ಕಾಂಗ್ರೆಸ್ ಜೆಡಿಎಸ್‌ ಗೆ ಅಧಿಕಾರ ಕೊಟ್ಟರೂ ಉಳಿಸಿಕೊಳ್ಳಲಿಲ್ಲ : ಸಿದ್ದರಾಮಯ್ಯ ಲೇವಡಿ

ಯಡಿಯೂರಪ್ಪ ವಾಮ ಮಾರ್ಗದಿಂದ ಅಧಿಕಾರ : ಸಿದ್ದರಾಮಯ್ಯ

Team Udayavani, Jul 1, 2021, 9:21 PM IST

Siddaramaiaha Statement On BJP and JDS

ಮಂಡ್ಯ: 2018 ರ ವಿಧಾನಸಭಾ ಚುನಾವಣೆಯಲ್ಲಿ ಯಾರಿಗೂ ಬಹುಮತ ಸಿಗದ ಪರಿಣಾಮ ೮೦ ಸೀಟು ಪಡೆದಿದ್ದ ನಾವು 37 ಸೀಟು ಗೆದ್ದಿದ್ದ ಜೆಡಿಎಸ್‌ಗೆ ಅಧಿಕಾರ ತ್ಯಾಗ ಮಾಡಿದೆವು. ಆದರೆ ಆ ಅಧಿಕಾರವನ್ನು ಉಳಿಸಿಕೊಳ್ಳಲು ಜೆಡಿಎಸ್ ಪಕ್ಷಕ್ಕೆ ಆಗಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದರು.

ನಗರದ ಶಂಕರಮಠದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ನಡೆದ ಫುಡ್‌ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ನಿರಾಶ್ರಿತರಿಗೆ ಕಿಟ್ ವಿತರಿಸಿ ಮಾತನಾಡಿದ ಅವರು, ನಾವು ಆ ಚುನಾವಣೆಯಲ್ಲಿ 80 ಸೀಟು ಗೆದ್ದರೂ ಅಧಿಕಾರದ ಆಸೆಯನ್ನು ಬಿಟ್ಟು ಜೆಡಿಎಸ್‌ಗೆ ಸಿಎಂ ಖುರ್ಚಿ ತ್ಯಾಗ ಮಾಡಿದೆವು. ಆದರೆ ಅದನ್ನು ಉಳಿಸಿಕೊಳ್ಳಲಾಗದೇ ಅವರು ರಾಜೀನಾಮೆ ನೀಡಿದರು. ಇದಕ್ಕೆ ಅವರೇ ಹೊಣೆ ಎಂದರು.

ಇದನ್ನೂ ಓದಿ : ಮುಖ್ಯಮಂತ್ರಿಗಳಿಗೆ 40 ಐ.ಸಿ.ಯು ಹಾಸಿಗೆಗಳು ಹಾಗೂ  ವೈದ್ಯಕೀಯ ಉಪಕರಣಗಳ ಹಸ್ತಾಂತರ 

ಜೆಡಿಎಸ್ ಪಕ್ಷ ಕೇವಲ 25 ರಿಂದ 30 ಸೀಟು ಗೆದ್ದು ಬಿಜೆಪಿ ಅಥವಾ ಕಾಂಗ್ರೆಸ್ ಹೆಚ್ಚಿನ ಸೀಟು ಗೆದ್ದರೆ ಸರ್ಕಾರ ರಚನೆ ಮಾಡಲು ನಮ್ಮ ಸಹಾಯ ಕೇಳುತ್ತಾರೆ ಎಂದು ಕಾದು ಕುಳಿತುಕೊಳ್ಳುವ ಪಕ್ಷ. ಅವರಿಗೆ ಯಾರು ಆಶ್ರಯ ಕೊಡುತ್ತಾರೆ. ಆ ಪಕ್ಷಕ್ಕೆ ಜಿಗಿಯುವ ಅವರಿಗೆ ಮಂಡ್ಯ ಜನ ಹೆಚ್ಚಿನ ಮಹತ್ವ ಕೊಡಬಾರದು ಎಂದು ಹೇಳಿದರು.

ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ರಾಜ್ಯದ ಜನತೆಗೆ 7 ಕೆಜಿ ಅಕ್ಕಿ ಕೊಡುತ್ತಿದ್ದೆ. ಆದರೆ ಈಗಿನ ಸಿಎಂ ಯಡಿಯೂರಪ್ಪ ಅದನ್ನು ಕಿತ್ತುಕೊಂಡಿದ್ದಾರೆ. ಕೋವಿಡ್‌ನಂಥ ಸಂದರ್ಭದಲ್ಲೂ ಜನರಿಗೆ ಅಕ್ಕಿ ನೀಡದೇ ನಿಲ್ಲಿಸಿರುವುದು ಯಾವ ನ್ಯಾಯ. ನಮ್ಮ ಸರ್ಕಾರ ಮತ್ತೆ ಬಂದರೆ ಮತ್ತೆ 7 ಕೆಜಿ ಅಕ್ಕಿ ನೀಡಲಾಗುವುದು ಎಂದರು.

ಜನಸೇವೆ ಮಾಡಲು ಆಗದ ಯಡಿಯೂರಪ್ಪ ವಾಮಮಾರ್ಗದಿಂದ ಶಾಸಕರನ್ನು ಕೊಂಡುಕೊಂಡು ಅಧಿಕಾರ ನಡೆಸುತ್ತಿದ್ದಾರೆ. ಅತ್ತ ಮೋದಿ ಪ್ರಧಾನಿಯಾದ ಮೇಲೆ ದೇಶದಲ್ಲಿ ಹಣಕಾಸು ವ್ಯವಸ್ಥೆ ಹಾಳಾಗಿ ಹೋಗಿದೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿದ್ದು, ಮೋದಿ ಆರ್ಥಿಕ ನೀತಿಯಿಂದ ಜನ ಕಂಗೆಡುವಂತಾಗಿದೆ. ಬಿಜೆಪಿ ಹಾಗೂ ಜೆಡಿಎಸ್ ಬಡವರ ಪರ ಇರುವ ಪಕ್ಷಗಳಲ್ಲ. ಕಾಂಗ್ರೆಸ್ ಮಾತ್ರವೇ ಬಡವರು, ಶೋಷಿತರ ಜೊತೆ ಇರುವ ಪಕ್ಷ. ಜಾತಿ ನೋಡದೇ ಎಲ್ಲರಿಗೂ ಸಮಾನ ಸೌಲಭ್ಯ ಕಲ್ಪಿಸಿಕೊಡುವ ದೇಶದ ಏಕೈಕ ಪಕ್ಷ ಕಾಂಗ್ರೆಸ್ ಎಂದು ತಿಳಿಸಿದರು.

ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ಮಾತನಾಡಿ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿರುವುದು ನಮ್ಮ ದುರಾದೃಷ್ಟ. ಕಳೆದ ಬಾರಿ ಜನ ಪೂರ್ಣ ಪ್ರಮಾಣದ ಅಧಿಕಾರವನ್ನು ನೀಡಲಿಲ್ಲ. ಬಡವರು, ಶ್ರಮಿಕರು, ಕಾರ್ಮಿಕರ ಪರವಾಗಿ ಸರ್ಕಾರ ಬರಬೇಕೆಂದರೆ ಕಾಂಗ್ರೆಸ್ ಅನ್ನು ಬೆಂಬಲಿಸಬೇಕು ಎಂದರು.

ಮಾಜಿ ಸಚಿವರಾದ ಎಂ.ಎಸ್.ಆತ್ಮಾನಂದ, ಪಿ.ಎಂ.ನರೇಂದ್ರಸ್ವಾಮಿ, ಮಾಜಿ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ, ಕೆಪಿಸಿಸಿ ಸದಸ್ಯ ಎಂ.ಡಿ.ಜಯರಾಂ, ಕಾಂಗ್ರೆಸ್ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಪುಷ್ಪ ಅಮರ್‌ನಾಥ್, ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ಸಂಪಂಗಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಮುಖಂಡರಾದ ಗಣಿಗ ರವಿಕುಮಾರ್, ನಗರಸಭೆ ಸದಸ್ಯ ನಯೀಂ, ಸಿದ್ದರಾಮೇಗೌಡ, ಮುನಾವರ್ ಖಾನ್, ವಿಜಯ್‌ಕುಮಾರ್, ಅಂಜನಾ ಶ್ರೀಕಾಂತ್ ಉಪಸ್ಥಿತರಿದ್ದರು.

ಇದನ್ನೂ ಓದಿ : ಇಂದಿನಿಂದ ಖಾಸಗಿ ಬಸ್ ಸಂಚಾರ ಆರಂಭ – ಡ್ರೈವರ್ , ಕಂಡಕ್ಟರ್, ಮಾಲಕರ ಪ್ರತಿಕ್ರಿಯೆ ಕೇಳಿ

ಟಾಪ್ ನ್ಯೂಸ್

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.