ಸರ್ಕಾರಿ ಶಾಲೆ, ಕಾಲೇಜಿಗೆ ಜೀವಕಳೆ


Team Udayavani, Mar 15, 2022, 1:38 PM IST

ಸರ್ಕಾರಿ ಶಾಲೆ, ಕಾಲೇಜಿಗೆ ಜೀವಕಳೆ

ಮಂಡ್ಯ: ವಾರಪೂರ್ತಿ ಕೆಲಸ ಮಾಡಿ ವಾರದ ಎರಡು ದಿನ ರಜೆಯಲ್ಲಿ ಮೋಜು-ಮಸ್ತಿ ಬಿಟ್ಟು ಸರ್ಕಾರಿ ಶಾಲೆ ಉಳಿಸುವ ಅಭಿಯಾನದಲ್ಲಿ ತೊಡಗಿಸಿಕೊಂಡಿರುವ ಖಾಸಗಿ ಕಂಪನಿಗಳ ಉದ್ಯೋಗಿಗಳು ಸಮಾಜಕ್ಕೆ ಮಾದರಿಯಾಗಿದ್ದಾರೆ.

ಮಂಡ್ಯ ತಾಲೂಕಿನ ತಗ್ಗಹಳ್ಳಿ ಹಾಗೂ ಟಿ.ಮಲ್ಲಿಗೆರೆ ಗ್ರಾಮಗಳ ಸರ್ಕಾರಿ ಶಾಲಾ-ಕಾಲೇಜಿಗೆ ಹೊಸ ರೂಪ ನೀಡಿದ್ದು ಕಣ್ಮನ ಸೆಳೆಯುತ್ತಿವೆ. ಹೂವಿನ ಹೊಳೆ ಪ್ರತಿಷ್ಠಾನ ಹಾಗೂ ಕನ್ನಡ ಮನಸ್ಸುಗಳು ಪ್ರತಿಷ್ಠಾನದಿಂದ ಬೆಂಗಳೂರಿನ ವಿವಿಧ ಖಾಸಗಿ ಕಂಪನಿಗಳಲ್ಲಿ ಉದ್ಯೋಗಿಗಳಾಗಿರುವ ಮಂಜು ಹಾಗೂ ಚಿನ್ಮಯ್‌ ಭಟ್‌ ನೇತೃತ್ವದ 150ಕ್ಕೂ ಹೆಚ್ಚು ಜನರ ಸ್ವಯಂ ಸೇವಕರ ತಂಡ ಈ ಕಾರ್ಯದಲ್ಲಿ ತೊಡಗಿಸಿಕೊಂಡಿದೆ.

ಈ ತಂಡದಲ್ಲಿ ಕಲಾವಿದರು, ಪ್ರಾಧ್ಯಾಪಕರು, ಉಪನ್ಯಾಸಕರು ಕೈಜೋಡಿಸಿರುವುದು ವಿಶೇಷ. ತಗ್ಗಹಳ್ಳಿ ಗ್ರಾಮದ ಸರ್ಕಾರಿ ಪಿಯು ಕಾಲೇಜು ಹಾಗೂ ಪ್ರೌಢಶಾಲಾ ವಿಭಾಗ, ಟಿ.ಮಲ್ಲಿಗೆರೆ ಗ್ರಾಮದ ಹಿರಿಯ ಪ್ರಾಥಮಿಕ ಪಾಠಶಾಲೆ ಅಭಿವೃದ್ಧಿಗೆ ದತ್ತು ಪಡೆದುಕೊಂಡಿದ್ದಾರೆ. ಈಗಾಗಲೇ ಎರಡು ಶಾಲಾ- ಕಾಲೇಜಿಗೆ ಬೇಕಾದ ಮೂಲಭೂತ ಸೌಲಭ್ಯ ಕಲ್ಪಿಸಿ ದ್ದಾರೆ. ಶೌಚಾಲಯ, ಕುಡಿವ ನೀರು ಪೂರೈಕೆ, ವಿದ್ಯುತ್‌, ಶಿಥಿಲಗೊಂಡಿರುವ ಕಟ್ಟಡ ದುರಸ್ತಿಗೊಳಿಸಿದ್ದಾರೆ. ಅಲ್ಲದೆ, ಬಣ್ಣದ ಕಾರ್ಯವೂ ಭರದಿಂದ ಸಾಗಿದೆ.

ಹಳೆ ವಿದ್ಯಾರ್ಥಿ ಮಂಜು ಮಾದರಿ: ಟಿ.ಮಲ್ಲಿಗೆರೆ ಗ್ರಾಮದ ಮಂಜು ಎಂಬ ವಿದ್ಯಾರ್ಥಿ ತನ್ನ ಹುಟ್ಟೂರು ಶಾಲೆ ಅಭಿವೃದ್ಧಿಗೆ ತಾನು ಕೆಲಸ ಮಾಡುತ್ತಿರುವ ಇಸಿಐ ಕಂಪನಿಯಿಂದಲೇ ಸುಮಾರು 11 ಲಕ್ಷ ರೂ. ಅನುದಾನ ಬಿಡುಗಡೆ ಮಾಡಿಸಿ ಶಾಲೆ ಅಭಿವೃದ್ಧಿಗೆ ಮುಂದಾಗಿದ್ದಾರೆ. ಮಂಜು ಟಿ.ಮಲ್ಲಿಗೆರೆ ಗ್ರಾಮದ ಶಾಲೆಯಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ ಹಾಗೂ ತಗ್ಗಹಳ್ಳಿ ಗ್ರಾಮದ ಪ್ರೌಢಶಾಲೆ ಹಾಗೂ ಕಾಲೇಜಿನಲ್ಲಿ ವಿದ್ಯಾಭ್ಯಾಸ ನಡೆಸಿದ್ದಾರೆ. ಅದರಂತೆ ಹುಟ್ಟೂರಿನ ಋಣ ತೀರಿಸಲು ಶಾಲೆಯನ್ನು ಅಭಿವೃದ್ಧಿಪಡಿಸಲು ಕಂಕಣ ತೊಟ್ಟಿದ್ದಾರೆ.

ಕಾಲೇಜಿಗೆ ಲ್ಯಾಬ್‌: ತಗ್ಗಹಳ್ಳಿ ಪಿಯು ಕಾಲೇಜಿಗೆ ಇದುವರೆಗೂ ವಿಜಾnನ ವಿಭಾಗಕ್ಕೆ ಲ್ಯಾಬ್‌ ಇರಲಿಲ್ಲ. ಆದರೆ, ಸ್ವಯಂ ಸೇವಕರ ತಂಡ ಮೂರು ಲ್ಯಾಬ್‌ ನಿರ್ಮಾಣ ಮಾಡಿದ್ದು, ಅಗತ್ಯ ಪರಿಕರ ಒದಗಿಸಿದ್ದಾರೆ. ಅಲ್ಲದೆ, ಕಾಲೇಜಿಗೆ ಬೇಕಾದ ಪೀಠೊಪಕರಣ, ವಿದ್ಯುತ್‌, ಕೊಳವೆ ಬಾವಿಗೆ ಮೋಟಾರ್‌ ಅಳವಡಿಕೆ, ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡ ದುರಸ್ತಿ, ಹಳೆಯದಾಗಿದ್ದ ಕಿಟಕಿ, ಬಾಗಿಲು ತೆಗೆದು ಹೊಸದಾಗಿ ಅಳವಡಿಸಿದ್ದಾರೆ. ಶಾಲಾ-ಕಾಲೇಜಿನ ಕಾಂಪೌಂಡ್‌, ಗೇಟ್‌ ಸೇರಿದಂತೆ ಎಲ್ಲಾ ಕಟ್ಟಡಕ್ಕೂ ಸಂಪೂರ್ಣ ಬಣ್ಣ ಹಚ್ಚಲಾಗಿದ್ದು, ಹೊಸತರಂತೆ ಕಂಗೊಳಿಸುವಂತೆ ಮಾಡಿದ್ದಾರೆ.

ಗೋಡೆಗಳ ಮೇಲೆ ಚಿತ್ರಕಲೆ: ವಿದ್ಯಾರ್ಥಿಗಳ ಶೈಕ್ಷಣಿಕ ವಾತಾವರಣ ನಿರ್ಮಾಣಕ್ಕೆ ಶಾಲಾ-ಕಾಲೇಜಿನ ಗೋಡೆಗಳ ಮೇಲೆ ವಿವಿಧ ಗಣ್ಯರ ನಾಯಕರು, ಕವಿಗಳು, ಶಿಕ್ಷಣಕ್ಕೆ ಸಂಬಂ ಸಿದಂತೆ ಚಿತ್ರಕಲೆ ಬಿಡಿಸಿದ್ದಾರೆ. ಇದರಿಂದ ಎರಡು ಶಾಲಾ-ಕಾಲೇಜುಗಳ ಸೌಂದರ್ಯ ಇಮ್ಮಡಿಯಾಗಿದೆ. 22ಕ್ಕೂ ಹೆಚ್ಚು ಶಾಲೆ ಅಭಿವೃದ್ಧಿ: ಇದುವರೆಗೂ ಈ ತಂಡ ರಾಜ್ಯಾದ್ಯಂತ 12 ಅಭಿಯಾನ ನಡೆಸಿ ಸುಮಾರು 22ಕ್ಕೂ ಹೆಚ್ಚು ಶಾಲೆಗಳ ಅಭಿವೃದ್ಧಿಗೆ ಕೈಜೋಡಿಸಿವೆ. ಮಂಡ್ಯ ಜಿಲ್ಲೆಯಲ್ಲಿ 4 ಶಾಲೆ ಅಭಿವೃದ್ಧಿಪಡಿಸಿವೆ. ತಗ್ಗಹಳ್ಳಿ ಹಾಗೂ ಟಿ.ಮಲ್ಲಿಗೆರೆ ಗ್ರಾಮದ ಶಾಲಾ-ಕಾಲೇಜಿಗೆ ಇದುವರೆಗೂ 13 ಲಕ್ಷ ರೂ.ಗೂ ಹೆಚ್ಚು ಹಣ ಖರ್ಚು ಮಾಡಿ ಅಭಿವೃದ್ಧಿಪಡಿಸಿದ್ದು ಇವರ ಕಾರ್ಯಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸರ್ಕಾರ ಯಾವುದೇ ಅನುದಾನ ನೀಡಿರಲಿಲ್ಲ : ತಗ್ಗಹಳ್ಳಿ ಹಾಗೂ ಟಿ.ಮಲ್ಲಿಗೆರೆ ಶಾಲಾ-ಕಾಲೇಜು ದುರಸ್ತಿಗೆ ಸರ್ಕಾರ ಅನುದಾನ ನೀಡಿರಲಿಲ್ಲ. ಆದರೆ ಕನ್ನಡ ಮನಸುಗಳು ಹಾಗೂ ಹೂವಿನ ಹೊಳೆ ಪ್ರತಿಷ್ಠಾನದಿಂದ ವಿವಿಧ ಕಂಪನಿಗಳ ಉದ್ಯೋಗಿಗಳು ಅಭಿವೃದ್ಧಿಗೆ ಪಣತೊಟ್ಟಿದ್ದಾರೆ. ಟಿ.ಮಲ್ಲಿಗೆರೆಯ ಹಳೆ ವಿದ್ಯಾರ್ಥಿ ಮಂಜು ಕಂಪನಿ ಹಣ ಹಾಗೂ ತಮ್ಮ ಸ್ವಂತ ದುಡಿಮೆ ಹಣದಲ್ಲಿ ಶಾಲೆ ಅಭಿವೃದ್ಧಿಗೆ ಪಣತೊಟ್ಟಿರುವುದು ಶ್ಲಾಘನೀಯ. ಜತೆಗೆ ಗ್ರಾಮಸ್ಥರು, ಶಾಲಾ-ಕಾಲೇಜಿನ ಹಳೆಯ ವಿದ್ಯಾರ್ಥಿಗಳು ಕೈಜೋಡಿಸಿದ್ದಾರೆಂದು ಜಿಪಂ ಮಾಜಿ ಅಧ್ಯಕ್ಷರಾದ ತಗ್ಗಹಳ್ಳಿ ವೆಂಕಟೇಶ್‌ ತಿಳಿಸಿದರು.

ನಾನು ಓದಿದ ಶಾಲೆ ಅಭಿವೃದ್ಧಿ ಪಡಿಸಲು ನಾನು ಕೆಲಸ ಮಾಡುತ್ತಿರುವ ಕಂಪನಿಯಿಂದಲೇ ಹಣ ಬಿಡುಗಡೆ ಮಾಡಿಸಿದ್ದೇನೆ. ಅಲ್ಲದೇ, ನನ್ನ ಗ್ರಾಮ ಟಿ. ಮಲ್ಲಿಗೆರೆ ಗ್ರಾಮದ ಶಾಲೆಗೆ ಸ್ವಂತ ಹಣ 1.50 ಲಕ್ಷ ರೂ. ವೆಚ್ಚ ಮಾಡಿದ್ದು ಶಾಲೆಗೆ ಬೇಕಾದ ಎಲ್ಲ ಸೌಲಭ್ಯ ಕಲ್ಪಿಸಲಾಗಿದೆ. – ಮಂಜು, ಟಿ.ಮಲ್ಲಿಗೆರೆ ಗ್ರಾಮ, ಬೆಂಗಳೂರಿನ ಇಸಿಐ ಕಂಪನಿಯ ಉದ್ಯೋಗಿ

ವಾರದ ರಜಾದಿನಗಳಲ್ಲಿ ಮೋಜು, ಮಸ್ತಿ ಮಾಡುವುದನ್ನು ಬಿಟ್ಟು ಸುಮಾರು 150ಕ್ಕೂ ಹೆಚ್ಚು ಜನರ ಸ್ವಯಂ ಸೇವಕರ ತಂಡದೊಂದಿಗೆ ಸರ್ಕಾರಿ ಶಾಲೆ ಉಳಿಸುವ ಅಭಿಯಾನ ಕೈಗೊಂಡಿದ್ದೇವೆ. ಇದುವರೆಗೂ 22ಕ್ಕೂ ಹೆಚ್ಚು ಸರ್ಕಾರಿ ಶಾಲಾ-ಕಾಲೇಜುಗಳ ಅಭಿವೃದ್ಧಿ ಮಾಡಿದ್ದೇವೆ. ಈ ಕಾರ್ಯಕ್ಕೆ ಯಾರೂ ಬೇಕಾದರೂ ಕೈಜೋಡಿಸಬಹುದು. ಚಿನ್ಮಯ್‌ ಭಟ್‌, ಕನ್ನಡ ಮನಸುಗಳು ಪ್ರತಿಷ್ಠಾನದ ಸದಸ್ಯ

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.