ಮೈಷುಗರ್‌ ಉಳಿವಿಗೆ ಸೆ.13ರಿಂದ ಧರಣಿ ಸತ್ಯಾಗ್ರಹ


Team Udayavani, Sep 3, 2021, 4:47 PM IST

ಮೈಷುಗರ್‌ ಉಳಿವಿಗೆ 13ರಿಂದ ಧರಣಿ ಸತ್ಯಾಗ್ರಹ

ಮಂಡ್ಯ: ಮೈಷುಗರ್‌ ಕಾರ್ಖಾನೆಯನ್ನು ಸರ್ಕಾರಿ ಸ್ವಾಮ್ಯದಲ್ಲಿಯೇ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ಸೆ.13ರಿಂದ ಧರಣಿ ಸತ್ಯಾಗ್ರಹ ನಡೆಸಲು ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನಿರ್ಧರಿಸಿದೆ.

ನಗರದ ಕರ್ನಾಟಕ ಸಂಘದ ಆವರಣದಲ್ಲಿಯೇ ಸಭೆ ನಡೆಸಿದ ರೈತ ಹಿತರಕ್ಷಣಾ ಸಮಿತಿ ಪದಾಧಿಕಾರಿಗಳು, ಸೆ.13ರಿಂದ ವಿಧಾನಸಭೆ ಅಧಿವೇಶನ ಪ್ರಾರಂಭವಾಗಲಿದೆ. ಆದ್ದರಿಂದ ಅಂದಿನಿಂದಲೇ ಧರಣಿ ಸತ್ಯಾಗ್ರಹ ನಡೆಸಿ ಸರ್ಕಾರಕ್ಕೆ ಮೈಷುಗರ್‌ ಕಾರ್ಖಾನೆಯನ್ನು ಆರಂಭಿಸುವಂತೆ ಒತ್ತಾಯಿಸಲು ಒಕ್ಕೊರಲ ತೀರ್ಮಾನಕೈಗೊಳ್ಳಲಾಗಿದೆ.

ಬೃಹತ್‌ ಧರಣಿ ಸತ್ಯಾಗ್ರಹ: ಸೆ.13ರಂದು ಬೆಳಗ್ಗೆ ನಗರದ ಸರ್‌ಎಂವಿ ಪ್ರತಿಮೆ ಮುಂಭಾಗ ರೈತರು,ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಪದಾಧಿಕಾರಿ,ಕಾರ್ಯಕರ್ತರು,ದಸಂಸ,ಕಾರ್ಮಿಕ,ಮಹಿಳಾ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಬೃಹತ್‌ ಧರಣಿ ಸತ್ಯಾಗ್ರಹ ನಡೆಯಲಿದೆ.

ಅಂದು ಉದ್ಘಾಟನೆಯಲ್ಲಿ ಎಲ್ಲ ಹಾಲಿ-ಮಾಜಿ ಶಾಸಕರು, ಮುಖಂಡರು ಭಾಗವಹಿಸಲಿದ್ದಾರೆ ಎಂದು ಸಮಿತಿ ಸಂಘಟನಾ ಕಾರ್ಯದರ್ಶಿ ಸುನಂದಾ ಜಯರಾಂ ತಿಳಿಸಿದರು.

ಸದನದ ನಿರ್ಧಾರದಂತೆ ಮುಂದಿನ ಹೋರಾಟ: ಜಿಲ್ಲೆಯ ಶಾಸಕರು ಸದನದಲ್ಲಿ ಚರ್ಚೆ ನಡೆಸಿದ ನಂತರ ‌ ಅಲ್ಲಿ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬುದನ್ನು ತಿಳಿದುಕೊಂಡು ಧರಣಿ ಸತ್ಯಾಗ್ರಹದ ಎರಡು-ಮೂರು ದಿನಗಳ ನಂತರ ಹೋರಾಟದ ರೂಪುರೇಷೆಯ ಬಗ್ಗೆ ತೀರ್ಮಾನ ‌ಕೈಗೊಳ್ಳಲಾಗುವುದು ಎಂದರು.

ಇದನ್ನೂ ಓದಿ:ಶಾಂತಿಯುತವಾಗಿ ನಡೆಯುತ್ತಿರುವ ಉಪ ಚುನಾವಣೆ ಮತದಾನ

ಸದನದಲ್ಲಿ ಚರ್ಚೆ: ಸಭೆಯಲ್ಲಿ ಭಾಗವಹಿಸಿದ್ದ ಶಾಸಕ ಎಂ.ಶ್ರೀನಿವಾಸ್‌ ಸೇರಿದಂತೆ ಹಾಗೂ ವಿಧಾನ ಪರಿಷತ್‌ನ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಮಾತನಾಡಿ, ಸರ್ಕಾರ ಕೂಡಲೇ ಮೈಷುಗರ್‌ ಕಾರ್ಖಾನೆ ಆರಂಭಿಸುವಂತೆ ವಿಧಾನಸಭೆ ಹಾಗೂ ಮೇಲ್ಮನೆಯಲ್ಲಿ ಧ್ವನಿ ಎತ್ತಲಾಗುವುದು.

ಈಗಾಗಲೇ ಹಿಂದಿನ ಮುಖ್ಯಮಂತ್ರಿಯಾಗಿದ್ದ ಬಿ.ಎಸ್‌.ಯಡಿಯೂರಪ್ಪ ಅವರ ಕೊಟ್ಟ ಮಾತಿನಂತೆ ಪ್ರಸ್ತುತ ಇರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭರವಸೆ ನೀಡಿದ್ದಾರೆ. ಅದರಂತೆ ಸದನದಲ್ಲಿ ಚರ್ಚೆ ನಡೆಸಿ ಒಂದು ನಿರ್ಧಾರ ಕೈಗೊಳ್ಳುವಂತೆ ಒತ್ತಡ
ಹಾಕಲಾಗುವುದು ಎಂದು ಭರವಸೆ ನೀಡಿದರು.

ಸಭೆಯಲ್ಲಿ ರೈತ ಮುಖಂಡರಾದ ಕೆ.ಬೋರಯ್ಯ, ಬೋರಾಪುರ ಶಂಕರೇಗೌಡ, ಇಂಡುವಾಳು ಚಂದ್ರಶೇಖರ್‌, ಮುದ್ದೇಗೌಡ, ಜಿಪಂ ಮಾಜಿ ಅಧ್ಯಕ್ಷ ತಗ್ಗಹಳ್ಳಿ ವೆಂಕಟೇಶ್‌, ಕೃಷಿ ಪ್ರಾಂತ ರೈತಸಂಘದ ಟಿ.ಎಲ್‌.ಕೃಷ್ಣೇಗೌಡ,ಟಿ.ಯಶವಂತ,ಎಂ.ಪುಟ್ಟಮಾಧು ಸೇರಿದಂತೆ ಮತ್ತಿತರರಿದ್ದರು.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.