ಸ್ವಚ್ಛತೆಯಿಂದ ಕಾಯಿಲೆ ದೂರ
Team Udayavani, Jun 1, 2020, 5:40 AM IST
ಮಂಡ್ಯ: ಕೊರೊನಾದಿಂದ ಬದುಕಿಗೊಂದಿಷ್ಟು ಶಿಸ್ತು ಬಂದಿದೆ. ಅದನ್ನು ಪ್ರತಿಯೊಬ್ಬರೂ ಪಾಲಿಸುವ ಮೂಲಕ ಕೋವಿಡ್-19ನಿಂದ ದೂರ ಉಳಿ ಯುವ ಅಗತ್ಯವಿದೆ ಎಂದು ಸಾಹಿತಿ ಡಾ. ಪ್ರದೀಪ್ಕುಮಾರ್ ಹೆಬ್ರಿ ತಿಳಿಸಿದರು.
ನಗರದ ಗುರುಶ್ರೀ ಚಿತ್ರಮಂದಿರದ ಕೆಲಸಗಾರರಿಗೆ ಪ್ರತಿಭಾಂಜಲಿ ಸುಗಮ ಸಂಗೀತ ಅಕಾಡೆಮಿ ವತಿಯಿಂದ ದಿನಸಿ ಕಿಟ್ ವಿತರಿಸಿ ಮಾತನಾಡಿ, ಸ್ವಚ್ಛತೆಗೆ ಹೆಚ್ಚಿನ ಗಮನ ಹೆಚ್ಚು ಗಮನ ಹರಿಸಬೇಕೆಂಬುದು ಕೊರೊನಾ ಕಲಿಸಿಕೊಟ್ಟಿದೆ. ದೈನಂದಿನ ಕೆಲಸ ಕಾರ್ಯಗಳಲ್ಲಿ ಒಂದಷ್ಟು ಶುಭ್ರತೆಯನ್ನು ಅಳವಡಿಸಿಕೊಂಡಲ್ಲಿ ಇಂತಹ ಕಾಯಿಲೆಗಳಿಂದ ದೂರ ಉಳಿಯಬಹುದು.
ಸದಾ ಮನರಂಜನೆ ನೀಡುತ್ತಿದ್ದ ಚಿತ್ರಮಂದಿರಗಳು ಕೊರೊನಾ ಲಾಕ್ಡೌನ್ ನಿಂದಾಗಿ ಸಂಕಷ್ಟದಿಂದ ಪರಿತಪಿಸುತ್ತಿವೆ. ಚಿತ್ರಮಂದಿರಗಳಲ್ಲಿ ಕೆಲಸ ಮಾಡುವ ನೌಕ ರರು ಸಂಕಷ್ಟ ಎದುರಿಸುವಂತಾಗಿದೆ.ಇಂತ ಹ ಸಂದರ್ಭದಲ್ಲಿ ಪ್ರತಿಭಾಂಜಲಿ ಅಕಾ ಡೆಮಿ ಕಾರ್ಯಕರ್ತರು ನೊಂದವರ ನೆರವಿಗೆ ಧಾವಿಸಿರುವುದು ಶ್ಲಾಘನೀಯ ಎಂದರು.
ಡಾ. ಸತ್ಯನಾರಾಯಣ ಮಾತನಾಡಿ, ಎಲ್ಲ ಕಾಯಿಲೆಗಳಂತೆ ಕೊರೊನಾ ಒಂದು. ಹಾಗೆಯೇ ಅದರೊಂದಿಗೆ ಜೀವನ ನಡೆಸುವುದನ್ನು ಕಲಿಯಬೇಕಿದೆ. ಸ್ವಲ್ಪ ಮಟ್ಟಿಗೆ ಎಚ್ಚರವನ್ನೂ ಇಟ್ಟುಕೊಳ್ಳುವುದು ಅಗತ್ಯ. ಅಂತರ ಕಾಯ್ದುಕೊಳ್ಳಬೇಕು. ಕೈಗಳನ್ನು ಸ್ವಚ್ಛಗೊಳಿಸಿ, ಮಾಸ್ಕ್ ಧರಿಸಬೇಕು. ಆಗ ಎಂತಹ ಕಾಯಿಲೆ ಯಿಂದಲೂ ಪಾರಾಗ ಬಹುದು ಎಂದು ಹೇಳಿದರು.
ಪ್ರತಿಭಾಂಜಲಿ ಅಕಾಡೆಮಿ ಅಧ್ಯಕ್ಷ ಪ್ರತಿಭಾಂಜಲಿ ಡೇವಿಡ್, ಕಾರ್ಯಕರ್ತರಾದ ಅಮೂಲ್ಯ, ಅಂಥೋಣಿ ಜೋಸೆಫ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya Lok Sabha Constituency; ಸ್ಟಾರ್ ಚಂದ್ರು ಪರ ಇಂದು ನಟ ದರ್ಶನ್ ಪ್ರಚಾರ
ಚುನಾವಣ ಬಾಂಡ್ ವಿಶ್ವದ ಅತಿದೊಡ್ಡ ಹಗರಣ: ರಾಹುಲ್
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
Lok Sabha Elections: ಎಚ್ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್
ಡಿಕೆಶಿಗೆ ಸಿದ್ದರಾಮಯ್ಯ ಏಕೆ ಸಿಎಂ ಸ್ಥಾನ ಬಿಟ್ಟುಕೊಡಲಿಲ್ಲ: ಪ್ರತಾಪಸಿಂಹ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!