![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಮಾನಸಿಕ ಅಸ್ವಸ್ಥರ ಸೇವೆ ದೇವರ ಸೇವೆ
Team Udayavani, Jun 5, 2020, 5:25 AM IST
![manasika](https://www.udayavani.com/wp-content/uploads/2020/06/manasika-620x412.jpg)
ಮಂಡ್ಯ: ಸಾಮಾಜಿಕ ಮತ್ತು ಕೌಟುಂಬಿಕ ನಿರ್ಲಕ್ಷ್ಯದಿಂದ ಮಾನಸಿಕ ಅಸ್ವಸ್ಥರನ್ನು ಉಪಚರಿಸುವುದು ದೇವರ ಸೇವೆಗೆ ಸಮಾನ ಎಂದು ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ.ಕೆ.ಪಿ.ಅಶ್ವತ್ಥ್ ಹೇಳಿದರು.
ತಾಲೂಕಿನ ಕೋಣನಹಳ್ಳಿ ಎಂ.ಜಿ.ಬಡಾವಣೆಯಲ್ಲಿನ ಮಾನಸಿಕ ಅಸ್ವಸ್ಥರ ಪುನರ್ವಸತಿ ಕೇಂದ್ರ, ಮಾನಸಧಾರಾ ವತಿಯಿಂದ 5ನೇ ವಾರ್ಷಿಕೋತ್ಸವದ ಅಂಗವಾಗಿ ಮಾನಸಿಕ ಅಸ್ವಸ್ಥರು ಮತ್ತು ಅವರ ಕುಟುಂಬದ ಸದಸ್ಯರಿಗೆ ಆಹಾರ ಕಿಟ್ ವಿತರಿಸಿ ಮಾತನಾಡಿದರು, ಆರೋಗ್ಯ ಕ್ಷೇತ್ರದ ಸೇವೆ ಮಹತ್ವದ್ದಾಗಿದ್ದು, ಕೊರೊನಾ ವಿರುದ್ಧದ ಸಮರ ಇದಕ್ಕೆ ಸಾಕ್ಷಿಯಾಗಿದೆ. ನಮ್ಮ ದುಡಿಮೆಗೆ ಸಂಬಳ ಮತ್ತು ಪುಣ್ಯ ಎರಡೂ ಸಿಗುತ್ತದೆ. ಆದ್ದರಿಂದ ಆರೋಗ್ಯ ಕ್ಷೇತ್ರ ದಲ್ಲಿ ಕಾಯಕನಿಷ್ಠೆ ಇರಬೇಕು ಎಂದು ಪ್ರತಿಪಾದಿಸಿದರು.
ನೂರಾರು ಅಸ್ವಸ್ಥರಿಗೆ ನೆರವು: ಮಾನಸಧಾರ ಸೇವಾ ಸಾಧನೆಯನ್ನು ಪ್ರಶಂಶಿಸುತ್ತಾ, 5 ವರ್ಷಗಳಿಂದ ಈ ಸಂಸ್ಥೆ ನೂರಾರು ಅಸ್ವಸ್ಥರಿಗೆ ನೆರವಾಗಿದೆ. ಅವರಿಗೆ ಸ್ವಯಂ ಉದ್ಯೋಗದ ಮೂಲಕ ಬದುಕನ್ನು ಕಟ್ಟಿಕೊಡುವ ಕೆಲಸವನ್ನು ಮಾಡಿಕೊಂಡು ಬಂದಿದೆ. ರಾಜ್ಯದಲ್ಲೇ ಮೊದಲ ಸ್ಥಾನ ಪಡೆದಿರುವುದು ಹೆಮ್ಮೆಯ ಸಂಗತಿ ಎಂದರು. ಮಾನಸಧಾರ ಮತ್ತು ಸೆಂಟ್ಥಾಮಸ್ ಮಿಷನ್ ಸೊಸೈಟಿ ನಿರ್ದೇಶಕ ಜೋಷ್ಕುಟ್ಟಿ ಮಾತನಾಡಿ, ಮಾನಸಿಕ ಅಸ್ವಸ್ಥರ ಬದುಕಿಗೆ ಸ್ಪಂದಿಸುವ ಅವರಲ್ಲಿ ಆತ್ಮವಿಶ್ವಾಸವನ್ನು ಮೂಡಿಸುವ ಉದ್ದೇಶದಿಂದ ಈ ಸಂಸ್ಥೆ ಆರಂಭಗೊಂಡಿದೆ.
ಈಗ ಹಲವು ಜನರಿಗೆ ನೆರವಾಗಿದ್ದೇವೆ. ಲಾಕ್ಡೌನ್ನಿಂದ ಉಂಟಾಗಿರುವ ಸಂಕಷ್ಟ ನಿವಾರಣೆಗಾಗಿ ನಿರಂತರ ಆಹಾರ ಕಿಟ್ ವಿತರಿಸಿದ್ದೇವೆ ಎಂದರು. ಡಿ. ದೇವರಾಜ ಅಸರು ಹಿಂದುಳಿದ ವರ್ಗಗಳ ವೇದಿಕೆ ಅಧ್ಯಕ್ಷ ಎಲ್. ಸಂದೇಶ್, ಸೆಂಟ್ಥಾಮಸ್ ಸೊಸೈಟಿ ಅಧ್ಯಕ್ಷ ಜೋಸೆಫ್, ಆಶಾ ಸದನ ನಿರ್ದೇಶಕರಾದ ಸೋಜನ್ ಸ್ಯಾಲೀಸ್ ಸುಹೇಲ್, ಮುಖಂಡ ಸಿ.ಸಿದ್ಧಶೆಟ್ಟಿ, ಆರೋಗ್ಯ ಇಲಾಖೆಯ ರಾಘವೇಂದ್ರ, ಗೋವಿಂದರಾಜು ಇದ್ದರು.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ](https://www.udayavani.com/wp-content/uploads/2024/07/KRS-150x84.jpg)
KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ
KRS Dam: ಶೀಘ್ರ ಕೆಆರ್ಎಸ್ ಡ್ಯಾಂ ಭರ್ತಿ 92 ಗ್ರಾಮಗಳಲ್ಲಿ ಪ್ರವಾಹ ಭೀತಿ
![Cheluvaraya-swamy](https://www.udayavani.com/wp-content/uploads/2024/07/Cheluvaraya-swamy-150x90.jpg)
Cauvery Water: ಎಚ್ಡಿಕೆ ಕಾವೇರಿ ಸಮಸ್ಯೆ ಬಗೆಹರಿಸಿದ್ರೆ, ನಾನು ಚುನಾವಣೆಗೆ ಸ್ಪರ್ಧಿಸಲ್ಲ
![HDK](https://www.udayavani.com/wp-content/uploads/2024/07/HDK-3-150x90.jpg)
Cauvery Water Problem; ಸಾಯುವುದರೊಳಗೆ ಕಾವೇರಿ ಸಮಸ್ಯೆಗೆ ಮುಕ್ತಿ: ಎಚ್ಡಿಕೆ
![1-eee](https://www.udayavani.com/wp-content/uploads/2024/07/1-eee-150x82.jpg)
Mandya; ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.