ಸಾರ್ವಜನಿಕ ಗ್ರಂಥಾಲಯಕ್ಕೆ ಒತ್ತಾಯಿಸಿ ಸಹಿ ಸಂಗ್ರಹ ಚಳವಳಿ
Team Udayavani, Dec 13, 2019, 2:38 PM IST
ಮಳವಳ್ಳಿ: ಪಟ್ಟಣದಲ್ಲಿ ಸುಸಜ್ಜಿತ ಸಾರ್ವಜನಿಕ ಗ್ರಂಥಾಲಯಕ್ಕೆ ಒತ್ತಾಯಿಸಿ ಸಹಿ ಸಂಗ್ರಹ ಚಳವಳಿ ಕಾರ್ಯಕ್ರಮ ಸಾರಿಗೆ ಬಸ್ ನಿಲ್ದಾಣದ ಆವರಣದಲ್ಲಿ ನಡೆಯಿತು.
ಪ್ರಾಂತ ರೈತ ಸಂಘದ ತಾಲೂಕು ಅಧ್ಯಕ್ಷ ಭರತ್ರಾಜ್ ಮಾತನಾಡಿ, ಮಳವಳ್ಳಿ ತಾಲೂಕು ತನ್ನದೇ ಆದ ಇತಿಹಾಸ ಹೊಂದಿದೆ. ಶ್ರೀ ಮಹದೇಶ್ವರ, ಶ್ರೀ ಮಂಟೇಸ್ವಾಮಿ ಶ್ರೀಸಿದ್ದಪ್ಪಾಜಿಯವರು ನಡೆದಾಡಿರುವ ಸ್ಥಳವಾಗಿದೆ. ಹಲವಾರು ಕ್ಷೇತ್ರಗಳಲ್ಲಿ ಗಣನೀಯವಾಗಿ ಸೇವೆ ಸಲ್ಲಿಸಿ ಹೆಸರು ಮಾಡಿರುವ ತಾಲೂಕಿನಲ್ಲಿ ಸುಸಜ್ಜಿತ ಗ್ರಂಥಾಲಯ ಇಲ್ಲದಿರುವುದು ವಿಷಾದನೀಯ ಎಂದು ಹೇಳಿದರು.
ಈಗಾಗಲೇ ಇರುವ ಗ್ರಂಥಾಲಯದಲ್ಲಿ ವಿದ್ಯುತ್ ಸೇರಿದಂತೆ ಯಾವುದೇ ಮೂಲ ಸೌಲಭ್ಯಗಳಿಲ್ಲ.ಯಾವುದೇ ಇತಿಹಾಸಕ್ಕೆ ಸಂಬಂಧಿಸಿದ ಪುಸ್ತಕಗಳಿಲ್ಲ, ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ಈ ಬಗ್ಗೆ ಕ್ರಮ ಕೈಗೊಂಡು ಕೂಡಲೇ ಸುಸಜ್ಜಿತ ಗ್ರಂಥಾಲಯ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಇದೇ ಸಂದರ್ಭದಲ್ಲಿ ರೈತ ಸಂಘದ ಮುಖಂಡರಾದ ಕೆಂಪಯ್ಯ, ಬಸಪ್ಪ ನೆಲಮಾಕನಹಳ್ಳಿ, ಮ.ಸಿ. ನಾರಾಯಣ್, ಮೆಹಭೂಬ್ ಪಾಷಾ, ಜಯರಾಜು ಮೊದಲಾದವರು ಸಹಿ ಹಾಕಿ ಸಹಿ ಸಂಗ್ರಹ ಚಳವಳಿಗೆ ಬೆಂಬಲ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
Mandya Lok Sabha Constituency; ಸ್ಟಾರ್ ಚಂದ್ರು ಪರ ಇಂದು ನಟ ದರ್ಶನ್ ಪ್ರಚಾರ
ಚುನಾವಣ ಬಾಂಡ್ ವಿಶ್ವದ ಅತಿದೊಡ್ಡ ಹಗರಣ: ರಾಹುಲ್
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ