಿ ರಾತ್ರೋ ರಾತ್ರಿ ಉರಿಗೌಡ, ನಂಜೇಗೌಡ ಮಹಾದ್ವಾರ ತೆರವುಗೊಳಿಸಿ ಬಾಲಗಂಗಾಧರನಾಥ ಸ್ವಾಮೀಜಿ ಮಹಾದ್ವಾರ ಎಂದು ಅಳವಡಿಸಲಾಗಿದೆ.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.